ಚಂಡಿಗೆ ಮೊರೆ

ಚಂಡಿ! ನೀ ಗುಣವಂತೆ ಬರಿದೆ ದೂರಿದನವನು,
ಮುದಿಗೂಬೆ ಹೇಳಿದುದೆ ಲೋಕಮೆಚ್ಚಿಕೆಯಾಯ್ತು
ಕಂಡ ಕಂಡವರೆಲ್ಲ ಚಂಡಿತನವೆನಲಾಯ್ತು.
ನಿನ್ನಂಥ ಸುಗುಣಿಗಳು ಈಗೆಲ್ಲಿ ದೊರೆಯುವರು !
ವಿಧಿಯ ಕಾರ್ಪಣ್ಯವಂ ಸೃಷ್ಟಿ ವೈರಸ್ಯವಂ
ಈ ಯುಗದ ಹೆಂಗಳಂ ಬಣ್ಣಿಸಲುಮಳವಲ್ಲ.
ಬಾರೆಂದೊಡಂ ಇಲ್ಲ ಹೋಗೆಂದೊಡಂ ಇಲ್ಲ
ಬೇಕೆಂದೊಡಂ ಇಲ್ಲ ಬೇಡೆಂದೊಡಂ ಇಲ್ಲ
ಕಪ್ಪಕಾಣಿಕೆಗಿಲ್ಲ ನಲ್ನುಡಿಗೆ ಮೊದಲಿಲ್ಲ
ಕೋಪತಾಪಕುಮಿಲ್ಲ ಬೇಡಿಕೆಗೆ ಮುನ್ನಿಲ್ಲ
ಏನೇನ ಪೇಳ್ದೊಡಂ ಅವರಲ್ಲಿ ನಿಷ್ಪಲಂ
ಅವರ ಕೈವಿಡಿದರ್ಗೆ ಇಹದಿ ನಾಯಕ ನರಕ.
ಜಗದ ಮೊಂಡುಗಳೆಲ್ಲ ಒಳಸಂಚು ಮಾಡಿಹರೊ
ಹಿರಿಯ ಗುರು ಬೋಧಕಳು ಆವ ದೇವತೆಯಿಹಳೊ
ಇಂತಿರಲು ಮಾತಾಯಿ ಎಂತಿಹಳೊ
ಇದ್ದಿದ್ದು ಆಕೆಗೇನಪರಾಧ ಮಾಡಿದೆವೋ !
ನಿನ್ನ ಗುಣವರಿತರಿತು ವಿಪರೀತಮಂ ನುಡಿದು
ಬಾಳಲಾರದೆ ತಾನು ಕೋಪದಿಂ ಶಾಪಮಂ
ಕೊಟ್ಟ ತಾಪಸನನುದ್ದಾಲಕನ ಬುದ್ದಿಯಂ
ದುರ್ಬುದ್ದಿಯಂ ಜರೆದು ನಿನ್ನ ಮನ್ನಿ ಸರಮ್ಮ !
ಸೂರ್ಯೋದಯಕೆ ಚನ್ನ ಕೋವಳೆಯು ನಗಲೇನೊ
ಚಂದ್ರೋದಯಕೆ ಚನ್ನ ತಾವರೆಯು ನಗಲೇನೊ
ನಿಯಮ ಪಲ್ಲಟವಾಗಿ ಬೇರೊಂದು ವಿಧಿಯಾಗಿ
ಬೆಳಗಿದೊಡೆ ಸಾಲದೇಂ ? ನೀನಿಂದು ಬಾರಮ್ಮ !
ನಿನ್ನ ಸುಗುಣದ ಸಿರಿಯ, ನಿನ್ನ ಘನತರ ವಿಧಿಯ
ಈ ಹೆಂಗಳಿಗೆ ತೋರಿ ಗುಣವಂತೆಯೆನಿಸಮ್ಮ.
ಅವರಲ್ಪ ಸಂಸಾರವಂ ದುಃಖಸಾಗರವ
ನಿನ್ನೊಲುಮೆಯಂ ಬೀರಿ ಸುಖಜಲಧಿ ಮಾಡಮ್ಮ !
ಕಣ್ಣೀರ ಕೋಡಿಗಳು ಚಿಂತಾಗ್ನಿ ನಂದಿಲ್ಲ
ಕಲಿತ ವಿದ್ಯೆಗಳಿಂದ ಅಜ್ಞಾನವಳಿದಿಲ್ಲ
ಲೋಕವಾಳಿದೊಡೇನು ಆಳಾಗಲೊಪ್ಪುವರು
ಶಾಂತಿ ದೊರೆತೊಡೆ ಸಾಕು, ಏನಾದರಾಗುವರು ;
ಆಳಲ್ಲ ಅರಸ ಏನುಮಂ ಸೈರಿಸರು
ಪತಿಯ ಬಾಳ್ಕೆಯ ಲತೆಗೆ ವಿಷವಾಗಿ ಹರಿಯುವರು
ಅವರ ಹರುಷದ ಗುಡಿಗೆ ಸಿಡಿಲಾಗಿ ಎರಗುವರು
ಈ ಹೆಂಗಳನು ಕೋಟಿ ಕೌಂಡಿನ್ಯರರಿದಪರೆ
ಬ್ರಹ್ಮಂಗೆ ರುದ್ರಂಗೆ ವಿಷ್ಣುವಿಂಗಳವಲ್ಲ !
ವಿಪರೀತೆಯಾದೊಡಂ ಗುಣವಂತೆ ನೀನಮ್ಮ
ಚಂಡಿಯೆನಿಸಿರ್ದೊಡಂ ಹದಿಬದೆಯು ನೀನಮ್ಮ
ವೇದಜಡ ಛಾಂದಸಂ ಸುಖಿಸಿದಂ ದೂರಿದಂ
ಅರೆಯಾಗಿ ಹೋಗೆಂದು ನೆವಮಿಲ್ಲದುಸುರಿದಂ
ಲೋಕ ನಿನ್ನನು ಹಳಿದು ಮರುಗುವುದು ತಾಪಸಗೆ
ಲೋಕ ಮತವನು ನಚ್ಚಿ ನಡೆಯೆಂದು ನುಡಿಯುವರು
ಎಂತು ನಚ್ಚುವುದೆಂತು ಮೆಚ್ಚುವುದು ವಿಪರೀತ
ಲೋಕಮಂ, ಎಂತು ನಡೆಯುವುದು ನಾನರಿಯೆನಮ್ಮ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರ್‍ದಾಗೆ…
Next post ಪನ್ನೀರು

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…