ತಾಳಲಾರೆ ತಗಣಿಕಾಟವಾ

ತಾಳಲಾರೆ ತಗಣಿಕಾಟವಾ ಶಿವಹರನು ಬಲ್ಲ
ತಾಳಲಾರೆ ತಗಣಿಕಾಟವಾ ||ಪ||

ತಾಳಲಾರೆ ತಗಣಿಕಾಟಾ
ಘನಘೋರ ಇದರಾರ‍್ಭಾಟ
ಮಾಳಗಿ ಮನಿಯ ಜಂತಿ ಸೇರಿ
ಗೋಳುಮಾಡಿ ಬಿಟ್ಟವಣ್ಣಾ ||ಅ.ಪ.||

ಮೈಯ ಮೇಲೆ ಬಿದ್ದರ ತಿಂಡಿ
ಹಚ್ಚಿದಂತೆ ಪುಂಡಿ
ಮಾಯದೇಹ ರಕ್ತದ ಉಂಡಿ
ಗಾಯ ಮಾಯವು ಕೆರೆದು ಹುರುಕು
ನಾಯಿಯಾದೆ ರಾತ್ರಿಯನ್ನು
ನಾ ಎನಿತೀ ದಿವಸ ಕಳೆವೆ
ಬಾಯಿಬಿಟ್ಟು ಬಳಲುತಿರುವೆ ||೧||

ಮೋಜಿನ ಮಾತು ಕೌತುಕವಾಯಿತು
ಜ್ಞಾನಕ್ಕೇನು ಗೊತ್ತು
ರಾಜಿಸುತಿಹ ರಾಜನ ಗತ್ತು
ರಾಜಯೋಗಿ ಶಿಶುನಾಳೇಶನ
ತೇಜಿಸುತಿಹ ಸದರಿನೆಡೆಗೆ
ನೀ ಜವದೊಳು ಬಂದು ಕೆಟ್ಟಿ
ಮಾಜು ನಿನ್ನ ದುರ್ಗುಣವನು ||೨||

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೀಪದ ಕಂಬ – ೫ (ಜೀವನ ಚಿತ್ರ)
Next post ಶ್ರೀ ಬಸವೇಶ್ವರ ದಂಡಕ

ಸಣ್ಣ ಕತೆ

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

cheap jordans|wholesale air max|wholesale jordans|wholesale jewelry|wholesale jerseys