Home / ಕವನ / ಕವಿತೆ / ರಥದ ಕಥೆ

ರಥದ ಕಥೆ

ಅಂದು ಇಂದು ಎಂದಿಗೂ
ಲೋಕದ ಥರ ಒಂದೇ
ಅವತಾರಗಳಳಿದರೂ
ಕ್ರಿಸ್ತ ಬುದ್ಧ ಎಳೆದರೂ
ಒಂದೆ ಒಂದು ಇಂಚೂ ರಥ
ಸರಿಯಲಿಲ್ಲ ಮುಂದೆ.

ಅಂಥ ಇಂಥ ರಥವೆ ? ಕೊಂಚ
ಕೊರಕಲತ್ತ ಜಾರಿ
ತಪ್ಪಿತಷ್ಟೆ ದಾರಿ,
ಪಥಕೆಳೆಯಲು ಬಂದ ಧರ್ಮ ಅಲ್ಲಲ್ಲೇ ಗೋರಿ!
ಒಳಗೆ ಕುಳಿತ ದೈವದೆಲ್ಲ
ಮಹಿಮೆಯ ಅಳೆದವರೆ ಇಲ್ಲ
ರಾಮಾಯಣ ಭಾರತ ಸಹ
ನಿವಾಳಿಸಿದ ಕಾಯಿ,
ಕೃತ ತ್ರೇತರ ತಾತ, ಕಲಿಯ
ನುಡಿತಕೆ ಇದು ಬಾಯಿ

ಹಣೆಯ ಮೇಲೆ ಸಿಕಂದರರ
ಹೆಸರುಗಳನು ಬರೆಸಿದೆ,
ಬಡವರನ್ನು ಅಡಿಗೆ ಹಾಕಿ
ಕಷ್ಟದ ಕಥೆ ಹರಿಸಿದೆ,
ಮೈಯ ಸುತ್ತ ಧ್ವಜದ ಬದಲು
ಈಟಿಗಳನೆ ಸಿಗಿಸಿದೆ,
ಗುಡುಗಿನೆದೆಯೆ ನಡುಗುವಂತೆ
ಢರ್ರೆನ್ನುತ ತೇಗಿದೆ.

ಲೋಭವೆನುವ ದೇವರ
ಮೆರೆಸುತ್ತಿದೆ ಬಯಕೆಯೆಂಬ
ದೀಪ ಹಚ್ಚಿ ಸಾವಿರ,
ಪ್ರಜ್ವಲಿಸಿದೆ ಬೆಳಗಿ ಮುಖ
ಉಜ್ವಲಿಸಿದೆ ಭಕ್ತಿ
ಉಗ್ಘಡಿಸಿದೆ ಭಕ್ತಗಣ
ಉಕ್ಕುತ್ತಿದೆ ಶಕ್ತಿ

ಬೆಳಗುತ್ತಿದೆ ಬೆಂಕಿ ಹತ್ತಿ
ಗುಡಿಸಲುರಿಯ ದೀಪ
ಕಾರ್ಖಾನೆಯ ಚಿಮಣಿ ತೂರಿ
ಚೀರಿ ಬರುವ ಧೂಪ
ನೈವೇದ್ಯಕೆ ಬಡಬಗ್ಗರ
ಮಕ್ಕಳ ತಲೆಕಾಯಿ
ಬೊಬ್ಬಿರಿದಿವೆ ಭೇರಿ ನುಡಿಸಿ
ಧನಿಕರ ಮನೆ ನಾಯಿ

ದೈವಮಹಿಮೆ ಕಂಡುಕೊಂಡ
ಧನಿಕವೃಂದ
ಶಾಸನಗಳ ಬರೆಸಿಕೊಟ್ಟ
ದತ್ತಿಗಳಿವೆ ಸಾಕ್ಷಿಗೆ
ಅಂಗಭೋಗ ರಂಗಭೋಗ
ದೇವದಾಸಿ ಪೂಜೆಗೆ
ಬಿಟ್ಟ ಬಿಟ್ಟ ಹೊಲಗಳಿವೆ
ಅದ ಕಾಯುವ ಕುಲಗಳಿವೆ
ಖಾಸಾ ಭೇಟಿ ಕೊಡುವುದಿದೆ
ಪೀಠಪತಿಗಳು
ಮಹಾಮಂತ್ರಿ, ಬರೀ ಮಂತ್ರಿ
ಬೆನ್ನ ಹಿಂದೆ ಇರುವ ತಂತ್ರಿ
ಕರಿಲಕ್ಷ್ಮೀವರಪಾತ್ರ ಕರೋಡು ಪತಿಗಳು.

ಯಾಜ್ಞವಲ್ಕ್ಯ ಪೈಗಂಬರ
ಯಾರು ಯಾರೋ ಬಂದರು
ವೇದ ಖುರಾನ್ ಸನ್ನೆಗೋಲು
ಅಡಿಗೆ ಕೊಟ್ಟು ಎಳೆದರು
ಜಗ್ಗಲಿಲ್ಲ, ಕಡೆಗೆ ಬಂದ
ಹಿಗ್ಗು ನಗೆಯ ಗಾಂಧಿ
(ಮಂಗಳಗಳ ನಾಂದಿ)
ಎಳೆದ ನೋಡಿ ಒಂದೇ ಸಲ
ಉಘೇ ಉಘೇ ಮಹಾಬಲ
ಸರಿದ ಭರಕೆ ಜರುಗಿ ಚಕ್ರ
ಹೂತೆ ಹೋಯ್ತು ಪೂರ್ತಿ
ಓಂ ಶಾಂತಿಃ: ಶಾಂತಿಃ ಶಾಂತಿಃ
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...