Home / ಕವನ / ಕವಿತೆ / ಎಲ್ಲಿಗೆ?

ಎಲ್ಲಿಗೆ?

ಕಾಲವಾಹಿನಿಯಲ್ಲಿ ಸಿಕ್ಕಿ ನಾವೆಲ್ಲಿಗೋ
ತೆರಳುತಿಹ ಭೀತಿಯಿಹುದು ;
ಮೇಲ್ಮೇಲೆ ವಿಷವೀಚಿ ಮಾಲೆಗಳು ನುಗ್ಗುತ್ತ
ಬರುತಿಹವು ಕೊಚ್ಚುತಿಹವು.

ಕುರುಡಾದ ನಿಯಮವೊ ಕುಂಟಾದ ವಿಧಿಗಳೋ
ಈವರೆಗೆ ಪೊರೆದುವಯ್ಯ;
ಹರಿದು ಹೋಗಿಹವೀಗ ರಕ್ಷಣೆಯ ಬಂಧಗಳು
ಕಾವುದನು ಕಾಣೆನಯ್ಯ.

ಬಂಡೆಗಳು ಏನಿಹವೊ ನೀರಸುಳಿಯೇನಿಹುದೊ
ಕತ್ತಲೆಯು ಮುತ್ತುತಿಹುದು;
ಕಂಡ ದಾರಿಯುಮಲ್ಲ ಹೇಳುವರು ಮೊದಲಿಲ್ಲ
ಎತ್ತಲುಂ ಜ್ಯೋತಿಯಿಲ್ಲ.

ಸುತ್ತಲುಂ ಉರಿದಾಹ ಜೀವನಕೆ ಬಡಿದಾಟ
ತಿಮಿತಿಮಿಂಗಿಲದ ನೋಟ
ಸಾತ್ವಿಕದ ರಾಜಸದ ಬುಗ್ಗೆಗಳು ತೋರಿಲ್ಲ
ಸಮತೆ ಸೈರಣೆಗಳಿಲ್ಲ.

ಹಿರಿಯರಲಿ ಗೌರವವು ದೈವದಲಿ ನಂಬಿಕೆಯು
ಹೆಸರಿಲ್ಲದಾಗುತಿಹವು ;
ದೊರೆಯೆಂಬ ಗುರುವೆಂಬ ಪೂಜ್ಯಭಾವಗಳೆಲ್ಲ
ಉಸಿರಿಡದೆ ಮೆತ್ತಗಿಹವು.

ಕಿರಿಯರಿಗೆ ಹಿರಿಯರಿಗೆ ನಾಡಲ್ಲಿ ಆರಿಗುಂ
ನಿಯಮಗಳ ಸಹನೆಯಿಲ್ಲ;
ಸರಪಳಿಯ ಕಿತ್ತೆಸೆದ ಮದ್ದಾನೆಗಳ ಗುಂಪು
ನಯನೀತಿ ಗಣನೆಯಿಲ್ಲ.

ಎಲ್ಲರುಂ ಅರಿವಿಲ್ಲದೆಳಮಕ್ಕಳಂದದಲಿ
ಉರಿಯೊಡನೆ ಕುಣಿಯುತಿಹರು ;
ಎಲ್ಲಿಯುರಿ ಹತ್ತುವುದೊ ಹಡಗೆಲ್ಲಿ ಮಗುಚುವುದೊ
ಪರಿಹರಿಸಿ ಕಾವರಾರು ?

ಹುಚ್ಚು ಹೊಳೆಯನು ನೋಡಿ
ವಿಷವಾಹಿನಿಯ ನೋಡಿ
ಬೆರಗುವಟ್ಟಿರುವೆವಯ್ಯ ;
ಎಚ್ಚರಿಕೆ ಕೊಡಲಿಂದು ಆವ ಬೆಳಕದು ಬಂದು
ಪೊರೆಯುವುದೊ ಕಾಣೆನಯ್ಯ.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...