ರೂಪ

ಬಾಯ್ದೆರೆದು ಮುತ್ತಿರುವ
ದಳ್ಳುರಿಯ ಮಧ್ಯದೊಳು
ಚಿಚ್ಛಕ್ತಿಯೊಂದೆದ್ದಿತು

ಇದೆ ಸಮಯ ಇದೆ ಸಮಯ
ತಡಮಾಡದಿರು ಏಳು
ರೂಪವನು ಇಳಿಸೆಂದಿತು

ರೂಪವೆಂದರೆ ಏನೊ
ಚಿತ್ರವಾಗಿದೆ ಮಾತು
ಶಿಲ್ಪಿಯೇ ನಾನೆಂದೆನು

ಪರಿಹರಿಪೆ ಸಂಶಯವ
ನೋಡೆನುತ ಬಹುತರದ
ಭಾವಗಳ ತಂದೊಡ್ಡಿತು

ರೂಪಗಳ ಭಟ್ಟಿ ಇದು
ಆನಂದವಿಲ್ಲಿಹುದು
ಬಿತ್ತರಿಸು ಏಳೆಂದಿತು

ಇರಲಿರಲು ಬಹುದೆಂದು
ಗೈಮೆ ಇದು ಸುಖವೆಂದು
ಚಟಪಟಿಸಿ ನಾನೆದ್ದೆನು

ಭಾವನೋದ್ರೇಕದೊಳು
ಉಲ್ಲಾಸವುಕ್ಕೇರಿ
ಬಹುದೂರ ನಾ ಸಾಗಿದೆ

ಆನಂದ ಸಿಗದಾಗೆ
ಅತ್ತಿತ್ತ ಸುಳಿದಾಡಿ
ಕಂಗೆಟ್ಟು ಬೆದಕಾಡಿದೆ

ಓ ರೂಪವೇ ನಿನ್ನ
ಕಾಣಲೋಸುಗವೆಂದು
ಪೊಸರಾಜ್ಯಕೈತಂದೆನು

ಭಾವಶೃಂಗವೆ ನಿನ್ನ
ಬೀಡಿನಿಂದೆನಗೊಸೆದು
ಇಳಿದು ಬಾ ಬಳಿಗೆಂದೆನು

ಕೂಗದಿರು ಕಂಡತ್ತ
ಓಡದಿರು ಬಾ ಇಲ್ಲಿ
ವಾಹಿನಿಯು ಸೆಳೆದೊಯ್ವುದು

ತಾನಾಗಿ ಬಂದುದನು
ಪುಟವಿಟ್ಟು ಬೆಲೆಕಟ್ಟಿ
ರೂಪಕೊಡು ಅದಕೆಂದಿತು

ರೂಪಿಸುವ ಬಗೆ ಏನೊ
ಬಣ್ಣಗಳ ನಾನರಿಯೆ
ಪಾಠವೆನಗಿಲ್ಲೆಂದೆನು

ಭಾವವನು ಕಟ್ಟಿರಿಸಿ
ಅರ್ಥವನು ಬಿಚ್ಚಿಡುವ
ಪದಗಳನು ತಾರೆಂದಿತು

ನಿನ್ನ ಕಲ್ಪನೆಯೊಳಗೆ
ಚಿತ್ರ ತಾನೇಳುವುದು
ನವನೀತವುದಯಿಪಂತೆ

ಭಾವದೊಳು ಕಾಂತಿಯುತ
ಔಪಾಸನೆಯು ಮೂಡೆ
ಸಾವಿಲ್ಲ ಆ ರೂಪಕೆ

ಭಾವಗಳು ಉನ್ನತದ
ವಜ್ರಗಳು ಇದ್ದಂತೆ
ವಾಕ್ಯಗಳು ಚಿನ್ನದಂತೆ

ನಿನ್ನ ನಿಪುಣತೆಯೊಡನೆ
ಕಟ್ಟಡವ ಕಟ್ಟಿರಿಸೆ
ಪೂರ್ಣತೆಯು ಬಹುದೆಂದಿತು

ಕಟ್ಟದಿರು ಕಬ್ಬಿಣದ
ಕಟ್ಟಡದಿ ಪುಷ್ಪವನು
ಮಕರಂದವಿಹುದು ಒಳಗೆ

ಮಕರಂದವಿಲ್ಲದೊಡೆ
ಸಮದೊಳಗೆ ಸುಖವಿಲ್ಲ
ಪೋಗದಿರು ಆ ಗೊಡವೆಗೆ

ಅನುಭವದ ಕ್ಷೇತ್ರವನು
ಹೊಕ್ಕು ನೋಡಿದೊಡಲ್ಲಿ
ನುಡಿಗಳಿಗೆ ಕ್ಷಾಮವಿಲ್ಲ

ಸುಲಭ ಶೈಲಿಯ ಸೊಗದ
ಕಬ್ಬಿನಂತಹ ಸವಿಯ
ವಾಕ್ಯಗಳ ತಾರೆಂದಿತು

ದಿಶೆ ದಿಶೆಯೊಳಲೆದಲೆದು
ವಾಕ್ಯಗಳನಾಯ್ದಾಯ್ದು
ಸಡಗರದಿ ನಾ ತಂದೆನು

ಸುಲಭ ಶೈಲಿಯ ಸೊಗದ
ಕಬ್ಬಿನಂತಹ ಸವಿಯ
ವಾಕ್ಯಗಳೊ ನೋಡೆಂದೆನು

ಸಾಕು ಬಿಡು ಸಾಕು ಬಿಡು
ಏನ ತಂದೆಯೊ ಕಾಣೆ
ಈ ಭಾವಕೀ ಪದಗಳೆ?

ಕಡಿವಾಣವಿಲ್ಲದಿಹ
ಪದಗಳಿವು ‘ಛೀ’ ಯೆಂದು
ಮೂದಲಿಸಿ ಸಿಡುಗುಟ್ಟಿತು

ನಿನ್ನಂತೆ ಕಂಡವರು
ಸಿಡುಗುಟ್ಟುವರೊ ಏನೋ
ರೂಪವೇ ಬೇಡೆಂದೆನು

ಅನ್ಯರಾಡುವುದೇನು
ನಿನ್ನ ಕತೆ ನಿನದಿರಲು
ಅಳುಕುಬಗೆ ಬೇಡೆಂದಿತು

ರೂಪವದು ನಮದಲ್ಲ
ಟೀಕಿಪರ ಸೊತ್ತಲ್ಲ
ಗಣಿಯೊಡೆಯ ವಿಶ್ವನಾಥ

ಆಳಕ್ಕೆ ತಕ್ಕಂತೆ
ಏಳುವುದು ಆನಂದ
ಜನಕಜೇ, ಕೇಳೆಂದಿತು
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ