Home / ಕವನ / ಕವಿತೆ / ಏಕಾಗಬಾರದು?

ಏಕಾಗಬಾರದು?

ಮೇರುಗಿರಿಯೊಂದು ದಿನ ಗರ್ವದಿಂ ತಲೆಯೆತ್ತಿ
ಕೆಂಗದಿರ ಹೊಂಗದಿರ ಜಿಹ್ವೆಯಲಿ ನುಡಿಯಿತ್ತು
“ಈರೇಳು ಲೋಕಗಳಿಗಾಧಾರವಾಗಿಹೆನು,
ಎಲ್ಲಮಂ ಧರಿಸಿಹೆನು ; ಸೂರ್ಯತಾರೆಗಳೆನ್ನ
ಬಳಿವಿಡಿದು ಸಂಚರಿಸಿ ನಾನಿಟ್ಟ ಶಾಸನವ
ಎಳ್ಳನಿತು ಲಂಘಿಸವು”. ಈ ಕೆಚ್ಚುನುಡಿಗೇಳಿ
ಸಾಗರದ ವಾರಿರಾಶಿಯಲೊಂದು ಹನಿಯೆದ್ದು
“ಎಲೆ ಮೇರುಪರ್ವತವೆ! ಹದಿನಾಲ್ಕು ಲೋಕಗಳ
ಆಧಾರಗೀಧಾರವೆಂಬ ನುಡಿಯಂತಿರಲಿ
ಮುನಿದೆನಾದರೆ ಕೊಚ್ಚಿ ಮುಳುಗಿಸುವೆ ಹೆಸರುಸಿರು
ನಿನಗಿಲ್ಲವೆಂಬಂತೆ, ತಿಳಿಯದೇಂ ಪೌರುಷವು ?”
ಎಂದು ತನ್ನಯ ಬಲುಮೆ ಮಹಿಮೆಗಳನಾಡಿತ್ತು.
ಸೈಕತದ ರಾಶಿಯಲ್ಲಿ ಒಂದು ಕಣ ತಾನೆದ್ದು
“ಲೇಸಾಯ್ತು ನಿನ್ನ ನುಡಿ! ಮುಸಿಯದೆಯೆ ವಿಸ್ತಾರ
ಸಾಗರದ ಹನಿಗಿನಿಯುಮೆನುಮುಂ ಇರದಂತೆ
ಕುಡಿಯುವೆನು, ಪೈಜೆಯಿದೆ ಹೂಡುನೀಂ ಪಂಥವನು”
ಎಂದಾಗ ಸಾಮರ್ಥ್ಯದುನ್ನತಿಯನಾಡಿತ್ತು.
ಪಂಥಗಳ ಪೌರುಷಕೆ ಮನುಜ ಕೋಟೆಯು ನಕ್ಕು
“ಈ ಹುಚ್ಚು ಬಲು ಸೊಗಸು, ಕೇಳ್ವರಿಗೆ ಬಲು ಸೊಗಸು
ಹೆಡ್ಡರಿಗೆ ಹುಚ್ಚು ಹಿಡಿದರೆ ಮಾತು ಸೊಗಸುಂಟು”
ಎಂದವರನೇಳಿಸಿತು. ಆಗ ನಿರ್ದೇಹದಲಿ
ಏಕಾಗಬಾರದೆಂದೊಂದು ದನಿ ನಭದಲ್ಲಿ
ನುಣ್ಣನೆಯ ಸಣ್ಣ ದನಿ ಗೀತಮಂ ಹಾಡಿತ್ತು.

“ಏಕಾಗಬಾರದದು
ಆಗಲೇ ಆಗುವುದು
ಹನಿಯ ನುಡಿ ಕಣದ ನುಡಿ
ದಿಟದ ನುಡಿಯೆನಗೊಪ್ಪು
ನಕ್ಕ ಮಾನವರೆಲ್ಲ
ಅತ್ತು ಹೋಗುವರೀಗ
ಕಣದಲ್ಲಿ ಹನಿಯಲ್ಲಿ
ಇರುವೊಂದು ಪರಮಾಣು
ಕೊಚ್ಚಿ ಬಿಸುಡುವುದೀಗ
ಕುಡಿದು ತೇಗುವುದೀಗ
ಆ ಕಾಲ ಬಂದಿಹುದು
ಈಗಲೇ ಬಂದಿಹುದು.
ಕಣದಂತೆ ಹನಿಯಂತೆ
ತಿಳಿದು ಸಾಧಿಪ ಜನರು
ಎನ್ನೊಳಗೆ ತಪ್ಪದೆಯೆ
ಸಮರಸವ ಹೊಂದುವರು
ಲೋಕಗಳ ಸೃಷ್ಟಿಸರು
ಲೋಕಗಳನಾಳುವರು
ಲೋಕಗಳ ನುಂಗುವರು
ಏಕಾಗಬಾರದದು
ಆಗಲೇ ಆಗುವುದು.”
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...