Home / ಕವನ / ಕವಿತೆ / ಚಂಡಿಗೆ ಮೊರೆ

ಚಂಡಿಗೆ ಮೊರೆ

ಚಂಡಿ! ನೀ ಗುಣವಂತೆ ಬರಿದೆ ದೂರಿದನವನು,
ಮುದಿಗೂಬೆ ಹೇಳಿದುದೆ ಲೋಕಮೆಚ್ಚಿಕೆಯಾಯ್ತು
ಕಂಡ ಕಂಡವರೆಲ್ಲ ಚಂಡಿತನವೆನಲಾಯ್ತು.
ನಿನ್ನಂಥ ಸುಗುಣಿಗಳು ಈಗೆಲ್ಲಿ ದೊರೆಯುವರು !
ವಿಧಿಯ ಕಾರ್ಪಣ್ಯವಂ ಸೃಷ್ಟಿ ವೈರಸ್ಯವಂ
ಈ ಯುಗದ ಹೆಂಗಳಂ ಬಣ್ಣಿಸಲುಮಳವಲ್ಲ.
ಬಾರೆಂದೊಡಂ ಇಲ್ಲ ಹೋಗೆಂದೊಡಂ ಇಲ್ಲ
ಬೇಕೆಂದೊಡಂ ಇಲ್ಲ ಬೇಡೆಂದೊಡಂ ಇಲ್ಲ
ಕಪ್ಪಕಾಣಿಕೆಗಿಲ್ಲ ನಲ್ನುಡಿಗೆ ಮೊದಲಿಲ್ಲ
ಕೋಪತಾಪಕುಮಿಲ್ಲ ಬೇಡಿಕೆಗೆ ಮುನ್ನಿಲ್ಲ
ಏನೇನ ಪೇಳ್ದೊಡಂ ಅವರಲ್ಲಿ ನಿಷ್ಪಲಂ
ಅವರ ಕೈವಿಡಿದರ್ಗೆ ಇಹದಿ ನಾಯಕ ನರಕ.
ಜಗದ ಮೊಂಡುಗಳೆಲ್ಲ ಒಳಸಂಚು ಮಾಡಿಹರೊ
ಹಿರಿಯ ಗುರು ಬೋಧಕಳು ಆವ ದೇವತೆಯಿಹಳೊ
ಇಂತಿರಲು ಮಾತಾಯಿ ಎಂತಿಹಳೊ
ಇದ್ದಿದ್ದು ಆಕೆಗೇನಪರಾಧ ಮಾಡಿದೆವೋ !
ನಿನ್ನ ಗುಣವರಿತರಿತು ವಿಪರೀತಮಂ ನುಡಿದು
ಬಾಳಲಾರದೆ ತಾನು ಕೋಪದಿಂ ಶಾಪಮಂ
ಕೊಟ್ಟ ತಾಪಸನನುದ್ದಾಲಕನ ಬುದ್ದಿಯಂ
ದುರ್ಬುದ್ದಿಯಂ ಜರೆದು ನಿನ್ನ ಮನ್ನಿ ಸರಮ್ಮ !
ಸೂರ್ಯೋದಯಕೆ ಚನ್ನ ಕೋವಳೆಯು ನಗಲೇನೊ
ಚಂದ್ರೋದಯಕೆ ಚನ್ನ ತಾವರೆಯು ನಗಲೇನೊ
ನಿಯಮ ಪಲ್ಲಟವಾಗಿ ಬೇರೊಂದು ವಿಧಿಯಾಗಿ
ಬೆಳಗಿದೊಡೆ ಸಾಲದೇಂ ? ನೀನಿಂದು ಬಾರಮ್ಮ !
ನಿನ್ನ ಸುಗುಣದ ಸಿರಿಯ, ನಿನ್ನ ಘನತರ ವಿಧಿಯ
ಈ ಹೆಂಗಳಿಗೆ ತೋರಿ ಗುಣವಂತೆಯೆನಿಸಮ್ಮ.
ಅವರಲ್ಪ ಸಂಸಾರವಂ ದುಃಖಸಾಗರವ
ನಿನ್ನೊಲುಮೆಯಂ ಬೀರಿ ಸುಖಜಲಧಿ ಮಾಡಮ್ಮ !
ಕಣ್ಣೀರ ಕೋಡಿಗಳು ಚಿಂತಾಗ್ನಿ ನಂದಿಲ್ಲ
ಕಲಿತ ವಿದ್ಯೆಗಳಿಂದ ಅಜ್ಞಾನವಳಿದಿಲ್ಲ
ಲೋಕವಾಳಿದೊಡೇನು ಆಳಾಗಲೊಪ್ಪುವರು
ಶಾಂತಿ ದೊರೆತೊಡೆ ಸಾಕು, ಏನಾದರಾಗುವರು ;
ಆಳಲ್ಲ ಅರಸ ಏನುಮಂ ಸೈರಿಸರು
ಪತಿಯ ಬಾಳ್ಕೆಯ ಲತೆಗೆ ವಿಷವಾಗಿ ಹರಿಯುವರು
ಅವರ ಹರುಷದ ಗುಡಿಗೆ ಸಿಡಿಲಾಗಿ ಎರಗುವರು
ಈ ಹೆಂಗಳನು ಕೋಟಿ ಕೌಂಡಿನ್ಯರರಿದಪರೆ
ಬ್ರಹ್ಮಂಗೆ ರುದ್ರಂಗೆ ವಿಷ್ಣುವಿಂಗಳವಲ್ಲ !
ವಿಪರೀತೆಯಾದೊಡಂ ಗುಣವಂತೆ ನೀನಮ್ಮ
ಚಂಡಿಯೆನಿಸಿರ್ದೊಡಂ ಹದಿಬದೆಯು ನೀನಮ್ಮ
ವೇದಜಡ ಛಾಂದಸಂ ಸುಖಿಸಿದಂ ದೂರಿದಂ
ಅರೆಯಾಗಿ ಹೋಗೆಂದು ನೆವಮಿಲ್ಲದುಸುರಿದಂ
ಲೋಕ ನಿನ್ನನು ಹಳಿದು ಮರುಗುವುದು ತಾಪಸಗೆ
ಲೋಕ ಮತವನು ನಚ್ಚಿ ನಡೆಯೆಂದು ನುಡಿಯುವರು
ಎಂತು ನಚ್ಚುವುದೆಂತು ಮೆಚ್ಚುವುದು ವಿಪರೀತ
ಲೋಕಮಂ, ಎಂತು ನಡೆಯುವುದು ನಾನರಿಯೆನಮ್ಮ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...