Home / ಕವನ / ಕವಿತೆ / ಅನಂತಮೂರ್ತಿಗೆ

ಅನಂತಮೂರ್ತಿಗೆ

ರೀ ಅನಂತಮೂರ್ತಿ
ನೀವು ಅದೆಷ್ಟು ಸ್ವಾರ್ಥಿ!
ಯಾರಿಗೂ ಬಿಡದೆ ಒಬ್ಬರೇ
ದೋಚಿಕೊಳ್ಳುವುದೇ ಎಲ್ಲಾ ಕೀರ್ತಿ ?

ಏನೆಲ್ಲ ಕಾಡಿದುವಪ್ಟ ನಿಮ್ಮನ್ನ !
ಹೆಣ್ಣು, ಹೆಸರು, ಹಾಗೇ
ಮಣ್ಣಿನ ಮಕ್ಕಳ ಮೂಕ ನಿಟ್ಟುಸಿರು;
ಗಾಂಧೀ, ಲೋಹಿಯಾ, ಹಾಗೇ
ಧಗಧಗಿಸುವ ಸೃಷ್ಟಿಕಾರಕ ಬಸಿರು;
ನೇರ ಮಠದಿಂದಲೇ ಬಂದರೂ
ಗುಂಡು, ಚಾಕಣದ ತುಂಡು, ಜೊತೆಗೇ
ಕೇಳುಗರೆದೆ ಜುಮ್ಮೆನಿಸುವ ಮಾತಿನ ತೊಂಡು;
ಹಿಮಾಲಯದಂಥ ಅಡಿಗ, ಜೊತೆಗೇ
ಪತ್ರಿಕೆದೊಣ್ಣೆಯ ಬೀಸುವ
ಸ್ನೇಹಾಸೂಯೆಯ ಬಡಿಗ.
ಇಲ್ಲವೆಂದಲ್ಲ ಮನಸ್ಸಿನ ತಳಾತಳದಲ್ಲಿ
ಮಿಣ್ಣನೆ ಧೂರ್ತ,
ಆದರೆ ಅಲ್ಲೇ ಇದ್ದಾನೆ ಅವನನ್ನು
ನಿಯಂತ್ರಿಸುವ ಕುಶಲಿ ಪಾರ್ಥ.
ಜೀರ್ಣಿಸಿಕೊಂಡಿರಿ ಎಲ್ಲಾ
ಪ್ರೀತಿಯ ಬಲದಲ್ಲಿ
ಜೀರ್ಣಿಸಿಕೊಂಡಿರಿ ಬರೆದು ಮನಸಾಕ್ಷಿಯ ಸಹಿಯಲ್ಲಿ;
ಒಳಗಿನ ಕೌಶಿಕನನ್ನೇ
ಅರಣಿ ಸಮಿತ್ತು ಮಾಡಿ
ಸತ್ಯಕ್ಕೆ ಆಹುತಿ ನೀಡಿ
ಶೂದ್ರ ಋಷಿಯಾದಿರಿ ಗಾಯತ್ರಿಯ ಹಾಡಿ.
ಸದ್ದುಗದ್ದಲವಿರದೆ ಏನೆಲ್ಲ ಗೆದ್ದಿದ್ದೀರಿ!
ಶರಣರ ವಚನ ಜ್ಯೋತಿಯ
ಆಯೋವಾದಲ್ಲಿ ಮುಡಿಸಿ,
ಪುರಂದರ ಕೃತಿ ಹೂರಣವ
ಪ್ಯಾರಿಸ್ಸಿನಲ್ಲಿ ಬಡಿಸಿ,
ಕನ್ನಡ ಸಂಸ್ಕೃತಿ ಕೇದಗೆ
ಕಡಲಾಚೆಗೂ ಕಳಿಸಿ,
ಅರಿಯದಂತೆ ಇದ್ದೀರಿ
ಸಾಮಾನ್ಯರ ಥರ ನಟಿಸಿ.

ಇದೆ ನಿಮ್ಮ ತೆಕ್ಕೆಯಲ್ಲಿ ಘನವಾದದ್ದೆಲ್ಲ:
ಅಡಿಗರ ಪದ್ಯ, ಲಂಕೇಶರ ಗದ್ಯ
ಕುವೆಂಪು ಕಥಾಲೊಕ,
ಎಮರ್ಜನ್ಸಿಗೆ ಬಲಿಯಾದ ಸ್ನೇಹಲತಾ ಕುರಿತ ಶೋಕ,
ಬೇಂದ್ರೆಯ ಮಾಯಾಸೃಷ್ಟಿ,
ಕಾರಂತರ ಎವೆಹೊಳಚದ ನಿಷ್ಠುರದೃಷ್ಟಿ,
ಕ್ರಿಸ್ತನ ಮಗಳು ಎಸ್ತರಳ ಪ್ರೇಮ,
ಸಾವಿರ ಕನಸುಗಳ ಶಿಖರಸ್ತೋಮ.
ಇನ್ನೂ ಏನೇನೋ-
ಹೇಳಲು ಸೋತೆ, ತೋಚುತ್ತಿಲ್ಲ ಮಾತೇ
ಸಡಿಲಿಸಿ ಕೊಂಚ ತೋಳು,
ಒಳಕ್ಕೆ ನುಸುಳಲಿ ಈ ಭಟ್ಟನದೂ
ಒಂದೆರಡು ಸಾಲು!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...