ಏಕಾಗಬಾರದು?

ಮೇರುಗಿರಿಯೊಂದು ದಿನ ಗರ್ವದಿಂ ತಲೆಯೆತ್ತಿ
ಕೆಂಗದಿರ ಹೊಂಗದಿರ ಜಿಹ್ವೆಯಲಿ ನುಡಿಯಿತ್ತು
“ಈರೇಳು ಲೋಕಗಳಿಗಾಧಾರವಾಗಿಹೆನು,
ಎಲ್ಲಮಂ ಧರಿಸಿಹೆನು ; ಸೂರ್ಯತಾರೆಗಳೆನ್ನ
ಬಳಿವಿಡಿದು ಸಂಚರಿಸಿ ನಾನಿಟ್ಟ ಶಾಸನವ
ಎಳ್ಳನಿತು ಲಂಘಿಸವು”. ಈ ಕೆಚ್ಚುನುಡಿಗೇಳಿ
ಸಾಗರದ ವಾರಿರಾಶಿಯಲೊಂದು ಹನಿಯೆದ್ದು
“ಎಲೆ ಮೇರುಪರ್ವತವೆ! ಹದಿನಾಲ್ಕು ಲೋಕಗಳ
ಆಧಾರಗೀಧಾರವೆಂಬ ನುಡಿಯಂತಿರಲಿ
ಮುನಿದೆನಾದರೆ ಕೊಚ್ಚಿ ಮುಳುಗಿಸುವೆ ಹೆಸರುಸಿರು
ನಿನಗಿಲ್ಲವೆಂಬಂತೆ, ತಿಳಿಯದೇಂ ಪೌರುಷವು ?”
ಎಂದು ತನ್ನಯ ಬಲುಮೆ ಮಹಿಮೆಗಳನಾಡಿತ್ತು.
ಸೈಕತದ ರಾಶಿಯಲ್ಲಿ ಒಂದು ಕಣ ತಾನೆದ್ದು
“ಲೇಸಾಯ್ತು ನಿನ್ನ ನುಡಿ! ಮುಸಿಯದೆಯೆ ವಿಸ್ತಾರ
ಸಾಗರದ ಹನಿಗಿನಿಯುಮೆನುಮುಂ ಇರದಂತೆ
ಕುಡಿಯುವೆನು, ಪೈಜೆಯಿದೆ ಹೂಡುನೀಂ ಪಂಥವನು”
ಎಂದಾಗ ಸಾಮರ್ಥ್ಯದುನ್ನತಿಯನಾಡಿತ್ತು.
ಪಂಥಗಳ ಪೌರುಷಕೆ ಮನುಜ ಕೋಟೆಯು ನಕ್ಕು
“ಈ ಹುಚ್ಚು ಬಲು ಸೊಗಸು, ಕೇಳ್ವರಿಗೆ ಬಲು ಸೊಗಸು
ಹೆಡ್ಡರಿಗೆ ಹುಚ್ಚು ಹಿಡಿದರೆ ಮಾತು ಸೊಗಸುಂಟು”
ಎಂದವರನೇಳಿಸಿತು. ಆಗ ನಿರ್ದೇಹದಲಿ
ಏಕಾಗಬಾರದೆಂದೊಂದು ದನಿ ನಭದಲ್ಲಿ
ನುಣ್ಣನೆಯ ಸಣ್ಣ ದನಿ ಗೀತಮಂ ಹಾಡಿತ್ತು.

“ಏಕಾಗಬಾರದದು
ಆಗಲೇ ಆಗುವುದು
ಹನಿಯ ನುಡಿ ಕಣದ ನುಡಿ
ದಿಟದ ನುಡಿಯೆನಗೊಪ್ಪು
ನಕ್ಕ ಮಾನವರೆಲ್ಲ
ಅತ್ತು ಹೋಗುವರೀಗ
ಕಣದಲ್ಲಿ ಹನಿಯಲ್ಲಿ
ಇರುವೊಂದು ಪರಮಾಣು
ಕೊಚ್ಚಿ ಬಿಸುಡುವುದೀಗ
ಕುಡಿದು ತೇಗುವುದೀಗ
ಆ ಕಾಲ ಬಂದಿಹುದು
ಈಗಲೇ ಬಂದಿಹುದು.
ಕಣದಂತೆ ಹನಿಯಂತೆ
ತಿಳಿದು ಸಾಧಿಪ ಜನರು
ಎನ್ನೊಳಗೆ ತಪ್ಪದೆಯೆ
ಸಮರಸವ ಹೊಂದುವರು
ಲೋಕಗಳ ಸೃಷ್ಟಿಸರು
ಲೋಕಗಳನಾಳುವರು
ಲೋಕಗಳ ನುಂಗುವರು
ಏಕಾಗಬಾರದದು
ಆಗಲೇ ಆಗುವುದು.”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಟ್ಟಕಡೆಯವರ ಕತೆ ಕೇಳಿ…
Next post ನಿಜವಾದ ಕರಡಿ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

cheap jordans|wholesale air max|wholesale jordans|wholesale jewelry|wholesale jerseys