ಉರುಳಿ ಅರಿವಿನ ಮೋರಿಯಲ್ಲಿ

ಉರುಳಿ ಅರಿವಿನ ಮೋರಿಯಲ್ಲಿ
ನರಳುತ್ತಿರುವೆ
ಇಲ್ಲಿ ನೆಮ್ಮದಿ ಎಲ್ಲಿ ?
ಕೊಳೆತು ನಾರುತ್ತಿರುದ ಹಳೆಯ ಭೂತ ;
ಅದರ ಮೇಲೇ ಮೊಳೆತ ಹೊಸ ಕನಸುಗಳ ತುಡಿತ,
ಎರಡು ಗಡಿಗಳ ನಡುವೆ
ಒಡೆದು ಬಿದ್ದಿದೆ ರೂಪ.
ಹೊಕ್ಕುಳಿನ ಹುರಿ ಕಡಿದು
ಹಳಿ ಬಿಟ್ಟು ಹೊರನಡೆದು
ಪ್ರತ್ಯೇಕತೆಯ ಸುಳ್ಳ ಕೋಟಿ ಕೊರಳುಗಳಲ್ಲಿ
ಕೂಗಿ ದಣಿದಿದೆ ಪಾಪ

ಚಿತ್ತ ಹೊತ್ತ ಮನುಷ್ಯ
ಚಿತ್ತವಿಲ್ಲದ ನೆಲ,
ಬೆಟ್ಟ ಮರ ಗಿಡ ಕಲ್ಲು,
ಹುಲ್ಲು ಪರಿಮಳ ಜಲ ;
ಯಾರು ಉತ್ತಮ, ಯಾರು ಅಧಮ, ಏತಕೆ, ಹೇಗೆ ?
ಯಾರು ಪಡೆಯುತ್ತಾರೆ ಯಾರಿಂದ, ಏತಕ್ಕೆ ?
ಹೇಗೆ ದುಡಿಸುತ್ತಾರೆ, ದುಡಿಸಿ ಗುಡಿಸುತ್ತಾರೆ
ಯಾರು ಯಾರನ್ನೇಕೆ ಜೀತಕ್ಕೆ ?

ಯೋಚಿಸಬರದ ಅಶೋಕ
ಋತು ತಪ್ಪದೆ ಸುರಿವ ಚಿಗುರು,
ಯೋಚಿಸಲಾಗದ ಆಲದ ಅರ್ಧ ಎಕರೆ ನೆರಳು
ಯೋಚಿಸಲಾಗದ ಮಾವು,
ಆಲೋಚಿಸಲಾಗದ ಹೂವು,
ಯೋಚಿಸುವ ಮನುಷ್ಯನನ್ನೇ
ಸಾಕುವ ಪರಿಯನ್ನು
ಆಲೋಚಿಸಬೇಕು ನಾವು

ಚಿತ್ತವೇ ಶತ್ರುವೇ ನಮಗೆ ? ಸೃಷ್ಟಿಯ ಹಡೆದ
ಮೂಲಕ್ಕೆ ಮಿಥ್ಯವೇ ?
ಅದಕ್ಕೂ ಮೀರಿದ ಶಕ್ತಿ ಜಡಕ್ಕೆ ಸಲೀಸು ದಕ್ಕಿ
ಸತ್ಯ ಪ್ರತ್ಯಕ್ಷವೆ ಅದಕ್ಕೆ ?
ಕಡಿಸಿಕೊಳ್ಳುವ ನೋವು ಕಡಿಯುವ ಜೀವಕ್ಕಿರದ
ಸ್ಥಿತಿ ಮರ್ತ್ಯಮಾತ್ರವೆ ?
ಮೂಲಪ್ರಜ್ಞೆಯ ಬಿಂಬ
ಕೋಟಿ ಚೂರುಗಳಾಗಿ
ಹಿರಿಕಡಲು ಹನಿಹನಿಗಳಾಗಿ ಒಡೆದ ವಿಕಾರ
ಗುರುತಿಸಿದರೂ ನಿಜವ ರುಚಿಯಲ್ಲಿ, ಹನಿಗೆಲ್ಲಿ
ಹಡಗುಗಳ ತೇಲಿಸುವ ಅಧಿಕಾರ ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗುವಿತ್ತು ಹೂವಂತ ಮಾತಿತ್ತು
Next post ನಂಬಿಕೆಯೇ ದೇವರು

ಸಣ್ಣ ಕತೆ

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

cheap jordans|wholesale air max|wholesale jordans|wholesale jewelry|wholesale jerseys