ಬೆಂಗಳೂರು

ಇದು ಚಕ್ರವ್ಯೂಹ
ಒಳಗೆ ಬರಬಹುದು
ಒಮ್ಮೆ ಬಂದಿರೊ ಒಳಗೆ
ಹಿಂದೆ ಹೋಗುವ ದಾರಿ ಬಂದಾದ ಹಾಗೆಯೇ !
ಕರೆತಂದ ದೆವ್ವಗಳು ಕೈಬಿಟ್ಟ ಹಾಗೆಯೇ!
ಸ್ವಾಮಿ, ಇದು ನಗರ;
ನಿತ್ಯ ಜೀವವನ್ನೆಲ್ಲ ನುಂಗಿ ಸೊಕ್ಕಿರುವ
ಹೆಬ್ಬಾವಿನಂಥ ಜಡ ಅಜಗರ:
ದಿಕ್ಕು ದಿಕ್ಕಿನಿಂದಲೂ ಉಕ್ಕಿ ಧಾವಿಸುತ್ತಿರುವ
ಲಕ್ಷವಾಹಿನಿ ಮಲೆತ ಜನಸಾಗರ;
ಏನೆಲ್ಲ ಭಾಷೆ, ಎಷ್ಟೆಲ್ಲ ಆಸೆ
ನೂರೆಂಟು ರುಚಿ ಕಲಸುಮೇಲೋಗರ,
ಬಂದವರಿಗೆಲ್ಲ ಇಲ್ಲಿ ಭವಿಷ್ಯ ಇರದಿದ್ದರೂ
ಆಟಬಲ್ಲ ಖಡೀಮ ಮಾತ್ರ ಹಾಕಿಯೆಬಿಡುವ
ಕೇಳಿದ ಗರ!

ಎಲ್ಲ ಸಮೃದ್ಧ ಇಲ್ಲಿ.
ಕೆಲವು ಜಾಗಗಳಲ್ಲಿ
ನೀರಿಲ್ಲದಿದ್ದರೂ ನಲ್ಲಿಯಲ್ಲಿ
ಗಲ್ಲಿ ಗಲ್ಲಿಗಳಲ್ಲಿ
ಹೆಜ್ಜೆ ಹೆಜ್ಜೆಗು ತೀರ್ಥ
ಅಂಗಡಿಯ ತುಂಬ ಬಾಟಲಲ್ಲಿ !
ಎಣ್ಣೆ ಇದೆ ಕಾಳಲ್ಲಿ
ಬೆಣ್ಣೆ ಹಳೆಕಥೆಯಲ್ಲಿ
ಅಕ್ಕಿ ಸಕ್ಕರೆ ಬೇಳೆ ಕೆಲಸವಿಲ್ಲದೆ ಪಾಪ
ಗೊರಕೆ ಹೊಡೆಯುತ್ತಿವೆ ನೆಲಮಾಳಿಗೆಯ ಒಳಗೆ
ಕತ್ತಲಲ್ಲಿ!

ಓಡುವುದು ಇಲ್ಲಿ, ಎಲ್ಲೆಂದರಲ್ಲಿ
ಸಿಟೀ ಬಸ್ಸು
ಕೂತುಕೊಂಡೋ, ಇಲ್ಲ ನಿಂತುಕೊಂಡೋ
ಅಥವಾ ಪುಟ್‌ಬೋರ್ಡ್‌ಮೇಲೆ ಮುಂಗಾಲನ್ನೂರಿ
ಹವೆಯಲ್ಲಿ ಮೈತೂರಿ ತೂಗಿಕೊಂಡೋ
ಹೇಗೆ ಬೇಕಾದರೂ ಹೋಗಬಹುದು
ಅದೃಷ್ಟವಿದ್ದರೆ ಸ್ಟಾಪು ಸೇರಬಹುದು!

ಹಿಂದೆ ಒಂದಾನೊಂದು ಕಾಲದಲ್ಲಿ
ಇತ್ತಂತೆ ಪೂರ ಕನ್ನಡವೆ ಇಲ್ಲಿ
ಈಗ ಮಾತ್ರ ಎಲ್ಲೋ ಸಂದಿಗೊಂದಿಗಳಲ್ಲಿ
ಮಿಡುಕುತಿದೆ ಜೀವ ಬಾಲದಲ್ಲಿ
ಅಕ್ಕಪಕ್ಕದ ಮನೆಯ ಸೋದರರು ದಯಮಾಡಿ
ಮೇಲೆಬ್ಬಿಸಿರುವ ಗಾಳಿಯಲ್ಲಿ
ಹೊಯ್ದಾಡುತ್ತಿದೆ ಪುಟ್ಟ ಕನ್ನಡದ ಹಣತೆ
ಗುಡ್‌ಬೈ ಹೇಳುವ ಧಾಟಿಯಲ್ಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಳಿಗೆಬಟ್ಟಲ ತಿರುವುಗಳಲ್ಲಿ – ೪೪
Next post ಕನ್ನಡ ದ್ರೋಣಾಚಾರ್ಯ ಎ.ಆರ್. ಕೃಷ್ಣಶಾಸ್ತ್ರಿ

ಸಣ್ಣ ಕತೆ

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

cheap jordans|wholesale air max|wholesale jordans|wholesale jewelry|wholesale jerseys