Home / ಕವನ / ಕವಿತೆ / ಶ್ರೀ ಹನುನುಂತದೇವರ ದಂಡಕ

ಶ್ರೀ ಹನುನುಂತದೇವರ ದಂಡಕ

ಹನುಮಂತ ಭೂಪಾ
ಸದ್ಗುಣಮಣಿ ಶಾಂತರೂಪಾ || ಪ ||

ಹನುಮಂತ ಮಹಾಮುನೀಶ ವಾಯು
ತನಯ ವಾನರೇಂದ್ರ ವನಚರ
ಶುಭಕಿರಣ ವಿಹಾರನು ಮಹಿಮಾಗಾರಾ
ಅಂಜನೀಕುಮಾರಾ ಸುಜನೋದ್ದಾರಾ ಕುಜನೋತ್ಪಾಲನಾ
ಹೋ ಭಕ್ತಪ್ರಾಣ ಪಂಚಪ್ರಾಣಾ ನಮಸ್ತುತೆ
ಕ್ಷೋಣಿಪಾಲ ರಘುಚರಣ ಸೇವಕಾ ಕಪಿವರ ಕರುಣ ಕೃಪಾಳು ||೧||

ಹರಿ ರಾಮ ಚಾರಕಾ ನಿರುಪಮ ನಿರಹಂಕರ ಕರಾ ಸಂಚಾರ
ಚರಿತ ಭೂಪರಾ ಬಹುಭರದಿ ಲಂಕಾಪುರಕೆ ಕಪಿಗಳ
ನೆರಪಿ ವಿಸ್ತರಾ ರಾವಣಸುರಾನುರುಹಿದಾ ದೀರಾ
ಕುಂಭಕರ್ಣರಾ ತಾಟಕಿಯ ಭರಾ ದೂಷಣ
ಖರಾದಿಗಳ ಸಂಹರಾ ಪರಾಕ್ರಮ ವೀರಾ ನಿನ್ನ ಶ್ರೀಕರ
ಚರಣಕಮಲಕೆ ಪರಾಕು ವಂದಿಪೆ ಶರಣು ||೨||

ಜಿತೇಂದ್ರಿಯ ಜಯ ಶುಭಮತೀ ಜಲಸ್ತಟ
ಪಥಾಸಾರಿ ನಿರ್ಮಿತಾ ನಿರಂತರ
ಹತಾಶ ದಾನವ ಪತೀಂದ್ರಜಿತುವಿನ ಮಥನ ಮೂರುತಿ ನತಾ
ವಿಭೀಷಣ ಗತಿಮುಕ್ತಿಯಾ ಪಥ ವಾಯಕಾ ಹಿತಾ ಸಾಯಕಾ
ವೃತಸ್ತಂಭನಾ ಅತೀತ ಮೂರುತಿ ನುತಿಪೆ
ನಿನ್ನ ಪಾದಗತಿಯೆನುತ ಸರ್ವಥಾ ಸೇವಿಪೆ |!೩||

ಭಲಾವಂತ ಬಾಲಕಾ ರಾಮ ಭೂಪಾಲ ರಘುಸುತ
ಸಲುಹಿ ಸಮರದಿ ಕಲಿ ಲಕ್ಷ್ಮಣನಿಗೊಲಿದು ಜೀವನ
ಫಲಾಗೊಳಿಸಿ ಪಾತಾಳಕಿಳಿದು ಮಹಾ
ಮಲಿತ ಮೈರಾವಣ ರಕ್ಕಸರ ತುಳಿದೊತ್ತಿ ಲವ-ಕುಶ ಕುಮಾರರ
ಛಲಾಗೆಲಿಸಿ ಜಾನಕಿಯ ರಾಮ ಪದಕೊಲಿಸಿ ನಿಜ
ಲೀಲಾ ಮೂರುತಿ ಭಲೆ ಬ್ರಹ್ಮಋಷಿ ಕುಲೊತ್ತಮಂ ಭಜೇ
ಬಾಲದಂಡ ಬಲಭೀಮದಯಾಳು ||೪||

ಮಂಡಲೀಶ ಕೋದಂಡ ಹರೀವರ ಪಾಂಡುತನಯ
ಗಾಂಡಿವಿರಥಾಗ್ರದಿ ಕಂಡು ಪತಾಕಿನಿ
ಕುಂಡಲಿಯೋಳ್ ನಿನ್ನ ಅಂಡಲಿಯಲು ಕುರುಸೈನ್ಯ ಕಲಹದೋಳ್
ದಿಂಡುಗೆಡಹಿ ಬ್ರಹ್ಮಾಂಡಕಿಳಿದು ಬಹು ಪುಂಡಗ್ರಾಮ ಅತಿಗೇರಿ ಸ್ಥಳದಿ ಪ್ರ-
ಚಂಡ ವೀರ ಹನುಮಂತ ಪ್ರಭೋ
ಉದ್ದಂಡ ಗುರುಗೋವಿಂದನ ಕರುಣದಿ
ಕಂಡುಸುರುವೆ ನಿನ್ನ ಪಾದಕಮಲ ಕರ
ದಂಡಯೆತ್ತಿ ನಮೋಯೆಂಬೆನೈ || ೫ ||
*****

 

Tagged:

Leave a Reply

Your email address will not be published. Required fields are marked *

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...