Home / ಕವನ / ಕವಿತೆ / ಬೆಂಗಳೂರು

ಬೆಂಗಳೂರು

ಇದು ಚಕ್ರವ್ಯೂಹ
ಒಳಗೆ ಬರಬಹುದು
ಒಮ್ಮೆ ಬಂದಿರೊ ಒಳಗೆ
ಹಿಂದೆ ಹೋಗುವ ದಾರಿ ಬಂದಾದ ಹಾಗೆಯೇ !
ಕರೆತಂದ ದೆವ್ವಗಳು ಕೈಬಿಟ್ಟ ಹಾಗೆಯೇ!
ಸ್ವಾಮಿ, ಇದು ನಗರ;
ನಿತ್ಯ ಜೀವವನ್ನೆಲ್ಲ ನುಂಗಿ ಸೊಕ್ಕಿರುವ
ಹೆಬ್ಬಾವಿನಂಥ ಜಡ ಅಜಗರ:
ದಿಕ್ಕು ದಿಕ್ಕಿನಿಂದಲೂ ಉಕ್ಕಿ ಧಾವಿಸುತ್ತಿರುವ
ಲಕ್ಷವಾಹಿನಿ ಮಲೆತ ಜನಸಾಗರ;
ಏನೆಲ್ಲ ಭಾಷೆ, ಎಷ್ಟೆಲ್ಲ ಆಸೆ
ನೂರೆಂಟು ರುಚಿ ಕಲಸುಮೇಲೋಗರ,
ಬಂದವರಿಗೆಲ್ಲ ಇಲ್ಲಿ ಭವಿಷ್ಯ ಇರದಿದ್ದರೂ
ಆಟಬಲ್ಲ ಖಡೀಮ ಮಾತ್ರ ಹಾಕಿಯೆಬಿಡುವ
ಕೇಳಿದ ಗರ!

ಎಲ್ಲ ಸಮೃದ್ಧ ಇಲ್ಲಿ.
ಕೆಲವು ಜಾಗಗಳಲ್ಲಿ
ನೀರಿಲ್ಲದಿದ್ದರೂ ನಲ್ಲಿಯಲ್ಲಿ
ಗಲ್ಲಿ ಗಲ್ಲಿಗಳಲ್ಲಿ
ಹೆಜ್ಜೆ ಹೆಜ್ಜೆಗು ತೀರ್ಥ
ಅಂಗಡಿಯ ತುಂಬ ಬಾಟಲಲ್ಲಿ !
ಎಣ್ಣೆ ಇದೆ ಕಾಳಲ್ಲಿ
ಬೆಣ್ಣೆ ಹಳೆಕಥೆಯಲ್ಲಿ
ಅಕ್ಕಿ ಸಕ್ಕರೆ ಬೇಳೆ ಕೆಲಸವಿಲ್ಲದೆ ಪಾಪ
ಗೊರಕೆ ಹೊಡೆಯುತ್ತಿವೆ ನೆಲಮಾಳಿಗೆಯ ಒಳಗೆ
ಕತ್ತಲಲ್ಲಿ!

ಓಡುವುದು ಇಲ್ಲಿ, ಎಲ್ಲೆಂದರಲ್ಲಿ
ಸಿಟೀ ಬಸ್ಸು
ಕೂತುಕೊಂಡೋ, ಇಲ್ಲ ನಿಂತುಕೊಂಡೋ
ಅಥವಾ ಪುಟ್‌ಬೋರ್ಡ್‌ಮೇಲೆ ಮುಂಗಾಲನ್ನೂರಿ
ಹವೆಯಲ್ಲಿ ಮೈತೂರಿ ತೂಗಿಕೊಂಡೋ
ಹೇಗೆ ಬೇಕಾದರೂ ಹೋಗಬಹುದು
ಅದೃಷ್ಟವಿದ್ದರೆ ಸ್ಟಾಪು ಸೇರಬಹುದು!

ಹಿಂದೆ ಒಂದಾನೊಂದು ಕಾಲದಲ್ಲಿ
ಇತ್ತಂತೆ ಪೂರ ಕನ್ನಡವೆ ಇಲ್ಲಿ
ಈಗ ಮಾತ್ರ ಎಲ್ಲೋ ಸಂದಿಗೊಂದಿಗಳಲ್ಲಿ
ಮಿಡುಕುತಿದೆ ಜೀವ ಬಾಲದಲ್ಲಿ
ಅಕ್ಕಪಕ್ಕದ ಮನೆಯ ಸೋದರರು ದಯಮಾಡಿ
ಮೇಲೆಬ್ಬಿಸಿರುವ ಗಾಳಿಯಲ್ಲಿ
ಹೊಯ್ದಾಡುತ್ತಿದೆ ಪುಟ್ಟ ಕನ್ನಡದ ಹಣತೆ
ಗುಡ್‌ಬೈ ಹೇಳುವ ಧಾಟಿಯಲ್ಲಿ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...