Home / ಕವನ / ಕವಿತೆ / ಹಳ್ಳಿಯ ಜೀವನ

ಹಳ್ಳಿಯ ಜೀವನ

ಎತ್ತಿನ ಕತ್ತಿನ ಗೆಜ್ಜೆಯ ಸರವು
ಮೊರೆಯಿತು ಘಲ್ ಘಲ್ ಘಲ್ಲೆಂದು
ಹಳ್ಳಿಯ ಸರಳದ ಜೀವನ ನೆನೆದು
ಕುಣಿಯಿತು ಎನ್ನೆದೆ ಥೈ ಎಂದು

ಸೂರ್ಯನ ಅಸ್ತಮ ಸಮಯದ ಚೆಲುವು
ಪಚ್ಚೆಯ ಪಯಿರಿನ ನೋಟದ ಸುಖವು
ಹಕ್ಕಿಗಳೋಟದ ಗುಂಪಿನ ಸೊಗವು
ವಿಶ್ವವ ತುಂಬಿದ ಆಗಸವು

ಏರಿಯ ನೀರಿನ ಅಲೆಗಳ ತೆರೆಯು
ಗದ್ದೆಯ ಬದುವಿನ ಸಾಲಿಗೆ ಜನರು
ವನಿತೆಯರಾಡುವ ಶ್ರಾವ್ಯದ ಪದವು
ಶ್ರಮೆಯನು ಮರೆಸುವ ಆ ವಿಧವು

ಕಣ್ಣಿಗೆ ಬಣ್ಣದ ಕಾಮನಬಿಲ್ಲು
ಬಾಲಕರಾಡುವ ಚಿಣ್ಣಿಯ ಕೋಲು
ಮಲ್ಲಿಗೆ ಚಪ್ಪರ ಮನೆಗಳ ಮುಂದೆ
ಊರಿಗೆ ಮರಳುವ ತುರು ಮಂದೆ

ಮಾವಿನ ತೋಪಿನ ಮರಗಳ ತಂಪು
ಕೋಗಿಲೆ ಕೂಗುವ ಶಬ್ದದ ಇಂಪು
ತಾವರೆ ಪುಷ್ಪದ ಕೊಳಗಳ ತುಳುಕು
ಚಂದ್ರನ ಉದಯದ ಆ ಬೆಳಕು

ಊರಿನ ಮುಂದಿನ ದೇವರ ಗುಡಿಯು
ಬಕುತಿಯ ಪೂಜೆಯ ಗಂಟೆಯ ದನಿಯು
ಸ್ವಾಮಿಗೆ ಚಿಗುರಿನ ಉರುವೆಯ ಮೊರೆಯು
ಊರನು ಸುತ್ತುವ ಪಲ್ಲಕಿಯು

ಹೊರೆಗಳ ಕಣಗಳಿಗೊಯ್ಯುವ ಓಟ
ಗ್ರಾಮದಿ ರೈತರ ಮನೆಗಳ ಊಟ
ಥಾಕಿಟ ಥಾಕಿಟ ಶಬ್ದದ ಕೂಟ
ಝೋಕಿಲಿ ಹಾಕುವ ಕೋಲಾಟ

ಹಳ್ಳಿಯ ಜನಗಳ ಬೀಸುವ ಪದವು
ಬಿತ್ತಿದ ಹೊಲಗಳ ತೆನೆಗಳ ಕೊಯ್ಲು
ಕಣದಲಿ ರಾಶಿಯನಳೆಯುವ ಮುದವು
ಜನಕಜೆ ಮನಕದು ಬಲು ಹಿತವು
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...