Home / ಕವನ / ಕವಿತೆ / ಒಂದು ಕಾಗದ

ಒಂದು ಕಾಗದ

ನಿಮ್ಮ ಪತ್ರ ಬಂದು ಸೇರಿ
ಎರಡು ಮೂರು ಬಾರಿಯೋದಿ
ಎಲ್ಲ ತಿಳಿದೆನು.

ನೀವು ನನಗೆ ಗಂಡನಲ್ಲ
ನಾನು ನಿಮಗೆ ಹೆಂಡಿರಲ್ಲ
ನೀವು ತಿಳಿವುದು.

ಕುಂಟು ಕಾಲು ಬಚ್ಚು ಬಾಯಿ
ಮೆಳ್ಳುಗಣ್ಣು, ನಿಮ್ಮ ಸೇವೆ
ಮಾಡಲಾರೆನು.

ಬ್ರಹ್ಮ ಹಿಂದೆ ಗಂಟು ಹಾಕಿ
ಗಂಡಹೆಂಡಿರಾದವೆಂದು
ನೀವು ಬರೆವಿರಿ.

ಬ್ರಹ್ಮಗಿಮ್ಮ ಹಾಕಲಿಲ್ಲ
ಅಪ್ಪ ತಂದು ನನಗೆ ನಿಮಗೆ
ಗಂಟುಹಾಕಿದ.

ಹೆತ್ತ ತಂದೆ ಮಾರಿಕೊಂಡು
ಮೃತ್ಯುವಾಗಿ ಕೊಲ್ಲಲಿಂತು
ಮಾಡಲೇನಿದೆ.

ಶಾಸ್ತ್ರ ಗೀಸ್ತ್ರ ತಿಳಿಯೆ ನಾನು
ಬರೆದ ಜನರು ಹೆಂಡಿರಾಗಿ
ಸೇವೆಮಾಡಲಿ.

ನೋಟ ಬೇಟ ಗಂಡಿಗೆಂದು
ಧರ್ಮಶಾಸ್ತ್ರ ಹೆಣ್ಣಿಗೆಂದು
ನುಡಿವರೆಲ್ಲರು.

ಕೋರ್ಟು ಗೀರ್ಟು ಆಡಬೇಡಿ
ಜಡ್ಜಿ ಧರ್ಮವೇನು ಬಲ್ಲ
ನಾನು ತಿಳಿಸುವೆ.

ಕುರ್ಚಿ ಮೇಲೆ ಕುಳಿತುಕೊಂಡು
ಏನೋ ಗೀಚಿ ಎದ್ದು ಬರುವ
ಮಾತಿದಲ್ಲವು.

ತನ್ನ ಮಗಳ ನಿಮಗೆ ಕೊಟ್ಟು
ತನ್ನ ಮಗನ ಎನಗೆ ಕೊಟ್ಟು
ಮದುವೆ ಮಾಡಲಿ.

ಎನ್ನ ದುಃಖ ಆರಿಗುಂಟು
ಬಾಳಬೇಕು, ಬಾಳಲಾರೆ
ಹಾಳು ಲೋಕವು.

ಬಯ್ವ ಜನರು ಜರಿವ ಜನರು
ಅವರಿಗೇನು, ಬಾಯಿ ಕೊಬ್ಬು
ನೋವು ತೆಗೆವರೆ?

ಬಲ್ಲೆನವರ ಮನದ ಭಾವ
ಇಂದು ನಾನು ಸೂಳೆಯಾಗೆ
ಸುಖಿಸರೆಲ್ಲರು.

ಭೂಮಿ ಮೇಲೆ ಇರುವಳಲ್ಲ
ಇಂದೆ ನಾನು ಕೆರೆಗೆ ಬಿದ್ದು
ಜನ್ಮ ನೀಗುವೆ.

ಶಾಸ್ತ್ರ ಧರ್ಮ ತಣ್ಣಗಾಗಿ
ಬಯ್ವ ಜನರು ಉರಿದು ಹೋಗಿ
ಲೋಕವಡಗಲಿ.
*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...