Home / ಕವನ / ಕವಿತೆ / ಯಾರು ಹೆಚ್ಚು ?

ಯಾರು ಹೆಚ್ಚು ?

ಕಲ್ಲು ತಂದು ರೂಪುಮಾಡಿ
ದೇವನೆಂದು ಕರೆದು ನಿನ್ನ
ಎಲ್ಲ ಜಗದ ಒಡೆಯನಾಗಿ
ಕಾವುದೆಂದೆನು.

ಮೆಯ್ಯ ತೊಳೆದು ಹಾಲನೆರೆದು
ಹೂವು ಮುಡಿಸಿ ಗಂಧವಿಕ್ಕಿ
ತುಯ್ಯಲಿಟ್ಟು ದೀಪವಿಟ್ಟು
“ದೇವ” ಎಂದೆನು.

ನಾನು ಮಾಡೆ ನೀನು ಆದೆ
ನಾನು ಕಟ್ಟೆ ನಿನಗೆ ಗುಡಿಯು
ನಾನು ಒರೆಯೆ ನಿನಗೆ ತುತಿಯು
ನಾನೆ ಹಿರಿಯನು.

ಮರುಳನಂತೆ ಹಾಡಿ ಹಿಂದೆ
ಹಿರಿಯತನವ ಹೇರಿ ನಿನಗೆ
ಗರುವದೇವನೆಂದು ಕರೆದು
ಬಿರುದ ಹೊರಿಸಿದೆ.

ಇನಿತು ಕೃತಿಗಳೆನ್ನದಿರಲು
ಪುಣ್ಯ ಪಾಪ ಎಂಬ ಭಾರ
ಕರ್ಮ ಗಿರ್ಮ ಎಂಬ ಬಲೆಯ
ನೀನು ಹಾಕಿದೆ.

ನಾನು ತಗ್ಗಿ ತಗ್ಗಿ ನಡೆಯೆ
ನೀನು ಬೀಗಿ ಬೀಗಿ ಮೆರೆವೆ
ಮಾನವಿಲ್ಲ ನಿನಗೆ, ನೀನೆ
ಜಗದಿ ಭಂಡನು.

ದೇವನೆಂದು ನಿನ್ನ ಮಾಡಿ
ಜೀವದುಸಿರು ನಿನಗೆ ಕೊಟ್ಟು
ಸಾವದಾಯ್ತು, ಎನ್ನ ಭೂತ
ಎನ್ನ ತಿಂದಿತು.

ನಿನ್ನ ಗುಡಿಯು ನಿನ್ನ ಮೂರ್ತಿ
ಕಲ್ಲು ಗುಡಿಯು ಕಲ್ಲು ಮೂರ್ತಿ
ಭಿನ್ನವಾಗೆ ನೊಂದು ನಾನು
ಅತ್ತು ಮರುಗುವೆ.

ಎಲ್ಲ ಜನರ ಹೃದಯದಲ್ಲಿ
ನೆಲಸಿಯವರ ಕಷ್ಟ ದುಃಖ
ನೋಡಿ ನೋಡಿ ಕರಗದಿರುವೆ
ಕಟುಕನಲ್ಲವೆ?

ಮಾಯೆಯೆಂಬ ಬಲೆಯ ಬೀಸಿ
ಮನುಜ ಮೀನ ಹಿಡಿದು ತಿಂಬ
ಜಾಲಗಾರ ನಿನಗದೆಂತು
ದಯೆಯದಿಪ್ಪುದು.

ಹೊಲ್ಲೆತನವ ಪೆರ್ಮೆಯೆಂದು
ಎಲ್ಲ ಗುಣವ ಹೇಳಿಕೊಂಡು
ಕಳ್ಳನಂತೆ ಅಡಗಿಕೊಂಡು
ಕೈಗೆ ಸಿಕ್ಕದೆ,

ನೀಚತನಕೆ ನೀನೆ ಹೇಸಿ
ನಾಚಿಕೊಳುತ ಮುಖವ ಮರೆಸಿ
ಗೋಚರಿಸದೆ ತಿರುಗುತಿರುವೆ
ಲೋಕವರಿಯಲು.

ನಾಡನಾಳ್ವ ಸಾರ್ವಭೌಮ
ಬಿರುದು ಪಡೆದ ಚಕ್ರವರ್ತಿ
ಕಣ್ಗೆ ಕಾಂಬ ತೆರದಿ ನೀನು
ಕಾಣ ಬೇಡವೆ?

ರೂಪು ದೇಹ ಏನುಮಿಲ್ಲ
ಸೈಪು ಪಾಪ ಏನುಮಿಲ್ಲ
ಕಷ್ಟ ದುಃಖ ಅಂಟಲಿಲ್ಲ
ದೇವನೇತಕೆ ?

ಸಹಜನೆಂದು ಹಿರಿಯನೆಂದು
ಪರಮನೆಂದು ದೇವನೆಂದು
ಕಹಳೆ ಕೊಂಬು ಇಡಿಸಿಕೊಂಬೆ
ತೋರು ನೀನೆಲೆ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...