Home / ಕವನ / ಕವಿತೆ / ಶ್ರೀ ದೇವಿ ದಂಡಕ

ಶ್ರೀ ದೇವಿ ದಂಡಕ

ಜಯ ಜಯತು ಜಗದಾಂಬೆ ಭಕ್ತರ ಕುಟುಂಬೆ
ಜಯ ಜಯತು ಜಗದಾಂಬೆ ಸಾಂಬೆ
ತ್ರಯ ಜಗವನೆಡಬಿಡದೆ ತುಂಬೆ ನಯ
ವಿನಯಗುಣ ಗಣಕದಂಬೆ
ಭಯ ಭಕ್ತಿಯಿಂ ಬೇಡಿಕೊಂಬೆ ||ಅ.ಪ||

ಏನು ಇಲ್ಲದಲಂದು ಓಂಕಾರ ಪ್ರಣಮದಿ
ನೀನು ಮೂಲದಿ ಬಂದು
ಅ-ಉ-ಮಾಕಾರವೆ ಸಾನುರಾಗದಿ ನಿಂದು ಜ್ಞಾನೌಘಸಿಂಧು
ತಾನೆ ಸ್ಥೂಲತಿಸೂಕ್ಷ್ಮಕಾರಣ
ಬಾನು ಬಹುರುಚಿ ವಿಶ್ವತೈಜಸವ
ಮಾನ ಪ್ರಜ್ಞಾನಿಸುವ ಜನನಿ ಮೌನ
ರಾಜಸ ಸತ್ವ ತಾಮಸ ಏನು ಇಲ್ದಿರಲಾಗ
ಅಜ ವಿಷ್ಣು ರುದ್ರರು ನಿನ್ನ ಸ್ಥುತಿಸಲು ಬೇಗ
ಪದರೇಣುವನು ಕೃಪೆಯಿಂದ ಪಾಲಿಸಿದಾಗ ಆನಂದ ರಾಗ
ಮಾನ ನಿಧಿ ಉತ್ಪತ್ಯ ಸ್ಥಿತಿ ಲಯ
ಮೌನಮುದ್ರಿ ಸಮಾಧಿಭೇದವು
ಭಾನುವಿನ ಓಲ್ ಬೆಳಗು ಮುಸುಗುವ-
ದೇನು ನಿನ್ನಾಧೀನ ತ್ರೈಜಗ
ನೀನೆ ನೀನೆಯು ತತ್ವ ಕಲ್ಪನೆ
ನೀನೆಯೆಂಬೆನು ಗಹನ ನಾನೆನೆ
ನಾನು ರಹಿತ ನಿರಾಳದೇವಿಗೆ ಜಯ ಜಯತು ಜಗದಾಂಬೆ ||೧||

ಓಂಕಾರಿ ಶರ್ವಾಣಿ ಆಖಳಾಂಡ ಜಗಮಯೆ
ಝೇಂಕಾರಿ ಸತ್ರಾಣಿ ಜಡಮೂಢ ಶುಂಭರ
ಹಂಕಾರಿ ನಿರ್ವಾಣಿ ಕಿಂಕರಪ್ರಾಣಿ
ಶಂಕರಿಯು ಶಿವೆ ಶಾಂಭವಿಯೆಂಬೆನಲು
ಭೀಂಕರಿಯು ಮಧುಕೈಟಭ್ರಾಂತಕಿ
ಓಂಕಾರಿಯು ಮಧುಪೀವಿರಕ್ತಬೀ-
ಜಾಂಕ ಮೂಲಕೆ ಕಾಲಭೈರವಿ
ಅಂಕ ವಿಜಯ ಶರಾಳಿ ಪ್ರತಿವೀರ-
ಗಂಕಣ ವಿಮಲ ಹಸ್ತಕರಾಳಿ ಧೀಂಕರವತಾಳಿ
ನೂಂಕಿ ಮಹಿಷನ ದಾಳಿ ಧೀಂಕರವತಾಳಿ
ಠೇಂಕರಿಸಿ ನಿಶಿಂಜಿನಿಧ್ವನಿ
ಭೋಂಕರಿಸಿ ವರಸಿಂಹ ನಾದದಿ
ಕೇಂಕರಿಸಿ ಹರಿ ಹವಕೆ ಹಾರಿದಿ
ಮುಂಕರಿದು ಮೃತವಾದದನುಜರ
ಆ೦ಕಿಲಾಲ ಕಿಲಾಲ ಕಿಲಿಕಿಲಿ
ಓಂ ಕಿಂ ಸೋಹಂ
ಸರ್ವದೇವರ ದೇವಿಗೆ ಜಯ ಜಯತು ಜಗದಾಂಚಿ ||೨||

ಸಕಲ ಲೋಕದ ಮಾತೆ ಪರಬ್ರಹ್ಮ ಮೂಲವೆ
ಪ್ರಕೃತಿ ನಿನ್ನಿಂದಾಯ್ತೆ ಪಂಚಾದಿ ತತ್ವವು
ವಿಕೃತಿ ನಿನ್ನಿಂ ಪೋಯೇ ನೀಂ ಪೃಥ್ವಿ ದೇವತೆ
ಥಕ ಥಕನೆ ಕುಣಿಸಿದೀ ಜಗವಖಿಲ ಸೂತ್ರದ ಬೊಂಬೆ ತೆರದಲಿ
ಸುಖ ವಿಲಾಸಿಯೆ ಬಹಳ ಮಾಯದಿ
ಪ್ರಕಟಿಸಿದೆ ಆಕಾಶ ನಿಮಿಷಕೆ
ಅಖಿಳ ವೇದಗಳನ್ನು ಇಂದ್ರಾ,ದಿ ಸುರಮುನಿ
ನಿಖಿಳರೂಪಗಳನ್ನು ಈರೇಳು ಭುವನದ
ಭಕ್ತವತ್ಸಲೆ ನೀನು ಮಂತ್ರಾದಿ ದೇವತೆ
ಚಕಿತಗುಣ ಗಣ ಚಂಚಢಾಳಿಯೆ
ರಕುತಬೀಜಾಂಶಾಪಹಾರಿಯೆ
ಕಕುಲತಿಲಿ ಮಹಮುಕ್ತಿದಾಯಕಿ
ಪ್ರಕಟ ಗುರುಗೋವಿಂದನಣುಗಗೆ
ಸುಖ ಸಾಯುಜ್ಯ ಕೊಡುವ
ಸಕಲದೇವರ ದೇವಿ ಪಾದಕೆ ಜಯ ಜಯತು ಜಗದಾಂಬೆ ||೩||
*****

 

Tagged:

One Comment

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...