Home / ಕವನ / ಕವಿತೆ / ಶ್ರೀ ದೇವಿ ದಂಡಕ

ಶ್ರೀ ದೇವಿ ದಂಡಕ

ಜಯ ಜಯತು ಜಗದಾಂಬೆ ಭಕ್ತರ ಕುಟುಂಬೆ
ಜಯ ಜಯತು ಜಗದಾಂಬೆ ಸಾಂಬೆ
ತ್ರಯ ಜಗವನೆಡಬಿಡದೆ ತುಂಬೆ ನಯ
ವಿನಯಗುಣ ಗಣಕದಂಬೆ
ಭಯ ಭಕ್ತಿಯಿಂ ಬೇಡಿಕೊಂಬೆ ||ಅ.ಪ||

ಏನು ಇಲ್ಲದಲಂದು ಓಂಕಾರ ಪ್ರಣಮದಿ
ನೀನು ಮೂಲದಿ ಬಂದು
ಅ-ಉ-ಮಾಕಾರವೆ ಸಾನುರಾಗದಿ ನಿಂದು ಜ್ಞಾನೌಘಸಿಂಧು
ತಾನೆ ಸ್ಥೂಲತಿಸೂಕ್ಷ್ಮಕಾರಣ
ಬಾನು ಬಹುರುಚಿ ವಿಶ್ವತೈಜಸವ
ಮಾನ ಪ್ರಜ್ಞಾನಿಸುವ ಜನನಿ ಮೌನ
ರಾಜಸ ಸತ್ವ ತಾಮಸ ಏನು ಇಲ್ದಿರಲಾಗ
ಅಜ ವಿಷ್ಣು ರುದ್ರರು ನಿನ್ನ ಸ್ಥುತಿಸಲು ಬೇಗ
ಪದರೇಣುವನು ಕೃಪೆಯಿಂದ ಪಾಲಿಸಿದಾಗ ಆನಂದ ರಾಗ
ಮಾನ ನಿಧಿ ಉತ್ಪತ್ಯ ಸ್ಥಿತಿ ಲಯ
ಮೌನಮುದ್ರಿ ಸಮಾಧಿಭೇದವು
ಭಾನುವಿನ ಓಲ್ ಬೆಳಗು ಮುಸುಗುವ-
ದೇನು ನಿನ್ನಾಧೀನ ತ್ರೈಜಗ
ನೀನೆ ನೀನೆಯು ತತ್ವ ಕಲ್ಪನೆ
ನೀನೆಯೆಂಬೆನು ಗಹನ ನಾನೆನೆ
ನಾನು ರಹಿತ ನಿರಾಳದೇವಿಗೆ ಜಯ ಜಯತು ಜಗದಾಂಬೆ ||೧||

ಓಂಕಾರಿ ಶರ್ವಾಣಿ ಆಖಳಾಂಡ ಜಗಮಯೆ
ಝೇಂಕಾರಿ ಸತ್ರಾಣಿ ಜಡಮೂಢ ಶುಂಭರ
ಹಂಕಾರಿ ನಿರ್ವಾಣಿ ಕಿಂಕರಪ್ರಾಣಿ
ಶಂಕರಿಯು ಶಿವೆ ಶಾಂಭವಿಯೆಂಬೆನಲು
ಭೀಂಕರಿಯು ಮಧುಕೈಟಭ್ರಾಂತಕಿ
ಓಂಕಾರಿಯು ಮಧುಪೀವಿರಕ್ತಬೀ-
ಜಾಂಕ ಮೂಲಕೆ ಕಾಲಭೈರವಿ
ಅಂಕ ವಿಜಯ ಶರಾಳಿ ಪ್ರತಿವೀರ-
ಗಂಕಣ ವಿಮಲ ಹಸ್ತಕರಾಳಿ ಧೀಂಕರವತಾಳಿ
ನೂಂಕಿ ಮಹಿಷನ ದಾಳಿ ಧೀಂಕರವತಾಳಿ
ಠೇಂಕರಿಸಿ ನಿಶಿಂಜಿನಿಧ್ವನಿ
ಭೋಂಕರಿಸಿ ವರಸಿಂಹ ನಾದದಿ
ಕೇಂಕರಿಸಿ ಹರಿ ಹವಕೆ ಹಾರಿದಿ
ಮುಂಕರಿದು ಮೃತವಾದದನುಜರ
ಆ೦ಕಿಲಾಲ ಕಿಲಾಲ ಕಿಲಿಕಿಲಿ
ಓಂ ಕಿಂ ಸೋಹಂ
ಸರ್ವದೇವರ ದೇವಿಗೆ ಜಯ ಜಯತು ಜಗದಾಂಚಿ ||೨||

ಸಕಲ ಲೋಕದ ಮಾತೆ ಪರಬ್ರಹ್ಮ ಮೂಲವೆ
ಪ್ರಕೃತಿ ನಿನ್ನಿಂದಾಯ್ತೆ ಪಂಚಾದಿ ತತ್ವವು
ವಿಕೃತಿ ನಿನ್ನಿಂ ಪೋಯೇ ನೀಂ ಪೃಥ್ವಿ ದೇವತೆ
ಥಕ ಥಕನೆ ಕುಣಿಸಿದೀ ಜಗವಖಿಲ ಸೂತ್ರದ ಬೊಂಬೆ ತೆರದಲಿ
ಸುಖ ವಿಲಾಸಿಯೆ ಬಹಳ ಮಾಯದಿ
ಪ್ರಕಟಿಸಿದೆ ಆಕಾಶ ನಿಮಿಷಕೆ
ಅಖಿಳ ವೇದಗಳನ್ನು ಇಂದ್ರಾ,ದಿ ಸುರಮುನಿ
ನಿಖಿಳರೂಪಗಳನ್ನು ಈರೇಳು ಭುವನದ
ಭಕ್ತವತ್ಸಲೆ ನೀನು ಮಂತ್ರಾದಿ ದೇವತೆ
ಚಕಿತಗುಣ ಗಣ ಚಂಚಢಾಳಿಯೆ
ರಕುತಬೀಜಾಂಶಾಪಹಾರಿಯೆ
ಕಕುಲತಿಲಿ ಮಹಮುಕ್ತಿದಾಯಕಿ
ಪ್ರಕಟ ಗುರುಗೋವಿಂದನಣುಗಗೆ
ಸುಖ ಸಾಯುಜ್ಯ ಕೊಡುವ
ಸಕಲದೇವರ ದೇವಿ ಪಾದಕೆ ಜಯ ಜಯತು ಜಗದಾಂಬೆ ||೩||
*****

 

Tagged:

One Comment

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...