Home / ಕವನ / ಕವಿತೆ / ಗಂಗಜ್ಜಿ

ಗಂಗಜ್ಜಿ

ಜಾಣೆ ಗಂಗವ್ವನ ಮನೆಯ ಹೊಕ್ಕು ನೋಡು
ನೀನೊಂದು ಕ್ಷಣಕಾಲವಲ್ಲಿ ಕೂಡು
ಜ್ಞಾನಮಯದಾನಂದ ಶಾಂತಿಮಯದಾನಂದ
ತಾನೆ ತಾನಾಗಿಹುದು ಪುಣ್ಯವಂತಳ ಬೀಡು

ಕಟ್ಟಿಹಾಕು ನಿನ್ನ ಮನಸು ಒಳಗೆ, ಒಂದು
ಕೆಟ್ಟ ಯೋಚನೆ ಮಾಡದಂತೆ ಘಳಿಗೆ
ಸೊಟ್ಟಮೋರೆಯ ಮಾತು, ತಳ್ಳಿಬಳ್ಳಿಯ ಮಾತು
ಎಳ್ಳಷ್ಟು ಸೇರದು ನಮ್ಮ ಗಂಗವ್ವನಿಗೆ

ಪೂರ್ಣವಿಕಸನವಾದ ಕುಸುಮದಂತೆ, ನಮ್ಮ
ಅಜ್ಜಿ ಗಂಗವ್ವನ ಮನಸು ಅಂತೆ
ಮುಸಿ ಮುಸಿ ನಸುನಗುತ ಹಸನಾಗಿ ನುಡಿಯುವಳು
ಬಂದವರನಾದರಿಸಿ ಕುಶಲವೇ ನೀವೆಂದು

ಕರ್ಮಯೋಗವನರಿತು ಬಾಳುತಿಹಳು ಜಗದ
ಮರ್ಮಂಗಳನು ತಿಳಿದು ಸುಮ್ಮನಿಹಳು
ಕ್ಷತ್ರಿಯರ ಕುಲದವಳು ವೀರಪುತ್ರರ ಮಗಳು
ಧೈರ್‍ಯವಂತಳು ಅಜ್ಜಿ ನುರಿತವಳು ಸಾಸಿಗಳು

ಹಂಗಿನನ್ನವನುಂಬ ಪ್ರಾಣಿಯಲ್ಲಾ ನಮ್ಮ
ಗಂಗಜ್ಜಿ ವೃಥ ಕಾಲ ಕಳೆವಳಲ್ಲ
ಅತ್ತಿತ್ತ ತಿರುಗದೆ ಚಿತ್ರಕಲೆಗಳ ರಚಿಸಿ
ಉತ್ತಮರಿಗದನಿತ್ತು ಕಾಲಕಳೆಯುವಳೆಲ್ಲ

ಚೌರಿ ಕೂದಲು ತುರುಬು ಸೃಷ್ಟಿಯಂತೆ, ದಿವ್ಯ
ಪಾರಿಜಾತದ ಪುಷ್ಪವೃಕ್ಷವಂತೆ
ಸಕ್ಕರಿಯ ಸರವಂತೆ, ಮಕ್ಕಳಿಗೆ ಮೆಚ್ಚಂತೆ
ಸೂಕ್ಷ್ಮಪಾಕದಿ ಮಾಳ್ಪ ಅಚ್ಚು ಕೆಲಸಗಳಂತೆ

ಚೋರ ಕೃಷ್ಣನು ಸೀರೆ ಕದ್ದುದಂತೆ, ಅಲ್ಲಿ
ಗೋಪಿಯರು ಕೈಮುಗಿದು ನಿಂತುದಂತೆ
ಶಂಕರನ ಗುಡಿಯಂತೆ, ಪೂಜೆ ವಸ್ತುಗಳಂತೆ
ಮೈಸೂರು ಮಲ್ಲಿಗೆಯ ಹಾರಗಳ ಸೊಗಸಂತೆ

ಶೃಂಗಾರವಾಗಿಹುದು ಕೌಶಲ್ಯವು ಅಲ್ಲಿ
ಸ್ವಾಮಿ ಪೂಜೆಗಳೊಡನೆ ಪುಣ್ಯಕಥೆಯು
ಸಂಗೀತ ಸಾಹಿತ್ಯ ಚಿತ್ರ ಶಿಲ್ಪದ ಕಲೆಯು
ತುಂಬಿ ತುಳುಕುತಲಿಹುದು ಮಾತಿನೊಳು ರಸಿಕತೆಯು

ಸದ್ದು ಸಪ್ಪುಳ ಇಲ್ಲದಂತೆ ಪೋದೆ ನಮ್ಮ
ಅಜ್ಜಿ ಗಂಗವ್ವನಿಗೆ ಪ್ರೇಮವಾದೆ
ಮುದ್ದು ಸುರಿಸುತ ಅಲ್ಲಿ ನಾನೊಬ್ಬ ಮಗಳಾದೆ
ಬುದ್ಧಿವಂತಳ ಕಂಡು ಬೆಪ್ಪಾದೆ ಬೆರಗಾದೆ!

ಹಡೆದವ್ವ ದಿನದಿನಕೆ ಮರೆಯುತಿಹಳು, ನಮ್ಮ
ಗಂಗಜ್ಜಿ ಮಾಡಿದಳು ಇಂತು ಮರುಳು
ನನ್ನಮ್ಮ ಎಂದು ಬಹುಲಾಲನೆಯ ಮಾಡುವಳು
ಬಾ ಬಾರೆ ಜನಕಜೇ ಉಣ್ಣೆಂದು ಕರೆಯುವಳು
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...