ಓಲೆಗೆ-ಓಲೆ

ಶ್ರೀಮಾನ್ ಬೇಂದ್ರೆಯವರಿಂದ

ತಂಗಿ ಜಾನಕಿ ನಿನ್ನ
ವೈದೇಹದೊಲವಿನಲಿ
ಓಲೆ ಬಂದಿತು ಒಂದು
ಇತ್ತತೇಲಿ

ಯಾರಿಗಾರೋ ಎನುವ
ನಾಸ್ತಿಕತೆಯನು ನೂಕಿ
ದಾಟಿ ದಿಕ್ಕಾಲಗಳ
ಸುತ್ತು ಬೇಲಿ

ಕವಿಯು ಮಾನಸಪುತ್ರ
ಅವನು ಆಗಸದೇಹಿ
ಮಾತಿನಲೆ ಮೂಡುವಾ
ಭಾವಜೀವಿ

ಮೈಯಾಚೆ ಉಸಿರಾಚೆ
ಬಗೆಯ ಬಣ್ಣಗಳಾಚೆ
ಅವನ ಹೂ ಅರಳುವುದು
ಭಾವದೇವಿ

ನೂರಾರು ತಂಗಿಯರ
ಸಹಜ ನೇಹದಿ ಮಿಂದು
ಮಿಂಚಿನಾಚೆಯ ಬೆಳಕ
ಬಯಸಿ ಬೆಳೆದು

ದೋಷರಾಹಿತ್ಯದಾ
ಕಲ್ಪನಾರಾಜ್ಯದೊಳು
ಸಗ್ಗದೂಟವನುಣವೆ
ರೂಪು ತಳೆದು

ಅದನು ನೀ ಕಂಡವಳು
ಬೇರೆ ಕಾಣಿಕೆಯೇಕೆ?
ಕ್ಷೀರಸಾಗರದಲೆಯ
ತಲೆಯ ಪೆರೆಯೆ

ಪೂರ್ಣಿಮಾದೃಷ್ಟಿಯಲಿ
ತೆರೆದೊಂದು ಸೃಷ್ಟಿಯಲಿ
ನಿನ್ನ ನಂದನಕೇನು
ಮುಚ್ಚುಮರೆಯೆ

ಝೇಂಕೃತದ ಸುಳಿಹಿಡಿದು
ಚಿತ್ತರಂಗಕೆ ನುಗ್ಗು
ಕಮಲವನವಲ್ಲೆ
ನಿಃಸೀಮವಹುದು

ಭಾವಶಿಖರಗಳಲ್ಲೆ
ಜೀವಪುರನೆಲಸಿಹುದು
ಅದನು ನೀ ವೈದೇಹಿ
ಕಾಣಬಹುದು

ವಿಷಯ ವಿಷ ವಿಷಮವನು
ತಳ್ಳಿ ಪದತಲದಾಚೆ
ಸಪ್ತಸ್ವರ್ಗವ ಸೀಳಿ
ಮೇಲೆ ಹಾರು

ಅಲ್ಲಿರುವ ನಲಿವೊಲವು
ಇಲ್ಲಿರುವ ಬಲ ಚೆಲುವು
ಮಿಕ್ಕು ಸೂಸುವ ಹಾಗೆ
ಜಗಕೆ ಸಾರು

ಅಂಬಿಕಾತನಯದತ್ತ
ರಥಸಪ್ತಮೆ, ಸೊಲ್ಲಾಪುರ
೨೦-೦೧-೧೯೪೫
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇನಿಯಳಿಗೊಂದು ಕೊನೆಯ ಪತ್ರ !
Next post ಅಯನ

ಸಣ್ಣ ಕತೆ

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

cheap jordans|wholesale air max|wholesale jordans|wholesale jewelry|wholesale jerseys