Home / ಕವನ / ಕವಿತೆ / ಎಲ್ಲಿಗೆ?

ಎಲ್ಲಿಗೆ?

ಕಾಲವಾಹಿನಿಯಲ್ಲಿ ಸಿಕ್ಕಿ ನಾವೆಲ್ಲಿಗೋ
ತೆರಳುತಿಹ ಭೀತಿಯಿಹುದು ;
ಮೇಲ್ಮೇಲೆ ವಿಷವೀಚಿ ಮಾಲೆಗಳು ನುಗ್ಗುತ್ತ
ಬರುತಿಹವು ಕೊಚ್ಚುತಿಹವು.

ಕುರುಡಾದ ನಿಯಮವೊ ಕುಂಟಾದ ವಿಧಿಗಳೋ
ಈವರೆಗೆ ಪೊರೆದುವಯ್ಯ;
ಹರಿದು ಹೋಗಿಹವೀಗ ರಕ್ಷಣೆಯ ಬಂಧಗಳು
ಕಾವುದನು ಕಾಣೆನಯ್ಯ.

ಬಂಡೆಗಳು ಏನಿಹವೊ ನೀರಸುಳಿಯೇನಿಹುದೊ
ಕತ್ತಲೆಯು ಮುತ್ತುತಿಹುದು;
ಕಂಡ ದಾರಿಯುಮಲ್ಲ ಹೇಳುವರು ಮೊದಲಿಲ್ಲ
ಎತ್ತಲುಂ ಜ್ಯೋತಿಯಿಲ್ಲ.

ಸುತ್ತಲುಂ ಉರಿದಾಹ ಜೀವನಕೆ ಬಡಿದಾಟ
ತಿಮಿತಿಮಿಂಗಿಲದ ನೋಟ
ಸಾತ್ವಿಕದ ರಾಜಸದ ಬುಗ್ಗೆಗಳು ತೋರಿಲ್ಲ
ಸಮತೆ ಸೈರಣೆಗಳಿಲ್ಲ.

ಹಿರಿಯರಲಿ ಗೌರವವು ದೈವದಲಿ ನಂಬಿಕೆಯು
ಹೆಸರಿಲ್ಲದಾಗುತಿಹವು ;
ದೊರೆಯೆಂಬ ಗುರುವೆಂಬ ಪೂಜ್ಯಭಾವಗಳೆಲ್ಲ
ಉಸಿರಿಡದೆ ಮೆತ್ತಗಿಹವು.

ಕಿರಿಯರಿಗೆ ಹಿರಿಯರಿಗೆ ನಾಡಲ್ಲಿ ಆರಿಗುಂ
ನಿಯಮಗಳ ಸಹನೆಯಿಲ್ಲ;
ಸರಪಳಿಯ ಕಿತ್ತೆಸೆದ ಮದ್ದಾನೆಗಳ ಗುಂಪು
ನಯನೀತಿ ಗಣನೆಯಿಲ್ಲ.

ಎಲ್ಲರುಂ ಅರಿವಿಲ್ಲದೆಳಮಕ್ಕಳಂದದಲಿ
ಉರಿಯೊಡನೆ ಕುಣಿಯುತಿಹರು ;
ಎಲ್ಲಿಯುರಿ ಹತ್ತುವುದೊ ಹಡಗೆಲ್ಲಿ ಮಗುಚುವುದೊ
ಪರಿಹರಿಸಿ ಕಾವರಾರು ?

ಹುಚ್ಚು ಹೊಳೆಯನು ನೋಡಿ
ವಿಷವಾಹಿನಿಯ ನೋಡಿ
ಬೆರಗುವಟ್ಟಿರುವೆವಯ್ಯ ;
ಎಚ್ಚರಿಕೆ ಕೊಡಲಿಂದು ಆವ ಬೆಳಕದು ಬಂದು
ಪೊರೆಯುವುದೊ ಕಾಣೆನಯ್ಯ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...