Home / ಕವನ / ಕವಿತೆ / ಅನಂತಮೂರ್ತಿಗೆ

ಅನಂತಮೂರ್ತಿಗೆ

ರೀ ಅನಂತಮೂರ್ತಿ
ನೀವು ಅದೆಷ್ಟು ಸ್ವಾರ್ಥಿ!
ಯಾರಿಗೂ ಬಿಡದೆ ಒಬ್ಬರೇ
ದೋಚಿಕೊಳ್ಳುವುದೇ ಎಲ್ಲಾ ಕೀರ್ತಿ ?

ಏನೆಲ್ಲ ಕಾಡಿದುವಪ್ಟ ನಿಮ್ಮನ್ನ !
ಹೆಣ್ಣು, ಹೆಸರು, ಹಾಗೇ
ಮಣ್ಣಿನ ಮಕ್ಕಳ ಮೂಕ ನಿಟ್ಟುಸಿರು;
ಗಾಂಧೀ, ಲೋಹಿಯಾ, ಹಾಗೇ
ಧಗಧಗಿಸುವ ಸೃಷ್ಟಿಕಾರಕ ಬಸಿರು;
ನೇರ ಮಠದಿಂದಲೇ ಬಂದರೂ
ಗುಂಡು, ಚಾಕಣದ ತುಂಡು, ಜೊತೆಗೇ
ಕೇಳುಗರೆದೆ ಜುಮ್ಮೆನಿಸುವ ಮಾತಿನ ತೊಂಡು;
ಹಿಮಾಲಯದಂಥ ಅಡಿಗ, ಜೊತೆಗೇ
ಪತ್ರಿಕೆದೊಣ್ಣೆಯ ಬೀಸುವ
ಸ್ನೇಹಾಸೂಯೆಯ ಬಡಿಗ.
ಇಲ್ಲವೆಂದಲ್ಲ ಮನಸ್ಸಿನ ತಳಾತಳದಲ್ಲಿ
ಮಿಣ್ಣನೆ ಧೂರ್ತ,
ಆದರೆ ಅಲ್ಲೇ ಇದ್ದಾನೆ ಅವನನ್ನು
ನಿಯಂತ್ರಿಸುವ ಕುಶಲಿ ಪಾರ್ಥ.
ಜೀರ್ಣಿಸಿಕೊಂಡಿರಿ ಎಲ್ಲಾ
ಪ್ರೀತಿಯ ಬಲದಲ್ಲಿ
ಜೀರ್ಣಿಸಿಕೊಂಡಿರಿ ಬರೆದು ಮನಸಾಕ್ಷಿಯ ಸಹಿಯಲ್ಲಿ;
ಒಳಗಿನ ಕೌಶಿಕನನ್ನೇ
ಅರಣಿ ಸಮಿತ್ತು ಮಾಡಿ
ಸತ್ಯಕ್ಕೆ ಆಹುತಿ ನೀಡಿ
ಶೂದ್ರ ಋಷಿಯಾದಿರಿ ಗಾಯತ್ರಿಯ ಹಾಡಿ.
ಸದ್ದುಗದ್ದಲವಿರದೆ ಏನೆಲ್ಲ ಗೆದ್ದಿದ್ದೀರಿ!
ಶರಣರ ವಚನ ಜ್ಯೋತಿಯ
ಆಯೋವಾದಲ್ಲಿ ಮುಡಿಸಿ,
ಪುರಂದರ ಕೃತಿ ಹೂರಣವ
ಪ್ಯಾರಿಸ್ಸಿನಲ್ಲಿ ಬಡಿಸಿ,
ಕನ್ನಡ ಸಂಸ್ಕೃತಿ ಕೇದಗೆ
ಕಡಲಾಚೆಗೂ ಕಳಿಸಿ,
ಅರಿಯದಂತೆ ಇದ್ದೀರಿ
ಸಾಮಾನ್ಯರ ಥರ ನಟಿಸಿ.

ಇದೆ ನಿಮ್ಮ ತೆಕ್ಕೆಯಲ್ಲಿ ಘನವಾದದ್ದೆಲ್ಲ:
ಅಡಿಗರ ಪದ್ಯ, ಲಂಕೇಶರ ಗದ್ಯ
ಕುವೆಂಪು ಕಥಾಲೊಕ,
ಎಮರ್ಜನ್ಸಿಗೆ ಬಲಿಯಾದ ಸ್ನೇಹಲತಾ ಕುರಿತ ಶೋಕ,
ಬೇಂದ್ರೆಯ ಮಾಯಾಸೃಷ್ಟಿ,
ಕಾರಂತರ ಎವೆಹೊಳಚದ ನಿಷ್ಠುರದೃಷ್ಟಿ,
ಕ್ರಿಸ್ತನ ಮಗಳು ಎಸ್ತರಳ ಪ್ರೇಮ,
ಸಾವಿರ ಕನಸುಗಳ ಶಿಖರಸ್ತೋಮ.
ಇನ್ನೂ ಏನೇನೋ-
ಹೇಳಲು ಸೋತೆ, ತೋಚುತ್ತಿಲ್ಲ ಮಾತೇ
ಸಡಿಲಿಸಿ ಕೊಂಚ ತೋಳು,
ಒಳಕ್ಕೆ ನುಸುಳಲಿ ಈ ಭಟ್ಟನದೂ
ಒಂದೆರಡು ಸಾಲು!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...