ರಥದ ಕಥೆ

ಅಂದು ಇಂದು ಎಂದಿಗೂ
ಲೋಕದ ಥರ ಒಂದೇ
ಅವತಾರಗಳಳಿದರೂ
ಕ್ರಿಸ್ತ ಬುದ್ಧ ಎಳೆದರೂ
ಒಂದೆ ಒಂದು ಇಂಚೂ ರಥ
ಸರಿಯಲಿಲ್ಲ ಮುಂದೆ.

ಅಂಥ ಇಂಥ ರಥವೆ ? ಕೊಂಚ
ಕೊರಕಲತ್ತ ಜಾರಿ
ತಪ್ಪಿತಷ್ಟೆ ದಾರಿ,
ಪಥಕೆಳೆಯಲು ಬಂದ ಧರ್ಮ ಅಲ್ಲಲ್ಲೇ ಗೋರಿ!
ಒಳಗೆ ಕುಳಿತ ದೈವದೆಲ್ಲ
ಮಹಿಮೆಯ ಅಳೆದವರೆ ಇಲ್ಲ
ರಾಮಾಯಣ ಭಾರತ ಸಹ
ನಿವಾಳಿಸಿದ ಕಾಯಿ,
ಕೃತ ತ್ರೇತರ ತಾತ, ಕಲಿಯ
ನುಡಿತಕೆ ಇದು ಬಾಯಿ

ಹಣೆಯ ಮೇಲೆ ಸಿಕಂದರರ
ಹೆಸರುಗಳನು ಬರೆಸಿದೆ,
ಬಡವರನ್ನು ಅಡಿಗೆ ಹಾಕಿ
ಕಷ್ಟದ ಕಥೆ ಹರಿಸಿದೆ,
ಮೈಯ ಸುತ್ತ ಧ್ವಜದ ಬದಲು
ಈಟಿಗಳನೆ ಸಿಗಿಸಿದೆ,
ಗುಡುಗಿನೆದೆಯೆ ನಡುಗುವಂತೆ
ಢರ್ರೆನ್ನುತ ತೇಗಿದೆ.

ಲೋಭವೆನುವ ದೇವರ
ಮೆರೆಸುತ್ತಿದೆ ಬಯಕೆಯೆಂಬ
ದೀಪ ಹಚ್ಚಿ ಸಾವಿರ,
ಪ್ರಜ್ವಲಿಸಿದೆ ಬೆಳಗಿ ಮುಖ
ಉಜ್ವಲಿಸಿದೆ ಭಕ್ತಿ
ಉಗ್ಘಡಿಸಿದೆ ಭಕ್ತಗಣ
ಉಕ್ಕುತ್ತಿದೆ ಶಕ್ತಿ

ಬೆಳಗುತ್ತಿದೆ ಬೆಂಕಿ ಹತ್ತಿ
ಗುಡಿಸಲುರಿಯ ದೀಪ
ಕಾರ್ಖಾನೆಯ ಚಿಮಣಿ ತೂರಿ
ಚೀರಿ ಬರುವ ಧೂಪ
ನೈವೇದ್ಯಕೆ ಬಡಬಗ್ಗರ
ಮಕ್ಕಳ ತಲೆಕಾಯಿ
ಬೊಬ್ಬಿರಿದಿವೆ ಭೇರಿ ನುಡಿಸಿ
ಧನಿಕರ ಮನೆ ನಾಯಿ

ದೈವಮಹಿಮೆ ಕಂಡುಕೊಂಡ
ಧನಿಕವೃಂದ
ಶಾಸನಗಳ ಬರೆಸಿಕೊಟ್ಟ
ದತ್ತಿಗಳಿವೆ ಸಾಕ್ಷಿಗೆ
ಅಂಗಭೋಗ ರಂಗಭೋಗ
ದೇವದಾಸಿ ಪೂಜೆಗೆ
ಬಿಟ್ಟ ಬಿಟ್ಟ ಹೊಲಗಳಿವೆ
ಅದ ಕಾಯುವ ಕುಲಗಳಿವೆ
ಖಾಸಾ ಭೇಟಿ ಕೊಡುವುದಿದೆ
ಪೀಠಪತಿಗಳು
ಮಹಾಮಂತ್ರಿ, ಬರೀ ಮಂತ್ರಿ
ಬೆನ್ನ ಹಿಂದೆ ಇರುವ ತಂತ್ರಿ
ಕರಿಲಕ್ಷ್ಮೀವರಪಾತ್ರ ಕರೋಡು ಪತಿಗಳು.

ಯಾಜ್ಞವಲ್ಕ್ಯ ಪೈಗಂಬರ
ಯಾರು ಯಾರೋ ಬಂದರು
ವೇದ ಖುರಾನ್ ಸನ್ನೆಗೋಲು
ಅಡಿಗೆ ಕೊಟ್ಟು ಎಳೆದರು
ಜಗ್ಗಲಿಲ್ಲ, ಕಡೆಗೆ ಬಂದ
ಹಿಗ್ಗು ನಗೆಯ ಗಾಂಧಿ
(ಮಂಗಳಗಳ ನಾಂದಿ)
ಎಳೆದ ನೋಡಿ ಒಂದೇ ಸಲ
ಉಘೇ ಉಘೇ ಮಹಾಬಲ
ಸರಿದ ಭರಕೆ ಜರುಗಿ ಚಕ್ರ
ಹೂತೆ ಹೋಯ್ತು ಪೂರ್ತಿ
ಓಂ ಶಾಂತಿಃ: ಶಾಂತಿಃ ಶಾಂತಿಃ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಳಿಗೆಬಟ್ಟಲ ತಿರುವುಗಳಲ್ಲಿ – ೩೪
Next post ಆರ್ಥಿಕ ನಾಯಕತ್ವದ ಅಪಾಯ

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

cheap jordans|wholesale air max|wholesale jordans|wholesale jewelry|wholesale jerseys