ಎಲ್ಲಿಗೆ?

ಕಾಲವಾಹಿನಿಯಲ್ಲಿ ಸಿಕ್ಕಿ ನಾವೆಲ್ಲಿಗೋ
ತೆರಳುತಿಹ ಭೀತಿಯಿಹುದು ;
ಮೇಲ್ಮೇಲೆ ವಿಷವೀಚಿ ಮಾಲೆಗಳು ನುಗ್ಗುತ್ತ
ಬರುತಿಹವು ಕೊಚ್ಚುತಿಹವು.

ಕುರುಡಾದ ನಿಯಮವೊ ಕುಂಟಾದ ವಿಧಿಗಳೋ
ಈವರೆಗೆ ಪೊರೆದುವಯ್ಯ;
ಹರಿದು ಹೋಗಿಹವೀಗ ರಕ್ಷಣೆಯ ಬಂಧಗಳು
ಕಾವುದನು ಕಾಣೆನಯ್ಯ.

ಬಂಡೆಗಳು ಏನಿಹವೊ ನೀರಸುಳಿಯೇನಿಹುದೊ
ಕತ್ತಲೆಯು ಮುತ್ತುತಿಹುದು;
ಕಂಡ ದಾರಿಯುಮಲ್ಲ ಹೇಳುವರು ಮೊದಲಿಲ್ಲ
ಎತ್ತಲುಂ ಜ್ಯೋತಿಯಿಲ್ಲ.

ಸುತ್ತಲುಂ ಉರಿದಾಹ ಜೀವನಕೆ ಬಡಿದಾಟ
ತಿಮಿತಿಮಿಂಗಿಲದ ನೋಟ
ಸಾತ್ವಿಕದ ರಾಜಸದ ಬುಗ್ಗೆಗಳು ತೋರಿಲ್ಲ
ಸಮತೆ ಸೈರಣೆಗಳಿಲ್ಲ.

ಹಿರಿಯರಲಿ ಗೌರವವು ದೈವದಲಿ ನಂಬಿಕೆಯು
ಹೆಸರಿಲ್ಲದಾಗುತಿಹವು ;
ದೊರೆಯೆಂಬ ಗುರುವೆಂಬ ಪೂಜ್ಯಭಾವಗಳೆಲ್ಲ
ಉಸಿರಿಡದೆ ಮೆತ್ತಗಿಹವು.

ಕಿರಿಯರಿಗೆ ಹಿರಿಯರಿಗೆ ನಾಡಲ್ಲಿ ಆರಿಗುಂ
ನಿಯಮಗಳ ಸಹನೆಯಿಲ್ಲ;
ಸರಪಳಿಯ ಕಿತ್ತೆಸೆದ ಮದ್ದಾನೆಗಳ ಗುಂಪು
ನಯನೀತಿ ಗಣನೆಯಿಲ್ಲ.

ಎಲ್ಲರುಂ ಅರಿವಿಲ್ಲದೆಳಮಕ್ಕಳಂದದಲಿ
ಉರಿಯೊಡನೆ ಕುಣಿಯುತಿಹರು ;
ಎಲ್ಲಿಯುರಿ ಹತ್ತುವುದೊ ಹಡಗೆಲ್ಲಿ ಮಗುಚುವುದೊ
ಪರಿಹರಿಸಿ ಕಾವರಾರು ?

ಹುಚ್ಚು ಹೊಳೆಯನು ನೋಡಿ
ವಿಷವಾಹಿನಿಯ ನೋಡಿ
ಬೆರಗುವಟ್ಟಿರುವೆವಯ್ಯ ;
ಎಚ್ಚರಿಕೆ ಕೊಡಲಿಂದು ಆವ ಬೆಳಕದು ಬಂದು
ಪೊರೆಯುವುದೊ ಕಾಣೆನಯ್ಯ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಳ್ಳಾರಿ ಬಿಸಿಲೆಂದರೆ…
Next post ದಾಸಯ್ಯ

ಸಣ್ಣ ಕತೆ

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಮೇಷ್ಟ್ರು ರಂಗಪ್ಪ

    ಪ್ರಕರಣ ೫ ರಂಗಣ್ಣ ರೇಂಜಿನಲ್ಲಿ ಅಧಿಕಾರ ವಹಿಸಿ ನಾಲ್ಕು ತಿಂಗಳಾದುವು. ಸುಮಾರು ನಲವತ್ತು ಐವತ್ತು ಪಾಠಶಾಲೆಗಳ ತನಿಖೆ ಮತ್ತು ಭೇಟಿಗಳಿಂದ ಪ್ರಾಥಮಿಕ ವಿದ್ಯಾಭ್ಯಾಸದ ಸ್ಥಿತಿ ತಕ್ಕ ಮಟ್ಟಿಗೆ… Read more…