ಮುಪ್ಪು

ದೇಹ ಗಳಿಯುತ್ತಿರಲು
ಮನಕೆ ಯೌವನವಯ್ಯ
ಮನಕೆ ಯೌವನವಿರಲು
ಆಸೆಗಳು ಹೆಚ್ಚಯ್ಯ,

ಸಾಧಿಸುವ ಶಕ್ತಿಗಳು
ಭೋಗಿಸುವ ಶಕ್ತಿಗಳು
ಕುಂದುತ್ತ ಬರಬರಲು
ನೊಂದು ಸಾಯುವೆವಯ್ಯ.

ನರೆಸುಕ್ಕುಗಳ ನೋಡಿ
ಮೋಸ ಹೋಗಲು ಬೇಡ
ಮನಕೆ ಸುಕ್ಕುಗಳಿಲ್ಲ
ಹಿರಿಯತನ ಮುನ್ನಿಲ್ಲ.

ಸಾಯುವಾ ಕಾಲಕ್ಕೆ
ಎನಿತೊಂದು ಆಸೆಗಳು,
ಮುಂದಿನಾ ಜನ್ಮಕ್ಕೆ
ಎನಿತೊಂದು ಬಿತ್ತುಗಳು.

ಆಡಿ ತೋರದೊಡೇನು
ಮಾಡಿ ತೋರದೊಡೇನು
ಮೂಡುತಿರೆ ಮನದಲ್ಲಿ
ಪಾಪ ವಾಸನೆಯಾಯ್ತು

ವಿಷಯಗಳ ಸುಖಕಿಂತ
ಹಿರಿಯ ಸುಖವೊಂದುಂಟು
ಗುರು ಕರುಣ ಬಂದಲ್ಲಿ
ಆ ಸುಖದ ತಿಳಿವುಂಟು

ಹಿರಿಯ ಸುಖ ಕಂಡಾಗ
ಮುಪ್ಪು ಬಂದಡಸುವುದು
ನಾಯಿಗಳು ಸಾಯುವುವು
ಮನವು ಬಯಲಾಗುವುದು.

ಮನಕೆ ಮುಪ್ಪಾಗದೆಯೆ
ಹಿರಿಯ ಸುಖ ತಾನಿಲ್ಲ
ಮನವೆ ಕರ್ಮದ ಮೂಲ
ಮನವನ್ನೆ ಕೊಲ್ಲುವುದು.

ಈ ಮುಪ್ಪು ಬಂದವರ
ಕಣ್ಣಿಟ್ಟು ಹುಡುಕುತಿರು
ಅವರ ನೆಲೆ ಸಿಕ್ಕಾಗ
ಹಿಂದೆಯೇ ನಡೆಯುತಿರು.

ಮುಪ್ಪಿನಲಿ ಸುಖವುಂಟು
ಜವ್ವನದಿ ಕುಂದುಂಟು
ಮುಪ್ಪನ್ನು ಬಯಸುವುದು
ಶ್ರಮದಿಂದ ಸಾಧಿಪುದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಕ್ತಕ
Next post ಹೆಸರಿಗೆ ಮಾತ್ರವೆ

ಸಣ್ಣ ಕತೆ

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…