Home / ಕವನ / ಕವಿತೆ / ಜಾಣ-ಕೋಣ

ಜಾಣ-ಕೋಣ

“ಎಲ್ಲಾ ತಿಂಡಿಯು ನನಗೇ ಬೇಕು
ಎಲ್ಲಾ ಹಣ್ಣೂ ನನಗೇ ಬೇಕು
ಆರಿಗು ಚೂರನು ಗೀರನು ಕೊಡೆನು”
ಕೊಡೆನೆನ್ನುತ ಎಳ ಮಗ ಹರಮಾಡಿದನು.

“ಅಣ್ಣನು ತಮ್ಮನು ಎಲ್ಲರು ಇರುವರು
ಅಕ್ಕನು ತಂಗಿಯು ಎಲ್ಲರು ಇರುವರು
ನಾನೂ ಅಮ್ಮಾ ಎಲ್ಲರು ಇರುವೆವು
ಒಂದಿಷ್ಟಿಷ್ಟನು ನಮಗೂ ಕೊಡಬೇಕು.”

“ಆರಿಗು ಕೊಡೆನು ಎಲ್ಲವು ನನ್ನದು ?”
ಎನ್ನುತ ಎಳ ಮಗ ಹಠಮಾಡಿದನು;
ಅಣ್ಣ ತಮ್ಮ ಅಕ್ಕ ತಂಗಿ
ಎವೆಯಿಕ್ಕದೆ ತಿಂಡಿಯ ನೋಡಿದರು.

ಅಪ್ಪನ ಕೈಹಿಡಿದೆಳೆಯುತ ಕೇಳುತ
ಎಳ ಮಗು ಕೈಯಿಂದೆಳೆಯಲು ಹೋಗಿ
ನನಗೇ ತನಗೇ ಎಂದಳುತಿರಲು
ತಂದೆಯು ಮಗನನ್ನು ಮುದ್ದಿಸಿ ಆಡಿದನು.

“ಬಾರಲೆ ರನ್ನ ! ಹೊಳಪಿನ ಚಿನ್ನ !
ನಗುತಾ ಕೊಟ್ಟರೆ ನೀನೇ ಜಾಣ
ಅಳುತಾ ಕೊಟ್ಟರೆ ನೀನೇ ಕೋಣ
ಕೊಡದಿರೆ ನೀನೆನ್ನಯ ಮಗನಲ್ಲಣ್ಣ.”

ಲೋಕದ ತಂದೆಯು ಮಗುವಿನ ತಂದೆಗೆ
“ಅಹುದಲೆ ಮಗನೇ!” ಎನುತಿಂತೆಂದನು
“ನಾ ಹೇಳಲು ಕಹಿ, ನೀ ಹೇಳಲು ಸಿಹಿ
ಎಲ್ಲಿಯು ನಡೆಸುವ ಮಕ್ಕಳು ಬಹುಕಡಮೆ.

ನಗುತಾ ಕೊಟ್ಟರೆ ಅವನೇ ಜಾಣ
ಅಳುತಾ ಕೊಟ್ಟರೆ ಅವನೇ ಕೋಣ
ಏನೋ ಎಂತೋ ಏನೂ ಕೊಡದಿರೆ
ಅವನೇನೂ ನನ್ನಯ ಮಗನಲ್ಲಣ್ಣ.”
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...