Home / ಕವನ / ಕವಿತೆ / ಎಲ್ಲಿಗೆ?

ಎಲ್ಲಿಗೆ?

ಕಾಲವಾಹಿನಿಯಲ್ಲಿ ಸಿಕ್ಕಿ ನಾವೆಲ್ಲಿಗೋ
ತೆರಳುತಿಹ ಭೀತಿಯಿಹುದು ;
ಮೇಲ್ಮೇಲೆ ವಿಷವೀಚಿ ಮಾಲೆಗಳು ನುಗ್ಗುತ್ತ
ಬರುತಿಹವು ಕೊಚ್ಚುತಿಹವು.

ಕುರುಡಾದ ನಿಯಮವೊ ಕುಂಟಾದ ವಿಧಿಗಳೋ
ಈವರೆಗೆ ಪೊರೆದುವಯ್ಯ;
ಹರಿದು ಹೋಗಿಹವೀಗ ರಕ್ಷಣೆಯ ಬಂಧಗಳು
ಕಾವುದನು ಕಾಣೆನಯ್ಯ.

ಬಂಡೆಗಳು ಏನಿಹವೊ ನೀರಸುಳಿಯೇನಿಹುದೊ
ಕತ್ತಲೆಯು ಮುತ್ತುತಿಹುದು;
ಕಂಡ ದಾರಿಯುಮಲ್ಲ ಹೇಳುವರು ಮೊದಲಿಲ್ಲ
ಎತ್ತಲುಂ ಜ್ಯೋತಿಯಿಲ್ಲ.

ಸುತ್ತಲುಂ ಉರಿದಾಹ ಜೀವನಕೆ ಬಡಿದಾಟ
ತಿಮಿತಿಮಿಂಗಿಲದ ನೋಟ
ಸಾತ್ವಿಕದ ರಾಜಸದ ಬುಗ್ಗೆಗಳು ತೋರಿಲ್ಲ
ಸಮತೆ ಸೈರಣೆಗಳಿಲ್ಲ.

ಹಿರಿಯರಲಿ ಗೌರವವು ದೈವದಲಿ ನಂಬಿಕೆಯು
ಹೆಸರಿಲ್ಲದಾಗುತಿಹವು ;
ದೊರೆಯೆಂಬ ಗುರುವೆಂಬ ಪೂಜ್ಯಭಾವಗಳೆಲ್ಲ
ಉಸಿರಿಡದೆ ಮೆತ್ತಗಿಹವು.

ಕಿರಿಯರಿಗೆ ಹಿರಿಯರಿಗೆ ನಾಡಲ್ಲಿ ಆರಿಗುಂ
ನಿಯಮಗಳ ಸಹನೆಯಿಲ್ಲ;
ಸರಪಳಿಯ ಕಿತ್ತೆಸೆದ ಮದ್ದಾನೆಗಳ ಗುಂಪು
ನಯನೀತಿ ಗಣನೆಯಿಲ್ಲ.

ಎಲ್ಲರುಂ ಅರಿವಿಲ್ಲದೆಳಮಕ್ಕಳಂದದಲಿ
ಉರಿಯೊಡನೆ ಕುಣಿಯುತಿಹರು ;
ಎಲ್ಲಿಯುರಿ ಹತ್ತುವುದೊ ಹಡಗೆಲ್ಲಿ ಮಗುಚುವುದೊ
ಪರಿಹರಿಸಿ ಕಾವರಾರು ?

ಹುಚ್ಚು ಹೊಳೆಯನು ನೋಡಿ
ವಿಷವಾಹಿನಿಯ ನೋಡಿ
ಬೆರಗುವಟ್ಟಿರುವೆವಯ್ಯ ;
ಎಚ್ಚರಿಕೆ ಕೊಡಲಿಂದು ಆವ ಬೆಳಕದು ಬಂದು
ಪೊರೆಯುವುದೊ ಕಾಣೆನಯ್ಯ.
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...