Home / ಕವನ / ಕವಿತೆ / ಜಾಣ-ಕೋಣ

ಜಾಣ-ಕೋಣ

“ಎಲ್ಲಾ ತಿಂಡಿಯು ನನಗೇ ಬೇಕು
ಎಲ್ಲಾ ಹಣ್ಣೂ ನನಗೇ ಬೇಕು
ಆರಿಗು ಚೂರನು ಗೀರನು ಕೊಡೆನು”
ಕೊಡೆನೆನ್ನುತ ಎಳ ಮಗ ಹರಮಾಡಿದನು.

“ಅಣ್ಣನು ತಮ್ಮನು ಎಲ್ಲರು ಇರುವರು
ಅಕ್ಕನು ತಂಗಿಯು ಎಲ್ಲರು ಇರುವರು
ನಾನೂ ಅಮ್ಮಾ ಎಲ್ಲರು ಇರುವೆವು
ಒಂದಿಷ್ಟಿಷ್ಟನು ನಮಗೂ ಕೊಡಬೇಕು.”

“ಆರಿಗು ಕೊಡೆನು ಎಲ್ಲವು ನನ್ನದು ?”
ಎನ್ನುತ ಎಳ ಮಗ ಹಠಮಾಡಿದನು;
ಅಣ್ಣ ತಮ್ಮ ಅಕ್ಕ ತಂಗಿ
ಎವೆಯಿಕ್ಕದೆ ತಿಂಡಿಯ ನೋಡಿದರು.

ಅಪ್ಪನ ಕೈಹಿಡಿದೆಳೆಯುತ ಕೇಳುತ
ಎಳ ಮಗು ಕೈಯಿಂದೆಳೆಯಲು ಹೋಗಿ
ನನಗೇ ತನಗೇ ಎಂದಳುತಿರಲು
ತಂದೆಯು ಮಗನನ್ನು ಮುದ್ದಿಸಿ ಆಡಿದನು.

“ಬಾರಲೆ ರನ್ನ ! ಹೊಳಪಿನ ಚಿನ್ನ !
ನಗುತಾ ಕೊಟ್ಟರೆ ನೀನೇ ಜಾಣ
ಅಳುತಾ ಕೊಟ್ಟರೆ ನೀನೇ ಕೋಣ
ಕೊಡದಿರೆ ನೀನೆನ್ನಯ ಮಗನಲ್ಲಣ್ಣ.”

ಲೋಕದ ತಂದೆಯು ಮಗುವಿನ ತಂದೆಗೆ
“ಅಹುದಲೆ ಮಗನೇ!” ಎನುತಿಂತೆಂದನು
“ನಾ ಹೇಳಲು ಕಹಿ, ನೀ ಹೇಳಲು ಸಿಹಿ
ಎಲ್ಲಿಯು ನಡೆಸುವ ಮಕ್ಕಳು ಬಹುಕಡಮೆ.

ನಗುತಾ ಕೊಟ್ಟರೆ ಅವನೇ ಜಾಣ
ಅಳುತಾ ಕೊಟ್ಟರೆ ಅವನೇ ಕೋಣ
ಏನೋ ಎಂತೋ ಏನೂ ಕೊಡದಿರೆ
ಅವನೇನೂ ನನ್ನಯ ಮಗನಲ್ಲಣ್ಣ.”
*****

Tagged:

Leave a Reply

Your email address will not be published. Required fields are marked *

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...