ಪ್ರಕೃತಿ

ಕಾಲರಾಯನ ಗರ್ಭದಿಂದ
ಸೀಳಿ ಬಂದೆನು ದೇಹದೊಡನೆ
ವೇಳೆ ಮುಗಿದರೆ ನಿಲ್ಲಲಾರೆನು
ತಾಳು ನಿನ್ನನ್ನು ನುತಿಪೆನು

ನನ್ನ ಹಿಂದಿನ ಸುಕೃತ ಫಲವೊ
ನಿನ್ನ ಕರುಣದ ಸಿದ್ಧಿಬಲವೊ
ಮಾನ್ಯ ಗುರು ಸರ್ವೇಶನೊಲವಿಂ
ಮಾನವತ್ವವ ಪಡೆದೆನು

ಮಾರುಹೋದೆನು ಜಗವ ನೋಡಿ
ಸೂರೆಗೊಂಡೆನು ಸುಧೆಯನಿಲ್ಲಿ
ಯಾರು ಅರಿಯದ ನಿನ್ನ ಕೃತಿಗಿದೊ
ಸರ್ವಶಕ್ತನೆ ಮಣಿವೆನು

ನಿತ್ಯವೆಂಬಾ ಜ್ಞಾನದೊಡನೆ
ಸತ್ಯವೆಂಬಾ ಸೊಡರ ಹೊತ್ತು
ನೂತ್ನ ನೂತನವಾಗಿ ಇಲ್ಲಿ
ಓಡುತಿರುವಳು ಪ್ರಕೃತಿಯು

ಯುಗ ಯುಗಂಗಳ ಸವರಿ ಬಂದು
ಬಗೆ ಬಗೆಯ ಸುದ್ದಿಗಳ ತಂದು
ಸಿಗದೆ ಯಾರನು ಲೆಕ್ಕಿಸದೆ ತಾ-
ನೋಡುತಿರುವಳು ಪ್ರಕೃತಿಯು

ಮಳೆಯ ರೂಪವನೊಮ್ಮೆ ತಾಳಿ
ಬೆಳೆಯ ಗುಣವನು ಒಮ್ಮೆ ತಾಳಿ
ಇಳೆಯ ಜೀವರನೆಲ್ಲ ಸಲಹುತ
ಓಡುತಿರುವಳು ಪ್ರಕೃತಿಯು

ಹರಿವ ಝರಿಗಳ ಮಾಲೆ ಧರಿಸಿ
ಧರೆಯ ತರುಗಳ ಪುಷ್ಪ ಮುಡಿದು
ಗಿರಿಯ ಧ್ವಜಗಳನೆತ್ತಿ ಹಿಡಿದು
ಓಡುತಿರುವಳು ಪ್ರಕೃತಿಯು

ಚೆನ್ನೆ ಚೆಲುವೆಯು ಜಗವ ಬೆಳಗಿ
ತನ್ನ ಬಾಹುಗಳೊಳಗೆ ಅಪ್ಪಿ
‘ಬನ್ನಿರೋ ನನ್ನೊಡನೆ’ ಎಂದು
ಓಡುತಿರುವಳು ಪ್ರಕೃತಿಯು

ಸ್ವರ್ಗ ನರಕವನಿಲ್ಲೆ ಸೃಜಿಸಿ
ಆರ್ಘವೆನಿಸುವ ಋತುವ ನಿಲಿಸಿ
ದಿಗ್ಗಜಂಗಳನೆಲ್ಲ ಬಳಸಿ
ಓಡುತಿರುವಳು ಪ್ರಕೃತಿಯು

ಸ್ನಿಗ್ಧಮಯದಾ ಒಡಲಿನೊಳಗೆ
ಪ್ರಾಜ್ಞರನು ಆದರದಿ ಹೊತ್ತು
ಸಗ್ಗದೂಟವ ಜಗಕೆ ಉಣಿಸುತ
ಓಡುತಿರುವಳು ಪ್ರಕೃತಿಯು

ಲಗ್ಗೆ ಎಬ್ಬಿಸುತೊಮ್ಮೆ ಕುಣಿದು
ನುಗ್ಗಿ ಜಯಿಸುತಲೊಮ್ಮೆ ನಲಿದು
ಅಗ್ನಿಜ್ವಾಲೆಯನೊಮ್ಮೆ ಉಗಿದು
ಓಡುತಿರುವಳು ಪ್ರಕೃತಿಯು

ಸಾರಸುಗುಣೆ ಸರ್ವಶಕ್ತ
ಧೀರೆ ಬಹು ಲಾವಣ್ಯಪೂತೆ
ಕಾರಣಾನ್ವಿತೆ ಅಂತ್ಯರಹಿತೆ
ಓಡುತಿರುವಳು ನಿರುತವು

ದೇವ ನಿನ್ನಯ ಸೃಷ್ಟಿಯೊಳಗೆ
ಆವ ಭಾಗವ ತಿಳಿಯಲಳವು
ಕೋವಿದನೆ ಈ ಪ್ರಕೃತಿ ಮಾತೆಗೆ
ಜನಕಜೆಯು ಕರ ಮುಗಿವಳು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಯಬಲ್ಲೆ ನಾ ಕೃಷ್ಣ
Next post ಲಾಲ್‌ಬಾಗ್

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

cheap jordans|wholesale air max|wholesale jordans|wholesale jewelry|wholesale jerseys