ಓಲೆಗೆ-ಓಲೆ

ಶ್ರೀಮಾನ್ ಬೇಂದ್ರೆಯವರಿಂದ

ತಂಗಿ ಜಾನಕಿ ನಿನ್ನ
ವೈದೇಹದೊಲವಿನಲಿ
ಓಲೆ ಬಂದಿತು ಒಂದು
ಇತ್ತತೇಲಿ

ಯಾರಿಗಾರೋ ಎನುವ
ನಾಸ್ತಿಕತೆಯನು ನೂಕಿ
ದಾಟಿ ದಿಕ್ಕಾಲಗಳ
ಸುತ್ತು ಬೇಲಿ

ಕವಿಯು ಮಾನಸಪುತ್ರ
ಅವನು ಆಗಸದೇಹಿ
ಮಾತಿನಲೆ ಮೂಡುವಾ
ಭಾವಜೀವಿ

ಮೈಯಾಚೆ ಉಸಿರಾಚೆ
ಬಗೆಯ ಬಣ್ಣಗಳಾಚೆ
ಅವನ ಹೂ ಅರಳುವುದು
ಭಾವದೇವಿ

ನೂರಾರು ತಂಗಿಯರ
ಸಹಜ ನೇಹದಿ ಮಿಂದು
ಮಿಂಚಿನಾಚೆಯ ಬೆಳಕ
ಬಯಸಿ ಬೆಳೆದು

ದೋಷರಾಹಿತ್ಯದಾ
ಕಲ್ಪನಾರಾಜ್ಯದೊಳು
ಸಗ್ಗದೂಟವನುಣವೆ
ರೂಪು ತಳೆದು

ಅದನು ನೀ ಕಂಡವಳು
ಬೇರೆ ಕಾಣಿಕೆಯೇಕೆ?
ಕ್ಷೀರಸಾಗರದಲೆಯ
ತಲೆಯ ಪೆರೆಯೆ

ಪೂರ್ಣಿಮಾದೃಷ್ಟಿಯಲಿ
ತೆರೆದೊಂದು ಸೃಷ್ಟಿಯಲಿ
ನಿನ್ನ ನಂದನಕೇನು
ಮುಚ್ಚುಮರೆಯೆ

ಝೇಂಕೃತದ ಸುಳಿಹಿಡಿದು
ಚಿತ್ತರಂಗಕೆ ನುಗ್ಗು
ಕಮಲವನವಲ್ಲೆ
ನಿಃಸೀಮವಹುದು

ಭಾವಶಿಖರಗಳಲ್ಲೆ
ಜೀವಪುರನೆಲಸಿಹುದು
ಅದನು ನೀ ವೈದೇಹಿ
ಕಾಣಬಹುದು

ವಿಷಯ ವಿಷ ವಿಷಮವನು
ತಳ್ಳಿ ಪದತಲದಾಚೆ
ಸಪ್ತಸ್ವರ್ಗವ ಸೀಳಿ
ಮೇಲೆ ಹಾರು

ಅಲ್ಲಿರುವ ನಲಿವೊಲವು
ಇಲ್ಲಿರುವ ಬಲ ಚೆಲುವು
ಮಿಕ್ಕು ಸೂಸುವ ಹಾಗೆ
ಜಗಕೆ ಸಾರು

ಅಂಬಿಕಾತನಯದತ್ತ
ರಥಸಪ್ತಮೆ, ಸೊಲ್ಲಾಪುರ
೨೦-೦೧-೧೯೪೫
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇನಿಯಳಿಗೊಂದು ಕೊನೆಯ ಪತ್ರ !
Next post ಅಯನ

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…