Home / ಕವನ / ಕವಿತೆ / ಬನ್ನಿ ತಿರುವಳ್ಳುವರ್

ಬನ್ನಿ ತಿರುವಳ್ಳುವರ್

ಬನ್ನಿ ತಿರುವಳ್ಳುವರ್ ಬನ್ನಿ ವಂದನೆ ನಿಮಗೆ
ನಿಮ್ಮೊಡನೆ ನಮಗಿಲ್ಲ ಜಗಳ ಕಿತ್ತಾಟ.
ಎಲ್ಲೆ ಇದ್ದರು ನೀವು ಬೆಳಕಿನಾರಾಧಕರು?
ಪಂಪ ರನ್ನರ ಬದಿಗೆ
ನಿಮಗೂ ಇಟ್ಟಿದ್ದೇವೆ ಬೆಳ್ಳಿ ಪೀಠ
ದೂರ ಶಿಖರದಲ್ಲೆಲ್ಲೊ ನಿಂತಿದ್ದರೂ ನೀವು
ಎಲ್ಲ ಕಾಲಕ್ಕೂ
ತನ್ನೊಡಲ ಬಿಗಿದ ಕಾಮದ ಸರ್ಪಸುತ್ತಿಂದ
ಮುಕ್ತವಾಗುವುದನ್ನು ಆಡಿ ತೋರಿಸಿದ್ದೀರಿ,
ಧರ್ಮಾರ್ಥಕಾಮ ಸಂಗಮದ ಕ್ಷೇತ್ರಕ್ಕೆ ಕರೆಸಿ
ಮಿಂದು ಮಡಿಯಾಗಿ
ಎಂದು ಹರಸಿದ್ದೀರಿ.
ಭಾಷೆ ಯಾವುದೆ ಇರಲಿ, ಕಾಲ ಯಾವುದೆ ಇರಲಿ
ನೀವು ಹಚ್ಚಿದ ದೀಪ ಎಲ್ಲ ಗಡಿಯಾಚೆಗೂ
ಬೆಳಕ ಸುರಿವಂಥದು
ಕೋಟಿ ಯೋಜನದಾಚೆಯಿಂದ ಹಾಯ್ದರು ಸೂರ್ಯ-
ಕಿರಣ ಭೂಮಿಗೆ ಸೃಷ್ಟಿಶಕ್ತಿ ಕೊಡುವಂಥದು.

ನಿಮ್ಮ ಹೆಸರಲ್ಲಿ ಇಲ್ಲಿ ಏನೋ ಗದ್ದಲ ಧೂಳು ಎದ್ದದ್ದು ಕಂಡು
ನಿಮಗೆಷ್ಟು ವ್ಯಥೆಯೋ!
ತಿರುಳನೆಲ್ಲೋ ಚೆಲ್ಲಿ ಕರಟಕ್ಕೆ ಕಿತ್ತಾಟ
ನಿಮ್ಮ ಕವಿತೆಯ ಬಿಟ್ಟು ಕಲ್ಲ ಮೂರ್ತಿಯ ನಿಲ್ಲಿಸುವೆವೆಂಬ
ಮೂರ್ಖರಿಗೆ
ಏನು ಮತಿಯೋ!
ಬನ್ನಿ ತಿರುವಳ್ಳುವರ್ ನಿಮಗೆ ಪ್ರೀತಿಯ ನಮನ
ಕಲ್ಲಾಗಿ ಅಲ್ಲ ಸಿರಿಕವಿತೆಯಾಗಿ
ಯಾವ ಕಾವ್ಯಕ್ಕೆ ನಿಮ್ಮ ಸಾರವೆಲ್ಲವ ಧಾರೆಯೆರೆವಿರೋ
ಆ ಕೃತಿಯ ರೂಪವಾಗಿ.
ಬನ್ನಿ ತಿರುವಳ್ಳುವರ್, ಬನ್ನಿ ಕಾದಿದ್ದೇವೆ
ನಿಮ್ಮ ಕಾವ್ಯದ ಗಂಧಜಲದಲ್ಲಿ ಮೀಯಲು
ನಿಮ್ಮ ಲೋಕವಿವೇಕ ಪ್ರಭೆಗೆ ಮೈಯೊಡ್ಡಲು.
ಅಚ್ಚ ಕನ್ನಡದಲ್ಲಿ ಹೊಚ್ಚ ಹೊಸ ಮೈ ಪಡೆದು
ಅವತರಿಸುತಲೆ ಇರಲಿ ನಿಮ್ಮ ಕವಿತೆ,
ಕನ್ನಡದ ಕಾವ್ಯದೀಪಾವಳಿಯ ದೃಶ್ಯದಲಿ
ತಪ್ಪದೇ ಉರಿದಿರಲಿ ನಿಮ್ಮ ಹಣತೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...