Home / ಕವನ / ಕವಿತೆ / ಪ್ರಕೃತಿ

ಪ್ರಕೃತಿ

ಕಾಲರಾಯನ ಗರ್ಭದಿಂದ
ಸೀಳಿ ಬಂದೆನು ದೇಹದೊಡನೆ
ವೇಳೆ ಮುಗಿದರೆ ನಿಲ್ಲಲಾರೆನು
ತಾಳು ನಿನ್ನನ್ನು ನುತಿಪೆನು

ನನ್ನ ಹಿಂದಿನ ಸುಕೃತ ಫಲವೊ
ನಿನ್ನ ಕರುಣದ ಸಿದ್ಧಿಬಲವೊ
ಮಾನ್ಯ ಗುರು ಸರ್ವೇಶನೊಲವಿಂ
ಮಾನವತ್ವವ ಪಡೆದೆನು

ಮಾರುಹೋದೆನು ಜಗವ ನೋಡಿ
ಸೂರೆಗೊಂಡೆನು ಸುಧೆಯನಿಲ್ಲಿ
ಯಾರು ಅರಿಯದ ನಿನ್ನ ಕೃತಿಗಿದೊ
ಸರ್ವಶಕ್ತನೆ ಮಣಿವೆನು

ನಿತ್ಯವೆಂಬಾ ಜ್ಞಾನದೊಡನೆ
ಸತ್ಯವೆಂಬಾ ಸೊಡರ ಹೊತ್ತು
ನೂತ್ನ ನೂತನವಾಗಿ ಇಲ್ಲಿ
ಓಡುತಿರುವಳು ಪ್ರಕೃತಿಯು

ಯುಗ ಯುಗಂಗಳ ಸವರಿ ಬಂದು
ಬಗೆ ಬಗೆಯ ಸುದ್ದಿಗಳ ತಂದು
ಸಿಗದೆ ಯಾರನು ಲೆಕ್ಕಿಸದೆ ತಾ-
ನೋಡುತಿರುವಳು ಪ್ರಕೃತಿಯು

ಮಳೆಯ ರೂಪವನೊಮ್ಮೆ ತಾಳಿ
ಬೆಳೆಯ ಗುಣವನು ಒಮ್ಮೆ ತಾಳಿ
ಇಳೆಯ ಜೀವರನೆಲ್ಲ ಸಲಹುತ
ಓಡುತಿರುವಳು ಪ್ರಕೃತಿಯು

ಹರಿವ ಝರಿಗಳ ಮಾಲೆ ಧರಿಸಿ
ಧರೆಯ ತರುಗಳ ಪುಷ್ಪ ಮುಡಿದು
ಗಿರಿಯ ಧ್ವಜಗಳನೆತ್ತಿ ಹಿಡಿದು
ಓಡುತಿರುವಳು ಪ್ರಕೃತಿಯು

ಚೆನ್ನೆ ಚೆಲುವೆಯು ಜಗವ ಬೆಳಗಿ
ತನ್ನ ಬಾಹುಗಳೊಳಗೆ ಅಪ್ಪಿ
‘ಬನ್ನಿರೋ ನನ್ನೊಡನೆ’ ಎಂದು
ಓಡುತಿರುವಳು ಪ್ರಕೃತಿಯು

ಸ್ವರ್ಗ ನರಕವನಿಲ್ಲೆ ಸೃಜಿಸಿ
ಆರ್ಘವೆನಿಸುವ ಋತುವ ನಿಲಿಸಿ
ದಿಗ್ಗಜಂಗಳನೆಲ್ಲ ಬಳಸಿ
ಓಡುತಿರುವಳು ಪ್ರಕೃತಿಯು

ಸ್ನಿಗ್ಧಮಯದಾ ಒಡಲಿನೊಳಗೆ
ಪ್ರಾಜ್ಞರನು ಆದರದಿ ಹೊತ್ತು
ಸಗ್ಗದೂಟವ ಜಗಕೆ ಉಣಿಸುತ
ಓಡುತಿರುವಳು ಪ್ರಕೃತಿಯು

ಲಗ್ಗೆ ಎಬ್ಬಿಸುತೊಮ್ಮೆ ಕುಣಿದು
ನುಗ್ಗಿ ಜಯಿಸುತಲೊಮ್ಮೆ ನಲಿದು
ಅಗ್ನಿಜ್ವಾಲೆಯನೊಮ್ಮೆ ಉಗಿದು
ಓಡುತಿರುವಳು ಪ್ರಕೃತಿಯು

ಸಾರಸುಗುಣೆ ಸರ್ವಶಕ್ತ
ಧೀರೆ ಬಹು ಲಾವಣ್ಯಪೂತೆ
ಕಾರಣಾನ್ವಿತೆ ಅಂತ್ಯರಹಿತೆ
ಓಡುತಿರುವಳು ನಿರುತವು

ದೇವ ನಿನ್ನಯ ಸೃಷ್ಟಿಯೊಳಗೆ
ಆವ ಭಾಗವ ತಿಳಿಯಲಳವು
ಕೋವಿದನೆ ಈ ಪ್ರಕೃತಿ ಮಾತೆಗೆ
ಜನಕಜೆಯು ಕರ ಮುಗಿವಳು
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...