ಪ್ರಕೃತಿ ಜನ್ಯ

ವೀರಪಂಡಿತ ಶಾಸ್ತ್ರಕಾರರೆ
ಜ್ಞಾನನಿಧಿ ಋಷಿವರ್ಯರೆ,
ಹಿಂದೆ ಗತಿಸಿದ ಯೋಗಪುರುಷರೆ
ನಿಮ್ಮ ಕಷ್ಟವ ನೆನೆವೆನು

ನಿಬಿಡವಾಗಿದೆ ನೀವು ರಚಿಸಿದ
ಗ್ರಂಥರಾಶಿಯು ಧರೆಯೊಳು
ಸೃಷ್ಟಿಯಂತ್ರವ ಭೇದಿಸುವ ಘನ
ಮಥನ ರವವಿದೆ ಅದರೊಳು

ಬಂದು ಇಲ್ಲಿಗೆ ಭ್ರಾಂತರಾದಿರೊ
ಏನಿದೆನ್ನುತ ಕುಳಿತಿರೋ
ದೀರ್ಘಯೋಚನೆ ಗೆಯ್ದು ಶೋಧಿಸಿ
ಸಾಧ್ಯವಲ್ಲಿದು ಎಂದಿರೊ

ಸುಂದರದ ಈ ಕೃತಿಯ ಪರಿಕಿಸಿ
ಹಿಗ್ಗಿ ಸಂತಸಗೊಂಡಿರೊ
ಮುಂದೆ ನಡೆಯುತ ಸೋತಿರೋ, ಆ-
ನಂದವನೆ ಸವಿದುಂಡಿರೊ

ಸಿಹಿಯನುಂಡಿರೊ ಕಹಿಯನುಂಡಿರೊ
ಮೂಲವರಿಯದೆ ನೊಂದಿರೊ
ಗೆಯ್ದ ಗೆಮ್ಮೆಯ ಫಲವ ಕಾಣುವ
ಮೊದಲಿಗೇ ಮರೆಯಾದಿರೊ

ಯಾರು ಬಲ್ಲರು ನಿಮ್ಮ ಕಷ್ಟವ
ಸಾಧ್ಯವೇನದು ತಿಳಿಯಲು
ಪ್ರಕೃತಿಜನ್ಯವಿದಿಂತು ಸಾಗಿರೆ
ಜನಕಜೆಯು ಏಗೆಯ್ವಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾ ಬಾ ಓ ಬೆಳಕೇ
Next post ಮರದ ವ್ಯಥೆ

ಸಣ್ಣ ಕತೆ

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

cheap jordans|wholesale air max|wholesale jordans|wholesale jewelry|wholesale jerseys