Home / ಕವನ / ಕವಿತೆ / ಪುಣ್ಯಶಾಲಿ

ಪುಣ್ಯಶಾಲಿ

ನೀವೆಲ್ಲ ಪುಣ್ಯಶಾಲಿಗಳಮ್ಮ
ಹಠತೊಟ್ಟು ಬೈಗಳಿಂ ಕೋಪದಿಂ
ಕೋರಿಕೆಯ ಸಾಧಿಪಿರಿ, ಸುಖಿಸುವಿರಿ
ಒಡವೆ ವಸ್ತುವ ಪಡೆದು ಮೆರೆಯುವಿರಿ.
ಎನ್ನಲ್ಲಿ ಹರವಿಲ್ಲ ಮುನಿಸಿಲ್ಲ
ಬೈಗಳಂ ಮುನ್ನ ನಾ ಕಲಿತಿಲ್ಲ
ಅಸುವೊಂದು ದೇಹವೆರಡಾಗಿಹುದು
ಎಂದು ಸಂಸಾರ ನಡೆಸುವೆನಮ್ಮ.

ಎನ್ನ ಪತಿ ಮನೆಗೆ ಬರೆ ಮುಗುಳು ನಗೆ ಸೂಸುವೆನು
ಬಂದವರನುಪಚರಿಸಿ ನಲ್ನುಡಿಯ ನುಡಿಯುವೆನು
ಏಕಾಂತದಲ್ಲಿ ಮೆಲ್ಲನವರ ಬಳಿ ಸಾರುವೆನು
ತನಿವಣ್ಣು ಕೆನೆವಾಲು ತಾಂಬೂಲ ನೀಡುವೆನು.
ವಿನಯದಿಂ ಮೃದು ಮಧುರವಾಣಿಯಂ
“ಎಲೆ ನಲ್ಲ! ಮಾತೊಂದು ನಡೆಸುವೆಯ
ಕೇಳಲೋ ಬೇಡವೋ” ಎನ್ನುವೆನು.

ಒಡನವರು ನಗುನಗುತ
ಬರ ಸೆಳೆದು ಬಿಗಿದಪ್ಪಿ
“ಎಲೆ ದೇವಿ! ಎನ್ನುವರು
ಹೂಮಳೆಯ ಸುರಿಯುವರು
ಜಡೆ ಮುಡಿಯ ನೇವರಿಸಿ
ಬಳಿಯಲ್ಲಿ ಕುಳ್ಳಿರಿಸಿ
ತಂದೆತಾಯ್ಗಳ ಬಿಟ್ಟು ಬಂದಿರುವೆ
ಒಡಹುಟ್ಟಿದರ ಬಿಟ್ಟು ಬಂದಿರುವೆ
ನಾನೆ ಪರಮಾರಾಧ್ಯನೆಂದೆಂದು
ಕನಸಿನಲಿ ನೆನೆಸಿನಲಿ ತಿಳಿದಿರುವೆ
ಕುಸುಮ ಕೋಮಲ ಹೃದಯದಲಿ ಬಯಕೆ ಏನಿಹುದೊ
ಏನಿಹುದೊ ಈ ಎನ್ನ ಗೃಹಲಕ್ಷ್ಮಿ ಹೃದಯದಲಿ !
ರಾಣಿಯಲ್ಲವೆ ನೀನು
ನಾನು ನಿನ್ನಯ ತೊತ್ತು
ಸರ್ವಸ್ವ ನಿನಗಿರಲು
ಸರ್ವಾಧಿಕಾರಮಂ
ನಿನಗೆ ನಾ ಕೊಟ್ಟಿರಲು
ಎನ್ನ ಬೇಡಲದೇಕೆ ?”
ಎಂದೆನ್ನ ಆದರಿಸಿ ನುಡಿಯುವರು
ಕೊರಳ ಸರಿಗೆಯ ಕೀಲಿ ತೋರುವರು.

ಪ್ರೇಮ ಭಾಂಡಾಗಾರ ಎನಗಿರಲು
ಕನಕ ಭಾಂಡಾಗಾರ ಎನಗಿರಲು
ಎಲ್ಲವುಂ ಎನ್ನ ಕೈಯೊಳಗಿರಲು
ಒಪ್ಪದಲ್ಲಿ ಸಂಸಾರ ನಡೆಸುತಿರೆ
ಶಾಂತಿ ಸುಖ ನಗುವೆಲ್ಲ ತುಂಬುತಿರೆ
ಒಡವೆ ವಸ್ತುವನಿಟ್ಟು ಮೆರೆಯದಿರೆ
ಏನು ಕುಂದಪ್ಪುದೋ ನಾನರಿಯೆನಮ್ಮ ;
ನೀವೆಲ್ಲ ಪುಣ್ಯಶಾಲಿಗಳಮ್ಮ
ಎನಗೇನು ಆ ಪುಣ್ಯ ಬೇಡಮ್ಮ.
*****

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...