ಯಾರು ಹೆಚ್ಚು ?

ಕಲ್ಲು ತಂದು ರೂಪುಮಾಡಿ
ದೇವನೆಂದು ಕರೆದು ನಿನ್ನ
ಎಲ್ಲ ಜಗದ ಒಡೆಯನಾಗಿ
ಕಾವುದೆಂದೆನು.

ಮೆಯ್ಯ ತೊಳೆದು ಹಾಲನೆರೆದು
ಹೂವು ಮುಡಿಸಿ ಗಂಧವಿಕ್ಕಿ
ತುಯ್ಯಲಿಟ್ಟು ದೀಪವಿಟ್ಟು
“ದೇವ” ಎಂದೆನು.

ನಾನು ಮಾಡೆ ನೀನು ಆದೆ
ನಾನು ಕಟ್ಟೆ ನಿನಗೆ ಗುಡಿಯು
ನಾನು ಒರೆಯೆ ನಿನಗೆ ತುತಿಯು
ನಾನೆ ಹಿರಿಯನು.

ಮರುಳನಂತೆ ಹಾಡಿ ಹಿಂದೆ
ಹಿರಿಯತನವ ಹೇರಿ ನಿನಗೆ
ಗರುವದೇವನೆಂದು ಕರೆದು
ಬಿರುದ ಹೊರಿಸಿದೆ.

ಇನಿತು ಕೃತಿಗಳೆನ್ನದಿರಲು
ಪುಣ್ಯ ಪಾಪ ಎಂಬ ಭಾರ
ಕರ್ಮ ಗಿರ್ಮ ಎಂಬ ಬಲೆಯ
ನೀನು ಹಾಕಿದೆ.

ನಾನು ತಗ್ಗಿ ತಗ್ಗಿ ನಡೆಯೆ
ನೀನು ಬೀಗಿ ಬೀಗಿ ಮೆರೆವೆ
ಮಾನವಿಲ್ಲ ನಿನಗೆ, ನೀನೆ
ಜಗದಿ ಭಂಡನು.

ದೇವನೆಂದು ನಿನ್ನ ಮಾಡಿ
ಜೀವದುಸಿರು ನಿನಗೆ ಕೊಟ್ಟು
ಸಾವದಾಯ್ತು, ಎನ್ನ ಭೂತ
ಎನ್ನ ತಿಂದಿತು.

ನಿನ್ನ ಗುಡಿಯು ನಿನ್ನ ಮೂರ್ತಿ
ಕಲ್ಲು ಗುಡಿಯು ಕಲ್ಲು ಮೂರ್ತಿ
ಭಿನ್ನವಾಗೆ ನೊಂದು ನಾನು
ಅತ್ತು ಮರುಗುವೆ.

ಎಲ್ಲ ಜನರ ಹೃದಯದಲ್ಲಿ
ನೆಲಸಿಯವರ ಕಷ್ಟ ದುಃಖ
ನೋಡಿ ನೋಡಿ ಕರಗದಿರುವೆ
ಕಟುಕನಲ್ಲವೆ?

ಮಾಯೆಯೆಂಬ ಬಲೆಯ ಬೀಸಿ
ಮನುಜ ಮೀನ ಹಿಡಿದು ತಿಂಬ
ಜಾಲಗಾರ ನಿನಗದೆಂತು
ದಯೆಯದಿಪ್ಪುದು.

ಹೊಲ್ಲೆತನವ ಪೆರ್ಮೆಯೆಂದು
ಎಲ್ಲ ಗುಣವ ಹೇಳಿಕೊಂಡು
ಕಳ್ಳನಂತೆ ಅಡಗಿಕೊಂಡು
ಕೈಗೆ ಸಿಕ್ಕದೆ,

ನೀಚತನಕೆ ನೀನೆ ಹೇಸಿ
ನಾಚಿಕೊಳುತ ಮುಖವ ಮರೆಸಿ
ಗೋಚರಿಸದೆ ತಿರುಗುತಿರುವೆ
ಲೋಕವರಿಯಲು.

ನಾಡನಾಳ್ವ ಸಾರ್ವಭೌಮ
ಬಿರುದು ಪಡೆದ ಚಕ್ರವರ್ತಿ
ಕಣ್ಗೆ ಕಾಂಬ ತೆರದಿ ನೀನು
ಕಾಣ ಬೇಡವೆ?

ರೂಪು ದೇಹ ಏನುಮಿಲ್ಲ
ಸೈಪು ಪಾಪ ಏನುಮಿಲ್ಲ
ಕಷ್ಟ ದುಃಖ ಅಂಟಲಿಲ್ಲ
ದೇವನೇತಕೆ ?

ಸಹಜನೆಂದು ಹಿರಿಯನೆಂದು
ಪರಮನೆಂದು ದೇವನೆಂದು
ಕಹಳೆ ಕೊಂಬು ಇಡಿಸಿಕೊಂಬೆ
ತೋರು ನೀನೆಲೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕವಿತೆಯೆಂದರೇನು?
Next post ಮೂಗಪ್ಪ

ಸಣ್ಣ ಕತೆ

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

cheap jordans|wholesale air max|wholesale jordans|wholesale jewelry|wholesale jerseys