Home / ಕವನ / ಕವಿತೆ / ಗಂಗಜ್ಜಿ

ಗಂಗಜ್ಜಿ

ಜಾಣೆ ಗಂಗವ್ವನ ಮನೆಯ ಹೊಕ್ಕು ನೋಡು
ನೀನೊಂದು ಕ್ಷಣಕಾಲವಲ್ಲಿ ಕೂಡು
ಜ್ಞಾನಮಯದಾನಂದ ಶಾಂತಿಮಯದಾನಂದ
ತಾನೆ ತಾನಾಗಿಹುದು ಪುಣ್ಯವಂತಳ ಬೀಡು

ಕಟ್ಟಿಹಾಕು ನಿನ್ನ ಮನಸು ಒಳಗೆ, ಒಂದು
ಕೆಟ್ಟ ಯೋಚನೆ ಮಾಡದಂತೆ ಘಳಿಗೆ
ಸೊಟ್ಟಮೋರೆಯ ಮಾತು, ತಳ್ಳಿಬಳ್ಳಿಯ ಮಾತು
ಎಳ್ಳಷ್ಟು ಸೇರದು ನಮ್ಮ ಗಂಗವ್ವನಿಗೆ

ಪೂರ್ಣವಿಕಸನವಾದ ಕುಸುಮದಂತೆ, ನಮ್ಮ
ಅಜ್ಜಿ ಗಂಗವ್ವನ ಮನಸು ಅಂತೆ
ಮುಸಿ ಮುಸಿ ನಸುನಗುತ ಹಸನಾಗಿ ನುಡಿಯುವಳು
ಬಂದವರನಾದರಿಸಿ ಕುಶಲವೇ ನೀವೆಂದು

ಕರ್ಮಯೋಗವನರಿತು ಬಾಳುತಿಹಳು ಜಗದ
ಮರ್ಮಂಗಳನು ತಿಳಿದು ಸುಮ್ಮನಿಹಳು
ಕ್ಷತ್ರಿಯರ ಕುಲದವಳು ವೀರಪುತ್ರರ ಮಗಳು
ಧೈರ್‍ಯವಂತಳು ಅಜ್ಜಿ ನುರಿತವಳು ಸಾಸಿಗಳು

ಹಂಗಿನನ್ನವನುಂಬ ಪ್ರಾಣಿಯಲ್ಲಾ ನಮ್ಮ
ಗಂಗಜ್ಜಿ ವೃಥ ಕಾಲ ಕಳೆವಳಲ್ಲ
ಅತ್ತಿತ್ತ ತಿರುಗದೆ ಚಿತ್ರಕಲೆಗಳ ರಚಿಸಿ
ಉತ್ತಮರಿಗದನಿತ್ತು ಕಾಲಕಳೆಯುವಳೆಲ್ಲ

ಚೌರಿ ಕೂದಲು ತುರುಬು ಸೃಷ್ಟಿಯಂತೆ, ದಿವ್ಯ
ಪಾರಿಜಾತದ ಪುಷ್ಪವೃಕ್ಷವಂತೆ
ಸಕ್ಕರಿಯ ಸರವಂತೆ, ಮಕ್ಕಳಿಗೆ ಮೆಚ್ಚಂತೆ
ಸೂಕ್ಷ್ಮಪಾಕದಿ ಮಾಳ್ಪ ಅಚ್ಚು ಕೆಲಸಗಳಂತೆ

ಚೋರ ಕೃಷ್ಣನು ಸೀರೆ ಕದ್ದುದಂತೆ, ಅಲ್ಲಿ
ಗೋಪಿಯರು ಕೈಮುಗಿದು ನಿಂತುದಂತೆ
ಶಂಕರನ ಗುಡಿಯಂತೆ, ಪೂಜೆ ವಸ್ತುಗಳಂತೆ
ಮೈಸೂರು ಮಲ್ಲಿಗೆಯ ಹಾರಗಳ ಸೊಗಸಂತೆ

ಶೃಂಗಾರವಾಗಿಹುದು ಕೌಶಲ್ಯವು ಅಲ್ಲಿ
ಸ್ವಾಮಿ ಪೂಜೆಗಳೊಡನೆ ಪುಣ್ಯಕಥೆಯು
ಸಂಗೀತ ಸಾಹಿತ್ಯ ಚಿತ್ರ ಶಿಲ್ಪದ ಕಲೆಯು
ತುಂಬಿ ತುಳುಕುತಲಿಹುದು ಮಾತಿನೊಳು ರಸಿಕತೆಯು

ಸದ್ದು ಸಪ್ಪುಳ ಇಲ್ಲದಂತೆ ಪೋದೆ ನಮ್ಮ
ಅಜ್ಜಿ ಗಂಗವ್ವನಿಗೆ ಪ್ರೇಮವಾದೆ
ಮುದ್ದು ಸುರಿಸುತ ಅಲ್ಲಿ ನಾನೊಬ್ಬ ಮಗಳಾದೆ
ಬುದ್ಧಿವಂತಳ ಕಂಡು ಬೆಪ್ಪಾದೆ ಬೆರಗಾದೆ!

ಹಡೆದವ್ವ ದಿನದಿನಕೆ ಮರೆಯುತಿಹಳು, ನಮ್ಮ
ಗಂಗಜ್ಜಿ ಮಾಡಿದಳು ಇಂತು ಮರುಳು
ನನ್ನಮ್ಮ ಎಂದು ಬಹುಲಾಲನೆಯ ಮಾಡುವಳು
ಬಾ ಬಾರೆ ಜನಕಜೇ ಉಣ್ಣೆಂದು ಕರೆಯುವಳು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...