Home / ಕವನ / ಕವಿತೆ / ವೇದಾಂತ

ವೇದಾಂತ

ವೇದಾಂತ ಹೇಳಬಹುದು
ಎಲ್ಲರೂ ಕೇಳಬಹುದು
ಶಾಲನ್ನು ಸುತ್ತಿಕೊಂಡು
ಬಿರುದನ್ನು ಧರಿಸಿಕೊಂಡು
ವ್ಯಾಖ್ಯಾನ ಮಾಡಬಹುದು
ಪುಸ್ತಕವ ಬರೆಯಬಹುದು
ವೇದಾಂತ ಸಮಯಕ್ಕೆ ಬರುವುದೇನು ?
ಕರುಳನ್ನು ಸಂತವಿಡಲಪ್ಪುದೇನು ?

ಕಷ್ಟಗಳು ಬಂದು ಮುತ್ತಿ
ದುಃಖಗಳು ಬಂದು ಒತ್ತಿ
ರೋಗಗಳು ಬಂದು ಹತ್ತಿ
ಸಾಲಗಳು ಬಂದು ಸುತ್ತಿ
ಕಣ್ಕಣು ಬಿಡುತಲಾಗ
ಮತಿಗೆಟ್ಟು ಹೋಗುವಾಗ
ವೇದಾಂತ ಬರುವುದನ್ನು ನೋಡಬೇಕು
ವೇದಾಂತ ನುಡಿವುದನು ಕೇಳಬೇಕು.
ತಾನಿದ್ದು ಮುದುಕನಾಗಿ
ಬೆಳೆದ ಮಗ ತೀರಿಹೋಗಿ
ಮೊಮ್ಮಗನು ಬಳಿಗೆ ಬಂದು
ಬೆಪ್ಪಾಗಿಯಳುತ ನಿಂದು
ಬಸಿರೆಲ್ಲ ಕುದಿಯುವಾಗ
ಕೊರಳ ಸೆರೆ ಬಿಗಿಯುವಾಗ
ಹೆಣವನ್ನು ಸುಡುಗಾಡಿಗೊಯ್ಯುವಾಗ
ಚಿಕ್ಕ ಸೊಸೆ ಮುಸುಕಿಟ್ಟು ಕೊರಗುವಾಗ;

ಮುಡುಪನ್ನು ಕಟ್ಟಿ ತಂದು
ಮುದ್ದು ಮಗಳಳುತ ನಿಂದು
ಪತಿಭಿಕ್ಷೆ ಬೇಡಲಾಗಿ
ಕಡೆಗೆಲ್ಲ ತೀರಲಾಗಿ
ತನ್ನ ಪತಿ ಹೋದನೆಂದು
ತನ್ನ ಬಾಳ್ ಮುಗಿಯಿತೆಂದು
ನೆಲದಲ್ಲಿ ಮೈಮರೆದು ಬೀಳುವಾಗ
ಕಣ್ಣೊಡೆದು ಎದೆಬಿಚ್ಚಿ ನೋಡುವಾಗ;

ಮುದ್ದಾಡಿ ಬೆಳಸಿದಂಥ
ಮನೆಯೆಲ್ಲ ಬೆಳಗಿದಂಥ
ಮಗುವನ್ನು ಮೃತ್ಯು ಹಿಡಿದು
ಹೆತ್ತವಳು ಬಸಿರು ಹಿಡಿದು
“ಎನ್ನ ಕಂದನ್ನ ಕೊಡಿರಿ
ಎನ್ನ ರತ್ನನ್ನ ಕೊಡಿರಿ”
ಎಂದಂದು ಬಿಕ್ಕುತ್ತ ಕೇಳುವಾಗ
ತೊಡೆ ಮೇಲೆ ಜೀವವದು ನಂದುವಾಗ;

ಊರಾಚೆ ಗುಣಿಯ ತೊಡಿ
ಇಡಲಲ್ಲಿ ಅಣಿಯ ಮಾಡಿ
‘ಬದುಕಿದೆಯೊ ಏನೋ!’ ಎಂದು
ಭ್ರಮೆಯಿಂದ ಆಸೆ ಬಂದು
ಮತ್ತೊಮ್ಮೆ ಮುಟ್ಟಿ ನೋಡಿ
ಕಡೆಗೊಮ್ಮೆ ಮುಖವ ನೋಡಿ
ಮಣ್ಣಿಂದ ಕಂದನ್ನ ಮುಚ್ಚುವಾಗ
ಜಗವೆಲ್ಲ ಕಣ್ಗಂದು ಸುತ್ತುವಾಗ;

ಇವರಾರ ಮಕ್ಕಳೆಂದು
ಅವರಾರ ನೆಂಟರೆಂದು
ಋಣ ಶೇಷ ತೀರಿತೆಂದು
ಸಾಲಿಗರು ಹೋದರೆಂದು
ಕಣ್ಣೀರು ಬತ್ತಿಸುತ್ತ
ಎದೆ ಕಲ್ಲು ಮಾಡಿಸುತ್ತ
ವೇದಾಂತ ! ವೇದಾಂತ ! ಇರುವುದೇನು
ಇದ್ದರೂ ಅದರಿಂದ ಬಂದುದೇನು ?

ಕಲ್ಲೆದೆಯ ನೀರುಮಾಡಿ
ಕಣ್ಣೀರು ಹರಿದು ಕೋಡಿ
ಮಾಲಿನ್ಯ ಹೋಗುತಿರಲು
ಕರುಣ ರಸ ತುಂಬುತಿರಲು
ಆರ್ತರಿಗೆ ಮರುಗುವಂತೆ
ಕೈನೀಡಿ ಸಲಹುವಂತೆ
ವೇದಾಂತ ನಮಗೆಲ್ಲ ತಿಳಿವ ತರಲಿ
ಶುದ್ಧಾತ್ಮ ಮಾನವರ ಮಾಡುತಿರಲಿ.
*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...