Home / ಕವನ / ಕವಿತೆ / ಪ್ರಕೃತಿ

ಪ್ರಕೃತಿ

ಕಾಲರಾಯನ ಗರ್ಭದಿಂದ
ಸೀಳಿ ಬಂದೆನು ದೇಹದೊಡನೆ
ವೇಳೆ ಮುಗಿದರೆ ನಿಲ್ಲಲಾರೆನು
ತಾಳು ನಿನ್ನನ್ನು ನುತಿಪೆನು

ನನ್ನ ಹಿಂದಿನ ಸುಕೃತ ಫಲವೊ
ನಿನ್ನ ಕರುಣದ ಸಿದ್ಧಿಬಲವೊ
ಮಾನ್ಯ ಗುರು ಸರ್ವೇಶನೊಲವಿಂ
ಮಾನವತ್ವವ ಪಡೆದೆನು

ಮಾರುಹೋದೆನು ಜಗವ ನೋಡಿ
ಸೂರೆಗೊಂಡೆನು ಸುಧೆಯನಿಲ್ಲಿ
ಯಾರು ಅರಿಯದ ನಿನ್ನ ಕೃತಿಗಿದೊ
ಸರ್ವಶಕ್ತನೆ ಮಣಿವೆನು

ನಿತ್ಯವೆಂಬಾ ಜ್ಞಾನದೊಡನೆ
ಸತ್ಯವೆಂಬಾ ಸೊಡರ ಹೊತ್ತು
ನೂತ್ನ ನೂತನವಾಗಿ ಇಲ್ಲಿ
ಓಡುತಿರುವಳು ಪ್ರಕೃತಿಯು

ಯುಗ ಯುಗಂಗಳ ಸವರಿ ಬಂದು
ಬಗೆ ಬಗೆಯ ಸುದ್ದಿಗಳ ತಂದು
ಸಿಗದೆ ಯಾರನು ಲೆಕ್ಕಿಸದೆ ತಾ-
ನೋಡುತಿರುವಳು ಪ್ರಕೃತಿಯು

ಮಳೆಯ ರೂಪವನೊಮ್ಮೆ ತಾಳಿ
ಬೆಳೆಯ ಗುಣವನು ಒಮ್ಮೆ ತಾಳಿ
ಇಳೆಯ ಜೀವರನೆಲ್ಲ ಸಲಹುತ
ಓಡುತಿರುವಳು ಪ್ರಕೃತಿಯು

ಹರಿವ ಝರಿಗಳ ಮಾಲೆ ಧರಿಸಿ
ಧರೆಯ ತರುಗಳ ಪುಷ್ಪ ಮುಡಿದು
ಗಿರಿಯ ಧ್ವಜಗಳನೆತ್ತಿ ಹಿಡಿದು
ಓಡುತಿರುವಳು ಪ್ರಕೃತಿಯು

ಚೆನ್ನೆ ಚೆಲುವೆಯು ಜಗವ ಬೆಳಗಿ
ತನ್ನ ಬಾಹುಗಳೊಳಗೆ ಅಪ್ಪಿ
‘ಬನ್ನಿರೋ ನನ್ನೊಡನೆ’ ಎಂದು
ಓಡುತಿರುವಳು ಪ್ರಕೃತಿಯು

ಸ್ವರ್ಗ ನರಕವನಿಲ್ಲೆ ಸೃಜಿಸಿ
ಆರ್ಘವೆನಿಸುವ ಋತುವ ನಿಲಿಸಿ
ದಿಗ್ಗಜಂಗಳನೆಲ್ಲ ಬಳಸಿ
ಓಡುತಿರುವಳು ಪ್ರಕೃತಿಯು

ಸ್ನಿಗ್ಧಮಯದಾ ಒಡಲಿನೊಳಗೆ
ಪ್ರಾಜ್ಞರನು ಆದರದಿ ಹೊತ್ತು
ಸಗ್ಗದೂಟವ ಜಗಕೆ ಉಣಿಸುತ
ಓಡುತಿರುವಳು ಪ್ರಕೃತಿಯು

ಲಗ್ಗೆ ಎಬ್ಬಿಸುತೊಮ್ಮೆ ಕುಣಿದು
ನುಗ್ಗಿ ಜಯಿಸುತಲೊಮ್ಮೆ ನಲಿದು
ಅಗ್ನಿಜ್ವಾಲೆಯನೊಮ್ಮೆ ಉಗಿದು
ಓಡುತಿರುವಳು ಪ್ರಕೃತಿಯು

ಸಾರಸುಗುಣೆ ಸರ್ವಶಕ್ತ
ಧೀರೆ ಬಹು ಲಾವಣ್ಯಪೂತೆ
ಕಾರಣಾನ್ವಿತೆ ಅಂತ್ಯರಹಿತೆ
ಓಡುತಿರುವಳು ನಿರುತವು

ದೇವ ನಿನ್ನಯ ಸೃಷ್ಟಿಯೊಳಗೆ
ಆವ ಭಾಗವ ತಿಳಿಯಲಳವು
ಕೋವಿದನೆ ಈ ಪ್ರಕೃತಿ ಮಾತೆಗೆ
ಜನಕಜೆಯು ಕರ ಮುಗಿವಳು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...