Home / ಕವನ / ಕವಿತೆ / ಶ್ರೀ ದೇವಿ ದಂಡಕ

ಶ್ರೀ ದೇವಿ ದಂಡಕ

ಜಯ ಜಯತು ಜಗದಾಂಬೆ ಭಕ್ತರ ಕುಟುಂಬೆ
ಜಯ ಜಯತು ಜಗದಾಂಬೆ ಸಾಂಬೆ
ತ್ರಯ ಜಗವನೆಡಬಿಡದೆ ತುಂಬೆ ನಯ
ವಿನಯಗುಣ ಗಣಕದಂಬೆ
ಭಯ ಭಕ್ತಿಯಿಂ ಬೇಡಿಕೊಂಬೆ ||ಅ.ಪ||

ಏನು ಇಲ್ಲದಲಂದು ಓಂಕಾರ ಪ್ರಣಮದಿ
ನೀನು ಮೂಲದಿ ಬಂದು
ಅ-ಉ-ಮಾಕಾರವೆ ಸಾನುರಾಗದಿ ನಿಂದು ಜ್ಞಾನೌಘಸಿಂಧು
ತಾನೆ ಸ್ಥೂಲತಿಸೂಕ್ಷ್ಮಕಾರಣ
ಬಾನು ಬಹುರುಚಿ ವಿಶ್ವತೈಜಸವ
ಮಾನ ಪ್ರಜ್ಞಾನಿಸುವ ಜನನಿ ಮೌನ
ರಾಜಸ ಸತ್ವ ತಾಮಸ ಏನು ಇಲ್ದಿರಲಾಗ
ಅಜ ವಿಷ್ಣು ರುದ್ರರು ನಿನ್ನ ಸ್ಥುತಿಸಲು ಬೇಗ
ಪದರೇಣುವನು ಕೃಪೆಯಿಂದ ಪಾಲಿಸಿದಾಗ ಆನಂದ ರಾಗ
ಮಾನ ನಿಧಿ ಉತ್ಪತ್ಯ ಸ್ಥಿತಿ ಲಯ
ಮೌನಮುದ್ರಿ ಸಮಾಧಿಭೇದವು
ಭಾನುವಿನ ಓಲ್ ಬೆಳಗು ಮುಸುಗುವ-
ದೇನು ನಿನ್ನಾಧೀನ ತ್ರೈಜಗ
ನೀನೆ ನೀನೆಯು ತತ್ವ ಕಲ್ಪನೆ
ನೀನೆಯೆಂಬೆನು ಗಹನ ನಾನೆನೆ
ನಾನು ರಹಿತ ನಿರಾಳದೇವಿಗೆ ಜಯ ಜಯತು ಜಗದಾಂಬೆ ||೧||

ಓಂಕಾರಿ ಶರ್ವಾಣಿ ಆಖಳಾಂಡ ಜಗಮಯೆ
ಝೇಂಕಾರಿ ಸತ್ರಾಣಿ ಜಡಮೂಢ ಶುಂಭರ
ಹಂಕಾರಿ ನಿರ್ವಾಣಿ ಕಿಂಕರಪ್ರಾಣಿ
ಶಂಕರಿಯು ಶಿವೆ ಶಾಂಭವಿಯೆಂಬೆನಲು
ಭೀಂಕರಿಯು ಮಧುಕೈಟಭ್ರಾಂತಕಿ
ಓಂಕಾರಿಯು ಮಧುಪೀವಿರಕ್ತಬೀ-
ಜಾಂಕ ಮೂಲಕೆ ಕಾಲಭೈರವಿ
ಅಂಕ ವಿಜಯ ಶರಾಳಿ ಪ್ರತಿವೀರ-
ಗಂಕಣ ವಿಮಲ ಹಸ್ತಕರಾಳಿ ಧೀಂಕರವತಾಳಿ
ನೂಂಕಿ ಮಹಿಷನ ದಾಳಿ ಧೀಂಕರವತಾಳಿ
ಠೇಂಕರಿಸಿ ನಿಶಿಂಜಿನಿಧ್ವನಿ
ಭೋಂಕರಿಸಿ ವರಸಿಂಹ ನಾದದಿ
ಕೇಂಕರಿಸಿ ಹರಿ ಹವಕೆ ಹಾರಿದಿ
ಮುಂಕರಿದು ಮೃತವಾದದನುಜರ
ಆ೦ಕಿಲಾಲ ಕಿಲಾಲ ಕಿಲಿಕಿಲಿ
ಓಂ ಕಿಂ ಸೋಹಂ
ಸರ್ವದೇವರ ದೇವಿಗೆ ಜಯ ಜಯತು ಜಗದಾಂಚಿ ||೨||

ಸಕಲ ಲೋಕದ ಮಾತೆ ಪರಬ್ರಹ್ಮ ಮೂಲವೆ
ಪ್ರಕೃತಿ ನಿನ್ನಿಂದಾಯ್ತೆ ಪಂಚಾದಿ ತತ್ವವು
ವಿಕೃತಿ ನಿನ್ನಿಂ ಪೋಯೇ ನೀಂ ಪೃಥ್ವಿ ದೇವತೆ
ಥಕ ಥಕನೆ ಕುಣಿಸಿದೀ ಜಗವಖಿಲ ಸೂತ್ರದ ಬೊಂಬೆ ತೆರದಲಿ
ಸುಖ ವಿಲಾಸಿಯೆ ಬಹಳ ಮಾಯದಿ
ಪ್ರಕಟಿಸಿದೆ ಆಕಾಶ ನಿಮಿಷಕೆ
ಅಖಿಳ ವೇದಗಳನ್ನು ಇಂದ್ರಾ,ದಿ ಸುರಮುನಿ
ನಿಖಿಳರೂಪಗಳನ್ನು ಈರೇಳು ಭುವನದ
ಭಕ್ತವತ್ಸಲೆ ನೀನು ಮಂತ್ರಾದಿ ದೇವತೆ
ಚಕಿತಗುಣ ಗಣ ಚಂಚಢಾಳಿಯೆ
ರಕುತಬೀಜಾಂಶಾಪಹಾರಿಯೆ
ಕಕುಲತಿಲಿ ಮಹಮುಕ್ತಿದಾಯಕಿ
ಪ್ರಕಟ ಗುರುಗೋವಿಂದನಣುಗಗೆ
ಸುಖ ಸಾಯುಜ್ಯ ಕೊಡುವ
ಸಕಲದೇವರ ದೇವಿ ಪಾದಕೆ ಜಯ ಜಯತು ಜಗದಾಂಬೆ ||೩||
*****

 

Tagged:

One Comment

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...