ಕರ್ಮಯೋಗಿ ಗಾಂಧೀಜಿ

ಚಿದ್ರೂಪನಂತೆ ತೊಳ ತೊಳಗಿ ಬೆಳಗುತಿಹ
ದಿವ್ಯಜ್ಞಾನಿ ತಾತ
ಸದ್ಗುಣದ ಕಣಿಯು ಬಹುಪೂಜ್ಯನೆಂದು ಮನ
ಗಂಡೆನೆಂದೊ ಪೂತ

ನಿಜತತ್ವವರಿತು ಗುರು ಪೀಠವೇರಿ ಮೆರೆದಿರುವ
ಕರ್ಮಯೋಗಿ
ವಿಜಯವನುಗೈದೆ ಅದ್ವೈತದೊಳಗೆ ಬಿಡು
ನೀನೆ ಪರಮ ತ್ಯಾಗಿ

ಇಂದ್ರಿಯವ ಜಯಿಸಿ ಬಂಧನ ಹಾಯ್ದ ಆ-
ನಂದಮಯನು ನೀನು
ಬಂಧನದಿ ಬೆಂದ ಜಡಮತಿಯು ನಾನು ಏ-
ನೆಂದು ಬಣ್ಣಿಸುವೆನು

ಪರಮಾತ್ಮ ತನ್ನ ಮಡಿಲೊಳಗೆ ನಿನ್ನ ಲಾ-
ಲಿಸುತ ತೂಗುತಿಹನೊ
ಪರವಸ್ತುವಿಲ್ಲ ಪರಮಾತ್ಮ ತಾನೆ ತಾನೆನುತ
ಸುಮ್ಮನಿಹೆಯೊ

ಸೌಂದರ್ಯ ಸಗುಣ ನಿರ್ಗುಣನು ಸಕಲ ಚೈ-
ತನ್ಯ ತಪಸಿಯವನು
ಆನಂದಮಯನು ಸರ್ವಾತ್ಮನಾಗಿ ತಾ
ನಿಲ್ಲಿ ನಲಿಯುತಿಹನು

ಘನ ಶಾಂತಿಯೊಂದು ನಿನ್ನೊಳಗೆ ತುಂಬಿ ಕಿರು
ನಗೆಯ ಸೂಸುತಿಹುದು
ಜನಕಜೆಯ ಮನವು ಗಾಂಧೀಜಿ ನಿಮ್ಮ ಬಳಿ
ಬಳಿಯೆ ಸುತ್ತಿತಿಹುದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೊಸ ಸೂರ್ಯನುದಯಕೆ
Next post ಕಾಲ

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

cheap jordans|wholesale air max|wholesale jordans|wholesale jewelry|wholesale jerseys