Home / ಕವನ / ಕವಿತೆ / ಶರೀಫಜ್ಜನಿಗೆ

ಶರೀಫಜ್ಜನಿಗೆ

ಒಂದು ಧರ್ಮಕ್ಕೆ ಮೊಳೆತು
ಇನ್ನೊಂದರಲಿ ಫಲಿತು
ಸಾರ ಒಂದೇ ಎಂದು ಹಾಡಿದಾತ;
ಹನಿಸೇರಿ ಹೊಳೆಯಾಗಿ
ಗುರಿ ಸೇರಿ ಕಡಲಾಗಿ
ನಭವೇರಿ ಮುಗಿಲಾಗಿ ಆಡಿದಾತ;
ಹತ್ತು ವನಗಳ ಸುತ್ತಿ
ಹೂ ಹೂವನೂ ಮುತ್ತಿ
ಒಂದೆ ಜೇನಿನ ಹುಟ್ಟು ಕಟ್ಟಿದಾತ;
ಎಲ್ಲಿ ಹೇಳೋ ತಾತ
ಹಿಂದೆ ಯಾ ಅವಧೂತ
ಸಾಧಿಸಿದ ನಿನ್ನಂತೆ ಧರ್ಮವನ್ನು
ಕಾವ್ಯದಲಿ ಕೆಡೆದ ಆ ಮರ್ಮವನ್ನು ?

ಸೃಷ್ಟಿ ಮರೆಸಿಟ್ಟಿರುವ ಗುಟ್ಟುಗಳನು
ಸಪ್ತಸ್ವರದಾಚೆಯಾ ಮಟ್ಟುಗಳನು
ನಿನ್ನ ನುಡಿಯಲ್ಲಿಟ್ಟೆ
ಭಾಷೆಗರ್ಥವ ಕೊಟ್ಟೆ
ಹಾಡು ಮಾಡಿದೆ ನಿನ್ನ ವ್ಯಥೆಗಳನ್ನು
ಹೇಳು ಹೇಳು ಶರೀಫ
ಹಿಂದೆ ಯಾವ ಖಲೀಫ
ಏರಿದ್ದ ಈ ಹೊನ್ನಿನಟ್ಟವನ್ನು,
ಮಣಿಸಿದ್ದ ಮಾತುಗಳ ಬೆಟ್ಟವನ್ನು ?

ಏನು ಜೀವನಧರ್ಮ
ಏನು ಸೃಷ್ಟಿಯ ಮರ್ಮ
ಏನು ಎಲ್ಲಿ ಯಾಕೆ ತಾಕಿದವನು;
ಬೆಟ್ಟ ಬೆಟ್ಟವ ಕುಲುಕಿ
ಸಪ್ತಸಾಗರ ಕಲಕಿ
ಸೃಷ್ಟಿಮೂಲವ ಹುಡುಕಿ ಜೀಕಿದವನು;
ಹೇಳು ಹೇಳು ಶರೀಫ
ಬೇರೊಬ್ಬ ಯಾರವನು
ನಿನ್ನಂತೆ ನಡೆನುಡಿಯ ಕಾಡಿದವನು?
ತೀರದಾಚೆಯ ತಾರೆ ಕೂಡಿದವನು?

ಅನ್ನ ನೆಲ ಮಾತು ಮತ
ಎಲ್ಲ ಹೊರತಾದರೂ
ಪ್ರೀತಿಯಲಿ ಅವನೆಲ್ಲ ಕಲೆಸಿಬಿಟ್ಟೆ;
ಬಣ್ಣ ಏಳಾದರೂ
ಒಂದೆ ಕಾಮನಬಿಲ್ಲು
ಚಂದವಾದಂತೆ ನೀ ಬಾಳಿಬಿಟ್ಟೆ;
ಗಡಿಮೀರಿ ಮಡಿ ಮೀರಿ
ಬಾನಿನಲಿ ಕುಡಿಯೂರಿ
ಗಾಳಿಯಲಿ ಬಾಳಪಟ ತೇಲಿಬಿಟ್ಟೆ;
ಹೇಳು ಹೇಳು ಶರೀಫ
ಯಾವ ಭಾವಕಲಾಪ
ಇಂಥ ಬಿಡುಗಡೆ ಕೊಟ್ಟ ಸೂತ್ರವಾಯ್ತು – ಹೇಗೆ
ಬರಿ ನೀರು ಪರಿಶುದ್ಧ ತೀರ್ಥವಾಯ್ತು?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...