ಯಾರು ಬಂದರೆ ತಾನೆ ಏನು ?

ನಿನಗೆ ಅರವತ್ತಾಯಿತಾ ಎಂದದ್ದು
‘ಬರೋ ಹೊತ್ತಾಯಿತಾ’ ಎಂದು ಕೇಳಿಸಿ
ಸಣ್ಣಗೆ ಬೆಚ್ಚಿದೆ ಒಳಗೆ,
ಯಾರು ಕೇಳಿದ್ದು ಹಾಗೆ ?
ಜೊತೆಗಿದ್ದ ಅಳಿಯನ ? ಮಗನ ? ಅಥವಾ
ಸಿನಿಮಾ ರೇಸು ಕಾರು ಬಾರು ಎಂದು
ಸದಾ ಜೊತೆಗೆ ಪೋಲಿ ಅಲೆಯುವ
ಅವನ ಗೆಳೆಯನ ?
ಏನು ಕೇಳಿದರೊ ?
ಈ ಬೆಚ್ಚನೆ ಆರೋಗ್ಯ ಕಂಡು
ಮೆಚ್ಚಿಗೆ ಹುಟ್ಟಿ ಕೇಳಿದರೊ ?
ಯಾರಿಗೆ ಗೊತ್ತು
ಹುಚ್ಚು ಜನ ಅಸೂಯೆಪಟ್ಟೇ ಆಡಿದರೊ ?

ಯಾರು ಬಂದಾರೆಂದು ಇದ್ದೀತು ?
ಯಾರು ಬಂದರು ತಾನೆ ಏನು ದಿಗಿಲು ?
ಬಂದವರು ತಂದ ಋಣದಲ್ಲಿ ತೂಗಾಡುತಿವೆ
ನೂರು ಉರುಳಿನ ನೆರಳು ;
ಕನಸು ಕಲಿಸಿದ ಅಮ್ಮ
ಕಂಡು ತೀರಿದ ಅಪ್ಪ
ಕೈ ಹಿಡಿದ ಕಣ್ಮಣಿಯೊ
ತನ್ನ ಲೆಕ್ಕಗಳಲ್ಲಿ ನನ್ನ ಎತ್ತರ ಅಳೆದು
ನಟ್ಟನಡು ಚೌಕದಲಿ ಹರಾಜು ಹಾಕಿದ ಮಾಯೆ
ನುಂಗಲಾಗದೆ ಸುಟ್ಟ ಬಿಸಿ ಬಿಸೀ ತುಪ್ಪ
ಮಿಠಾಯಿ ಮಕ್ಕಳು, ಜೊತೆಗೆ ಕಠಾರಿ ನಂಟರು
ವೃತ್ತಿ ಹವ್ಯಾಸ ನೆರೆಹೊರೆಗೆ ಹುಟ್ಟಿದ ಎಷ್ಟೋ
ಪಟಾಕಿ ಗೆಳೆಯರು,

ಬೆಳಗಿನ ತುಷಾರ ಸರಿದು
ಕೆರಳಿದ ಮಧ್ಯಾಹ್ನ ಬೆಳೆದು
ಕನಸಿದ್ದ ಮುಖದಲ್ಲಿ ಸತ್ಯದ
ಕಠೋರ ದಾಡೆಗಳು !

ತುಂಬುತಿಂಗಳ ಬದುಕು
ಬರಿ ತಂಗಳು ಈಗ.
ನಿನ್ನೆ ಮೊನ್ನೆಯ, ಇವತ್ತು ನಿನ್ನೆಯ
ನಾಳೆ ಇಂದಿನ ಕಾರ್ಬನ್ ಕಾಪಿ.
ತರ್ಕಕ್ಕೆ ಗಣಿತಕ್ಕೆ ಅಂಕೆಗಳ ಮಣಿತಕ್ಕೆ ಸಿಕ್ಕು
ಬದುಕಲ್ಲಿ ಸುಖ ಸಿಗದ ಪಾಪಿ.
ಇದೆಲ್ಲ ಮೀಟಿ
ತಾರೆಗಳನ್ನೇ ದಾಟಿ
ನಿಂತ ಅನಂತದ ಹನಿ ಹನಿ ಆಮಂತ್ರಣ.
ಕಳ್ಳ ಹೆಜ್ಜೆಯನಿಟ್ಟು ಬಂದ ಕಾಮದ ಬೆಕ್ಕು
ಕತ್ತಲಲ್ಲಿ ತಿಂದು ಬಿಕ್ಕಿದ ಬದುಕಿನ
ಮೂಳೆಯವಶೇಷಕ್ಕೆ
ಅನಿರೀಕ್ಷಿತ ಅದ್ಭುತದ ಸಿಂಚನ.

ಹೀಗಿರುತ್ತ
ಯಾರು ಬಂದರೆ ತಾನೆ ಏನಂತೆ ?
ಬಾ ಎಂದು ಕರೆದರೂ ಇಲ್ಲ ಚಿಂತೆ.
ಬಂದು ಮುಟ್ಟಲಿ ನನ್ನ,
ಮುಟ್ಟಿ ಬಿಡಿಸಲಿ ಸಣ್ಣ
ಪಂಜರದಿ ಸೆರೆಸಿಕ್ಕ
ಗುಟ್ಟುಗಳ ಸಂತೆ.
ಹಕ್ಕಿ ಹಾರಲಿಬಿಡಿ ಬಾನಿನಲ್ಲಿ
ಸುಖವುಕ್ಕಿ ಈಜಲಿ ಬೆಳಕುಗಡಲಿನಲ್ಲಿ
ದೂರ ಮಣಿಯಾಗುತ್ತ ಸಮೆದು ಕಣವಾಗುತ್ತ
ತಾನೆ ಬಾನಾಗುತ್ತ ಕಾಣದಲ್ಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಳಿಗೆಬಟ್ಟಲ ತಿರುವುಗಳಲ್ಲಿ – ೨೯
Next post ತುಳುನಾಡಿನ ಸಾಹಿತ್ಯ ಸಿರಿ

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

cheap jordans|wholesale air max|wholesale jordans|wholesale jewelry|wholesale jerseys