Home / ಕವನ / ಕವಿತೆ / ಚಂಡಿಗೆ ಮೊರೆ

ಚಂಡಿಗೆ ಮೊರೆ

ಚಂಡಿ! ನೀ ಗುಣವಂತೆ ಬರಿದೆ ದೂರಿದನವನು,
ಮುದಿಗೂಬೆ ಹೇಳಿದುದೆ ಲೋಕಮೆಚ್ಚಿಕೆಯಾಯ್ತು
ಕಂಡ ಕಂಡವರೆಲ್ಲ ಚಂಡಿತನವೆನಲಾಯ್ತು.
ನಿನ್ನಂಥ ಸುಗುಣಿಗಳು ಈಗೆಲ್ಲಿ ದೊರೆಯುವರು !
ವಿಧಿಯ ಕಾರ್ಪಣ್ಯವಂ ಸೃಷ್ಟಿ ವೈರಸ್ಯವಂ
ಈ ಯುಗದ ಹೆಂಗಳಂ ಬಣ್ಣಿಸಲುಮಳವಲ್ಲ.
ಬಾರೆಂದೊಡಂ ಇಲ್ಲ ಹೋಗೆಂದೊಡಂ ಇಲ್ಲ
ಬೇಕೆಂದೊಡಂ ಇಲ್ಲ ಬೇಡೆಂದೊಡಂ ಇಲ್ಲ
ಕಪ್ಪಕಾಣಿಕೆಗಿಲ್ಲ ನಲ್ನುಡಿಗೆ ಮೊದಲಿಲ್ಲ
ಕೋಪತಾಪಕುಮಿಲ್ಲ ಬೇಡಿಕೆಗೆ ಮುನ್ನಿಲ್ಲ
ಏನೇನ ಪೇಳ್ದೊಡಂ ಅವರಲ್ಲಿ ನಿಷ್ಪಲಂ
ಅವರ ಕೈವಿಡಿದರ್ಗೆ ಇಹದಿ ನಾಯಕ ನರಕ.
ಜಗದ ಮೊಂಡುಗಳೆಲ್ಲ ಒಳಸಂಚು ಮಾಡಿಹರೊ
ಹಿರಿಯ ಗುರು ಬೋಧಕಳು ಆವ ದೇವತೆಯಿಹಳೊ
ಇಂತಿರಲು ಮಾತಾಯಿ ಎಂತಿಹಳೊ
ಇದ್ದಿದ್ದು ಆಕೆಗೇನಪರಾಧ ಮಾಡಿದೆವೋ !
ನಿನ್ನ ಗುಣವರಿತರಿತು ವಿಪರೀತಮಂ ನುಡಿದು
ಬಾಳಲಾರದೆ ತಾನು ಕೋಪದಿಂ ಶಾಪಮಂ
ಕೊಟ್ಟ ತಾಪಸನನುದ್ದಾಲಕನ ಬುದ್ದಿಯಂ
ದುರ್ಬುದ್ದಿಯಂ ಜರೆದು ನಿನ್ನ ಮನ್ನಿ ಸರಮ್ಮ !
ಸೂರ್ಯೋದಯಕೆ ಚನ್ನ ಕೋವಳೆಯು ನಗಲೇನೊ
ಚಂದ್ರೋದಯಕೆ ಚನ್ನ ತಾವರೆಯು ನಗಲೇನೊ
ನಿಯಮ ಪಲ್ಲಟವಾಗಿ ಬೇರೊಂದು ವಿಧಿಯಾಗಿ
ಬೆಳಗಿದೊಡೆ ಸಾಲದೇಂ ? ನೀನಿಂದು ಬಾರಮ್ಮ !
ನಿನ್ನ ಸುಗುಣದ ಸಿರಿಯ, ನಿನ್ನ ಘನತರ ವಿಧಿಯ
ಈ ಹೆಂಗಳಿಗೆ ತೋರಿ ಗುಣವಂತೆಯೆನಿಸಮ್ಮ.
ಅವರಲ್ಪ ಸಂಸಾರವಂ ದುಃಖಸಾಗರವ
ನಿನ್ನೊಲುಮೆಯಂ ಬೀರಿ ಸುಖಜಲಧಿ ಮಾಡಮ್ಮ !
ಕಣ್ಣೀರ ಕೋಡಿಗಳು ಚಿಂತಾಗ್ನಿ ನಂದಿಲ್ಲ
ಕಲಿತ ವಿದ್ಯೆಗಳಿಂದ ಅಜ್ಞಾನವಳಿದಿಲ್ಲ
ಲೋಕವಾಳಿದೊಡೇನು ಆಳಾಗಲೊಪ್ಪುವರು
ಶಾಂತಿ ದೊರೆತೊಡೆ ಸಾಕು, ಏನಾದರಾಗುವರು ;
ಆಳಲ್ಲ ಅರಸ ಏನುಮಂ ಸೈರಿಸರು
ಪತಿಯ ಬಾಳ್ಕೆಯ ಲತೆಗೆ ವಿಷವಾಗಿ ಹರಿಯುವರು
ಅವರ ಹರುಷದ ಗುಡಿಗೆ ಸಿಡಿಲಾಗಿ ಎರಗುವರು
ಈ ಹೆಂಗಳನು ಕೋಟಿ ಕೌಂಡಿನ್ಯರರಿದಪರೆ
ಬ್ರಹ್ಮಂಗೆ ರುದ್ರಂಗೆ ವಿಷ್ಣುವಿಂಗಳವಲ್ಲ !
ವಿಪರೀತೆಯಾದೊಡಂ ಗುಣವಂತೆ ನೀನಮ್ಮ
ಚಂಡಿಯೆನಿಸಿರ್ದೊಡಂ ಹದಿಬದೆಯು ನೀನಮ್ಮ
ವೇದಜಡ ಛಾಂದಸಂ ಸುಖಿಸಿದಂ ದೂರಿದಂ
ಅರೆಯಾಗಿ ಹೋಗೆಂದು ನೆವಮಿಲ್ಲದುಸುರಿದಂ
ಲೋಕ ನಿನ್ನನು ಹಳಿದು ಮರುಗುವುದು ತಾಪಸಗೆ
ಲೋಕ ಮತವನು ನಚ್ಚಿ ನಡೆಯೆಂದು ನುಡಿಯುವರು
ಎಂತು ನಚ್ಚುವುದೆಂತು ಮೆಚ್ಚುವುದು ವಿಪರೀತ
ಲೋಕಮಂ, ಎಂತು ನಡೆಯುವುದು ನಾನರಿಯೆನಮ್ಮ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...