ಒಂದು ಕಾಗದ

ನಿಮ್ಮ ಪತ್ರ ಬಂದು ಸೇರಿ
ಎರಡು ಮೂರು ಬಾರಿಯೋದಿ
ಎಲ್ಲ ತಿಳಿದೆನು.

ನೀವು ನನಗೆ ಗಂಡನಲ್ಲ
ನಾನು ನಿಮಗೆ ಹೆಂಡಿರಲ್ಲ
ನೀವು ತಿಳಿವುದು.

ಕುಂಟು ಕಾಲು ಬಚ್ಚು ಬಾಯಿ
ಮೆಳ್ಳುಗಣ್ಣು, ನಿಮ್ಮ ಸೇವೆ
ಮಾಡಲಾರೆನು.

ಬ್ರಹ್ಮ ಹಿಂದೆ ಗಂಟು ಹಾಕಿ
ಗಂಡಹೆಂಡಿರಾದವೆಂದು
ನೀವು ಬರೆವಿರಿ.

ಬ್ರಹ್ಮಗಿಮ್ಮ ಹಾಕಲಿಲ್ಲ
ಅಪ್ಪ ತಂದು ನನಗೆ ನಿಮಗೆ
ಗಂಟುಹಾಕಿದ.

ಹೆತ್ತ ತಂದೆ ಮಾರಿಕೊಂಡು
ಮೃತ್ಯುವಾಗಿ ಕೊಲ್ಲಲಿಂತು
ಮಾಡಲೇನಿದೆ.

ಶಾಸ್ತ್ರ ಗೀಸ್ತ್ರ ತಿಳಿಯೆ ನಾನು
ಬರೆದ ಜನರು ಹೆಂಡಿರಾಗಿ
ಸೇವೆಮಾಡಲಿ.

ನೋಟ ಬೇಟ ಗಂಡಿಗೆಂದು
ಧರ್ಮಶಾಸ್ತ್ರ ಹೆಣ್ಣಿಗೆಂದು
ನುಡಿವರೆಲ್ಲರು.

ಕೋರ್ಟು ಗೀರ್ಟು ಆಡಬೇಡಿ
ಜಡ್ಜಿ ಧರ್ಮವೇನು ಬಲ್ಲ
ನಾನು ತಿಳಿಸುವೆ.

ಕುರ್ಚಿ ಮೇಲೆ ಕುಳಿತುಕೊಂಡು
ಏನೋ ಗೀಚಿ ಎದ್ದು ಬರುವ
ಮಾತಿದಲ್ಲವು.

ತನ್ನ ಮಗಳ ನಿಮಗೆ ಕೊಟ್ಟು
ತನ್ನ ಮಗನ ಎನಗೆ ಕೊಟ್ಟು
ಮದುವೆ ಮಾಡಲಿ.

ಎನ್ನ ದುಃಖ ಆರಿಗುಂಟು
ಬಾಳಬೇಕು, ಬಾಳಲಾರೆ
ಹಾಳು ಲೋಕವು.

ಬಯ್ವ ಜನರು ಜರಿವ ಜನರು
ಅವರಿಗೇನು, ಬಾಯಿ ಕೊಬ್ಬು
ನೋವು ತೆಗೆವರೆ?

ಬಲ್ಲೆನವರ ಮನದ ಭಾವ
ಇಂದು ನಾನು ಸೂಳೆಯಾಗೆ
ಸುಖಿಸರೆಲ್ಲರು.

ಭೂಮಿ ಮೇಲೆ ಇರುವಳಲ್ಲ
ಇಂದೆ ನಾನು ಕೆರೆಗೆ ಬಿದ್ದು
ಜನ್ಮ ನೀಗುವೆ.

ಶಾಸ್ತ್ರ ಧರ್ಮ ತಣ್ಣಗಾಗಿ
ಬಯ್ವ ಜನರು ಉರಿದು ಹೋಗಿ
ಲೋಕವಡಗಲಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೆನಪುಗಳಿವೆ… ಕೊಳ್ಳಿ!
Next post ಕಾಯಿ ಕಾಯಿ

ಸಣ್ಣ ಕತೆ

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…