ಚಂಡಿಗೆ ಮೊರೆ

ಚಂಡಿ! ನೀ ಗುಣವಂತೆ ಬರಿದೆ ದೂರಿದನವನು,
ಮುದಿಗೂಬೆ ಹೇಳಿದುದೆ ಲೋಕಮೆಚ್ಚಿಕೆಯಾಯ್ತು
ಕಂಡ ಕಂಡವರೆಲ್ಲ ಚಂಡಿತನವೆನಲಾಯ್ತು.
ನಿನ್ನಂಥ ಸುಗುಣಿಗಳು ಈಗೆಲ್ಲಿ ದೊರೆಯುವರು !
ವಿಧಿಯ ಕಾರ್ಪಣ್ಯವಂ ಸೃಷ್ಟಿ ವೈರಸ್ಯವಂ
ಈ ಯುಗದ ಹೆಂಗಳಂ ಬಣ್ಣಿಸಲುಮಳವಲ್ಲ.
ಬಾರೆಂದೊಡಂ ಇಲ್ಲ ಹೋಗೆಂದೊಡಂ ಇಲ್ಲ
ಬೇಕೆಂದೊಡಂ ಇಲ್ಲ ಬೇಡೆಂದೊಡಂ ಇಲ್ಲ
ಕಪ್ಪಕಾಣಿಕೆಗಿಲ್ಲ ನಲ್ನುಡಿಗೆ ಮೊದಲಿಲ್ಲ
ಕೋಪತಾಪಕುಮಿಲ್ಲ ಬೇಡಿಕೆಗೆ ಮುನ್ನಿಲ್ಲ
ಏನೇನ ಪೇಳ್ದೊಡಂ ಅವರಲ್ಲಿ ನಿಷ್ಪಲಂ
ಅವರ ಕೈವಿಡಿದರ್ಗೆ ಇಹದಿ ನಾಯಕ ನರಕ.
ಜಗದ ಮೊಂಡುಗಳೆಲ್ಲ ಒಳಸಂಚು ಮಾಡಿಹರೊ
ಹಿರಿಯ ಗುರು ಬೋಧಕಳು ಆವ ದೇವತೆಯಿಹಳೊ
ಇಂತಿರಲು ಮಾತಾಯಿ ಎಂತಿಹಳೊ
ಇದ್ದಿದ್ದು ಆಕೆಗೇನಪರಾಧ ಮಾಡಿದೆವೋ !
ನಿನ್ನ ಗುಣವರಿತರಿತು ವಿಪರೀತಮಂ ನುಡಿದು
ಬಾಳಲಾರದೆ ತಾನು ಕೋಪದಿಂ ಶಾಪಮಂ
ಕೊಟ್ಟ ತಾಪಸನನುದ್ದಾಲಕನ ಬುದ್ದಿಯಂ
ದುರ್ಬುದ್ದಿಯಂ ಜರೆದು ನಿನ್ನ ಮನ್ನಿ ಸರಮ್ಮ !
ಸೂರ್ಯೋದಯಕೆ ಚನ್ನ ಕೋವಳೆಯು ನಗಲೇನೊ
ಚಂದ್ರೋದಯಕೆ ಚನ್ನ ತಾವರೆಯು ನಗಲೇನೊ
ನಿಯಮ ಪಲ್ಲಟವಾಗಿ ಬೇರೊಂದು ವಿಧಿಯಾಗಿ
ಬೆಳಗಿದೊಡೆ ಸಾಲದೇಂ ? ನೀನಿಂದು ಬಾರಮ್ಮ !
ನಿನ್ನ ಸುಗುಣದ ಸಿರಿಯ, ನಿನ್ನ ಘನತರ ವಿಧಿಯ
ಈ ಹೆಂಗಳಿಗೆ ತೋರಿ ಗುಣವಂತೆಯೆನಿಸಮ್ಮ.
ಅವರಲ್ಪ ಸಂಸಾರವಂ ದುಃಖಸಾಗರವ
ನಿನ್ನೊಲುಮೆಯಂ ಬೀರಿ ಸುಖಜಲಧಿ ಮಾಡಮ್ಮ !
ಕಣ್ಣೀರ ಕೋಡಿಗಳು ಚಿಂತಾಗ್ನಿ ನಂದಿಲ್ಲ
ಕಲಿತ ವಿದ್ಯೆಗಳಿಂದ ಅಜ್ಞಾನವಳಿದಿಲ್ಲ
ಲೋಕವಾಳಿದೊಡೇನು ಆಳಾಗಲೊಪ್ಪುವರು
ಶಾಂತಿ ದೊರೆತೊಡೆ ಸಾಕು, ಏನಾದರಾಗುವರು ;
ಆಳಲ್ಲ ಅರಸ ಏನುಮಂ ಸೈರಿಸರು
ಪತಿಯ ಬಾಳ್ಕೆಯ ಲತೆಗೆ ವಿಷವಾಗಿ ಹರಿಯುವರು
ಅವರ ಹರುಷದ ಗುಡಿಗೆ ಸಿಡಿಲಾಗಿ ಎರಗುವರು
ಈ ಹೆಂಗಳನು ಕೋಟಿ ಕೌಂಡಿನ್ಯರರಿದಪರೆ
ಬ್ರಹ್ಮಂಗೆ ರುದ್ರಂಗೆ ವಿಷ್ಣುವಿಂಗಳವಲ್ಲ !
ವಿಪರೀತೆಯಾದೊಡಂ ಗುಣವಂತೆ ನೀನಮ್ಮ
ಚಂಡಿಯೆನಿಸಿರ್ದೊಡಂ ಹದಿಬದೆಯು ನೀನಮ್ಮ
ವೇದಜಡ ಛಾಂದಸಂ ಸುಖಿಸಿದಂ ದೂರಿದಂ
ಅರೆಯಾಗಿ ಹೋಗೆಂದು ನೆವಮಿಲ್ಲದುಸುರಿದಂ
ಲೋಕ ನಿನ್ನನು ಹಳಿದು ಮರುಗುವುದು ತಾಪಸಗೆ
ಲೋಕ ಮತವನು ನಚ್ಚಿ ನಡೆಯೆಂದು ನುಡಿಯುವರು
ಎಂತು ನಚ್ಚುವುದೆಂತು ಮೆಚ್ಚುವುದು ವಿಪರೀತ
ಲೋಕಮಂ, ಎಂತು ನಡೆಯುವುದು ನಾನರಿಯೆನಮ್ಮ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರ್‍ದಾಗೆ…
Next post ಪನ್ನೀರು

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

cheap jordans|wholesale air max|wholesale jordans|wholesale jewelry|wholesale jerseys