ಪುಣ್ಯಶಾಲಿ

ನೀವೆಲ್ಲ ಪುಣ್ಯಶಾಲಿಗಳಮ್ಮ
ಹಠತೊಟ್ಟು ಬೈಗಳಿಂ ಕೋಪದಿಂ
ಕೋರಿಕೆಯ ಸಾಧಿಪಿರಿ, ಸುಖಿಸುವಿರಿ
ಒಡವೆ ವಸ್ತುವ ಪಡೆದು ಮೆರೆಯುವಿರಿ.
ಎನ್ನಲ್ಲಿ ಹರವಿಲ್ಲ ಮುನಿಸಿಲ್ಲ
ಬೈಗಳಂ ಮುನ್ನ ನಾ ಕಲಿತಿಲ್ಲ
ಅಸುವೊಂದು ದೇಹವೆರಡಾಗಿಹುದು
ಎಂದು ಸಂಸಾರ ನಡೆಸುವೆನಮ್ಮ.

ಎನ್ನ ಪತಿ ಮನೆಗೆ ಬರೆ ಮುಗುಳು ನಗೆ ಸೂಸುವೆನು
ಬಂದವರನುಪಚರಿಸಿ ನಲ್ನುಡಿಯ ನುಡಿಯುವೆನು
ಏಕಾಂತದಲ್ಲಿ ಮೆಲ್ಲನವರ ಬಳಿ ಸಾರುವೆನು
ತನಿವಣ್ಣು ಕೆನೆವಾಲು ತಾಂಬೂಲ ನೀಡುವೆನು.
ವಿನಯದಿಂ ಮೃದು ಮಧುರವಾಣಿಯಂ
“ಎಲೆ ನಲ್ಲ! ಮಾತೊಂದು ನಡೆಸುವೆಯ
ಕೇಳಲೋ ಬೇಡವೋ” ಎನ್ನುವೆನು.

ಒಡನವರು ನಗುನಗುತ
ಬರ ಸೆಳೆದು ಬಿಗಿದಪ್ಪಿ
“ಎಲೆ ದೇವಿ! ಎನ್ನುವರು
ಹೂಮಳೆಯ ಸುರಿಯುವರು
ಜಡೆ ಮುಡಿಯ ನೇವರಿಸಿ
ಬಳಿಯಲ್ಲಿ ಕುಳ್ಳಿರಿಸಿ
ತಂದೆತಾಯ್ಗಳ ಬಿಟ್ಟು ಬಂದಿರುವೆ
ಒಡಹುಟ್ಟಿದರ ಬಿಟ್ಟು ಬಂದಿರುವೆ
ನಾನೆ ಪರಮಾರಾಧ್ಯನೆಂದೆಂದು
ಕನಸಿನಲಿ ನೆನೆಸಿನಲಿ ತಿಳಿದಿರುವೆ
ಕುಸುಮ ಕೋಮಲ ಹೃದಯದಲಿ ಬಯಕೆ ಏನಿಹುದೊ
ಏನಿಹುದೊ ಈ ಎನ್ನ ಗೃಹಲಕ್ಷ್ಮಿ ಹೃದಯದಲಿ !
ರಾಣಿಯಲ್ಲವೆ ನೀನು
ನಾನು ನಿನ್ನಯ ತೊತ್ತು
ಸರ್ವಸ್ವ ನಿನಗಿರಲು
ಸರ್ವಾಧಿಕಾರಮಂ
ನಿನಗೆ ನಾ ಕೊಟ್ಟಿರಲು
ಎನ್ನ ಬೇಡಲದೇಕೆ ?”
ಎಂದೆನ್ನ ಆದರಿಸಿ ನುಡಿಯುವರು
ಕೊರಳ ಸರಿಗೆಯ ಕೀಲಿ ತೋರುವರು.

ಪ್ರೇಮ ಭಾಂಡಾಗಾರ ಎನಗಿರಲು
ಕನಕ ಭಾಂಡಾಗಾರ ಎನಗಿರಲು
ಎಲ್ಲವುಂ ಎನ್ನ ಕೈಯೊಳಗಿರಲು
ಒಪ್ಪದಲ್ಲಿ ಸಂಸಾರ ನಡೆಸುತಿರೆ
ಶಾಂತಿ ಸುಖ ನಗುವೆಲ್ಲ ತುಂಬುತಿರೆ
ಒಡವೆ ವಸ್ತುವನಿಟ್ಟು ಮೆರೆಯದಿರೆ
ಏನು ಕುಂದಪ್ಪುದೋ ನಾನರಿಯೆನಮ್ಮ ;
ನೀವೆಲ್ಲ ಪುಣ್ಯಶಾಲಿಗಳಮ್ಮ
ಎನಗೇನು ಆ ಪುಣ್ಯ ಬೇಡಮ್ಮ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇವರಿದ್ದಾನೆ
Next post ಅಮ್ಮ

ಸಣ್ಣ ಕತೆ

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…