ಅನಂತಮೂರ್ತಿಗೆ

ರೀ ಅನಂತಮೂರ್ತಿ
ನೀವು ಅದೆಷ್ಟು ಸ್ವಾರ್ಥಿ!
ಯಾರಿಗೂ ಬಿಡದೆ ಒಬ್ಬರೇ
ದೋಚಿಕೊಳ್ಳುವುದೇ ಎಲ್ಲಾ ಕೀರ್ತಿ ?

ಏನೆಲ್ಲ ಕಾಡಿದುವಪ್ಟ ನಿಮ್ಮನ್ನ !
ಹೆಣ್ಣು, ಹೆಸರು, ಹಾಗೇ
ಮಣ್ಣಿನ ಮಕ್ಕಳ ಮೂಕ ನಿಟ್ಟುಸಿರು;
ಗಾಂಧೀ, ಲೋಹಿಯಾ, ಹಾಗೇ
ಧಗಧಗಿಸುವ ಸೃಷ್ಟಿಕಾರಕ ಬಸಿರು;
ನೇರ ಮಠದಿಂದಲೇ ಬಂದರೂ
ಗುಂಡು, ಚಾಕಣದ ತುಂಡು, ಜೊತೆಗೇ
ಕೇಳುಗರೆದೆ ಜುಮ್ಮೆನಿಸುವ ಮಾತಿನ ತೊಂಡು;
ಹಿಮಾಲಯದಂಥ ಅಡಿಗ, ಜೊತೆಗೇ
ಪತ್ರಿಕೆದೊಣ್ಣೆಯ ಬೀಸುವ
ಸ್ನೇಹಾಸೂಯೆಯ ಬಡಿಗ.
ಇಲ್ಲವೆಂದಲ್ಲ ಮನಸ್ಸಿನ ತಳಾತಳದಲ್ಲಿ
ಮಿಣ್ಣನೆ ಧೂರ್ತ,
ಆದರೆ ಅಲ್ಲೇ ಇದ್ದಾನೆ ಅವನನ್ನು
ನಿಯಂತ್ರಿಸುವ ಕುಶಲಿ ಪಾರ್ಥ.
ಜೀರ್ಣಿಸಿಕೊಂಡಿರಿ ಎಲ್ಲಾ
ಪ್ರೀತಿಯ ಬಲದಲ್ಲಿ
ಜೀರ್ಣಿಸಿಕೊಂಡಿರಿ ಬರೆದು ಮನಸಾಕ್ಷಿಯ ಸಹಿಯಲ್ಲಿ;
ಒಳಗಿನ ಕೌಶಿಕನನ್ನೇ
ಅರಣಿ ಸಮಿತ್ತು ಮಾಡಿ
ಸತ್ಯಕ್ಕೆ ಆಹುತಿ ನೀಡಿ
ಶೂದ್ರ ಋಷಿಯಾದಿರಿ ಗಾಯತ್ರಿಯ ಹಾಡಿ.
ಸದ್ದುಗದ್ದಲವಿರದೆ ಏನೆಲ್ಲ ಗೆದ್ದಿದ್ದೀರಿ!
ಶರಣರ ವಚನ ಜ್ಯೋತಿಯ
ಆಯೋವಾದಲ್ಲಿ ಮುಡಿಸಿ,
ಪುರಂದರ ಕೃತಿ ಹೂರಣವ
ಪ್ಯಾರಿಸ್ಸಿನಲ್ಲಿ ಬಡಿಸಿ,
ಕನ್ನಡ ಸಂಸ್ಕೃತಿ ಕೇದಗೆ
ಕಡಲಾಚೆಗೂ ಕಳಿಸಿ,
ಅರಿಯದಂತೆ ಇದ್ದೀರಿ
ಸಾಮಾನ್ಯರ ಥರ ನಟಿಸಿ.

ಇದೆ ನಿಮ್ಮ ತೆಕ್ಕೆಯಲ್ಲಿ ಘನವಾದದ್ದೆಲ್ಲ:
ಅಡಿಗರ ಪದ್ಯ, ಲಂಕೇಶರ ಗದ್ಯ
ಕುವೆಂಪು ಕಥಾಲೊಕ,
ಎಮರ್ಜನ್ಸಿಗೆ ಬಲಿಯಾದ ಸ್ನೇಹಲತಾ ಕುರಿತ ಶೋಕ,
ಬೇಂದ್ರೆಯ ಮಾಯಾಸೃಷ್ಟಿ,
ಕಾರಂತರ ಎವೆಹೊಳಚದ ನಿಷ್ಠುರದೃಷ್ಟಿ,
ಕ್ರಿಸ್ತನ ಮಗಳು ಎಸ್ತರಳ ಪ್ರೇಮ,
ಸಾವಿರ ಕನಸುಗಳ ಶಿಖರಸ್ತೋಮ.
ಇನ್ನೂ ಏನೇನೋ-
ಹೇಳಲು ಸೋತೆ, ತೋಚುತ್ತಿಲ್ಲ ಮಾತೇ
ಸಡಿಲಿಸಿ ಕೊಂಚ ತೋಳು,
ಒಳಕ್ಕೆ ನುಸುಳಲಿ ಈ ಭಟ್ಟನದೂ
ಒಂದೆರಡು ಸಾಲು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಳಿಗೆಬಟ್ಟಲ ತಿರುವುಗಳಲ್ಲಿ – ೪೭
Next post ಕೋಮುವಾದ : ರಾಷ್ಟ್ರದ ಗಂಭೀರ ಸಮಸ್ಯೆ

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

cheap jordans|wholesale air max|wholesale jordans|wholesale jewelry|wholesale jerseys