Home / ಕವನ / ಕವಿತೆ / ಬೆಂಗಳೂರು

ಬೆಂಗಳೂರು

ಇದು ಚಕ್ರವ್ಯೂಹ
ಒಳಗೆ ಬರಬಹುದು
ಒಮ್ಮೆ ಬಂದಿರೊ ಒಳಗೆ
ಹಿಂದೆ ಹೋಗುವ ದಾರಿ ಬಂದಾದ ಹಾಗೆಯೇ !
ಕರೆತಂದ ದೆವ್ವಗಳು ಕೈಬಿಟ್ಟ ಹಾಗೆಯೇ!
ಸ್ವಾಮಿ, ಇದು ನಗರ;
ನಿತ್ಯ ಜೀವವನ್ನೆಲ್ಲ ನುಂಗಿ ಸೊಕ್ಕಿರುವ
ಹೆಬ್ಬಾವಿನಂಥ ಜಡ ಅಜಗರ:
ದಿಕ್ಕು ದಿಕ್ಕಿನಿಂದಲೂ ಉಕ್ಕಿ ಧಾವಿಸುತ್ತಿರುವ
ಲಕ್ಷವಾಹಿನಿ ಮಲೆತ ಜನಸಾಗರ;
ಏನೆಲ್ಲ ಭಾಷೆ, ಎಷ್ಟೆಲ್ಲ ಆಸೆ
ನೂರೆಂಟು ರುಚಿ ಕಲಸುಮೇಲೋಗರ,
ಬಂದವರಿಗೆಲ್ಲ ಇಲ್ಲಿ ಭವಿಷ್ಯ ಇರದಿದ್ದರೂ
ಆಟಬಲ್ಲ ಖಡೀಮ ಮಾತ್ರ ಹಾಕಿಯೆಬಿಡುವ
ಕೇಳಿದ ಗರ!

ಎಲ್ಲ ಸಮೃದ್ಧ ಇಲ್ಲಿ.
ಕೆಲವು ಜಾಗಗಳಲ್ಲಿ
ನೀರಿಲ್ಲದಿದ್ದರೂ ನಲ್ಲಿಯಲ್ಲಿ
ಗಲ್ಲಿ ಗಲ್ಲಿಗಳಲ್ಲಿ
ಹೆಜ್ಜೆ ಹೆಜ್ಜೆಗು ತೀರ್ಥ
ಅಂಗಡಿಯ ತುಂಬ ಬಾಟಲಲ್ಲಿ !
ಎಣ್ಣೆ ಇದೆ ಕಾಳಲ್ಲಿ
ಬೆಣ್ಣೆ ಹಳೆಕಥೆಯಲ್ಲಿ
ಅಕ್ಕಿ ಸಕ್ಕರೆ ಬೇಳೆ ಕೆಲಸವಿಲ್ಲದೆ ಪಾಪ
ಗೊರಕೆ ಹೊಡೆಯುತ್ತಿವೆ ನೆಲಮಾಳಿಗೆಯ ಒಳಗೆ
ಕತ್ತಲಲ್ಲಿ!

ಓಡುವುದು ಇಲ್ಲಿ, ಎಲ್ಲೆಂದರಲ್ಲಿ
ಸಿಟೀ ಬಸ್ಸು
ಕೂತುಕೊಂಡೋ, ಇಲ್ಲ ನಿಂತುಕೊಂಡೋ
ಅಥವಾ ಪುಟ್‌ಬೋರ್ಡ್‌ಮೇಲೆ ಮುಂಗಾಲನ್ನೂರಿ
ಹವೆಯಲ್ಲಿ ಮೈತೂರಿ ತೂಗಿಕೊಂಡೋ
ಹೇಗೆ ಬೇಕಾದರೂ ಹೋಗಬಹುದು
ಅದೃಷ್ಟವಿದ್ದರೆ ಸ್ಟಾಪು ಸೇರಬಹುದು!

ಹಿಂದೆ ಒಂದಾನೊಂದು ಕಾಲದಲ್ಲಿ
ಇತ್ತಂತೆ ಪೂರ ಕನ್ನಡವೆ ಇಲ್ಲಿ
ಈಗ ಮಾತ್ರ ಎಲ್ಲೋ ಸಂದಿಗೊಂದಿಗಳಲ್ಲಿ
ಮಿಡುಕುತಿದೆ ಜೀವ ಬಾಲದಲ್ಲಿ
ಅಕ್ಕಪಕ್ಕದ ಮನೆಯ ಸೋದರರು ದಯಮಾಡಿ
ಮೇಲೆಬ್ಬಿಸಿರುವ ಗಾಳಿಯಲ್ಲಿ
ಹೊಯ್ದಾಡುತ್ತಿದೆ ಪುಟ್ಟ ಕನ್ನಡದ ಹಣತೆ
ಗುಡ್‌ಬೈ ಹೇಳುವ ಧಾಟಿಯಲ್ಲಿ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...