Home / ಕವನ / ಕವಿತೆ / ನರಸಿಯ ಪರಿಸೆ

ನರಸಿಯ ಪರಿಸೆ

ಹದಿನಾಲ್ಕು ಹರೆಯದ ನರಸಿ ಬಲು ಚೆಲುವೆ
ಮುದವಾಗುತಿದೆ ಇವಳ ನಡೆ ನುಡಿಯ ನೋಡೆ
ಹರುಕು ಕಂಚುಕ ತೊಟ್ಟು ಮಲಿನಾಂಬರವುಟ್ಟು
ಉಡುಗುವಳು ವರ್ತನೆಯ ಮನೆಗಳೊಳು ಕಸವ

ಮುಕುರವೇತಕೆ ಇವಳ ಮೂಗೆ ಸಂಪಿಗೆ ಮೊಗ್ಗು
ಪೊಳೆವ ಕಂಗಳ ತುಂಬಿ ತುಳುಕುತಿದೆ ಹಿಗ್ಗು
ಚೆಲ್ವ ಪಣೆಯೊಳು ಬಿದ್ದು ಅಲುಗಾಡುತಿವೆ ಕುರುಳು
ರಸಿಕತೆಯು ಚಿಮ್ಮುತಿದೆ ಇವಳ ಮಾತಿನೊಳು

ತೊಳೆಯುವಳು ಮುಸುರೆಗಳ ಥಳಥಳನೆ ಕ್ಷಣದಿ
ಓಡುವಳು ಮತ್ತೊಂದು ಮನೆಗಿವಳು ಮುದದಿ
ಬೆಳಸುವಳು ಗೆಳೆತನವ ಹುಡುಗರೊಳು ಬೆರೆತು
ದುಡಿತದೊಳಗಿದ್ದರೂ ದುಗುಡವನು ಮರೆತು

ಬಾರದಿರಲೊಂದು ದಿನ ಮನೆಗೆಲಸಕಿವಳು
ಮೀರಿದಳೆ? ಆಜ್ಞೆಯನು ಎನುತ ದುಡುಕಿದೆನು
ಬರಲಿಲ್ಲವಿಂದೇಕೆ ಮನೆಗೆಲಸಕೆಲೆ ನರಸಿ,
ತಿರುದು ತಿಂಬುವ ನಿನಗೆ ಜಂಬವೇ ಮೂಳಿ!

ಹಿಡಿಯುವೆನು ನಾ ನಿನ್ನ ಕೂಲಿಯೊಳಗೊಂದಾಣೆ
ಬಿಡಿಸುವೆನು ನೀನಿನ್ನು ಬೇಕಿಲ್ಲ ನಡಿ ಎಂದೆ
ಸಿಟ್ಟಾಗ ಬೇಡಮ್ಮ ತಾಸು ತಡವಾಯ್ತು
ಹಿಟ್ಟಿನಾರತಿ ಹೊತ್ತು ಗುಡಿಗೆ ಹೋಗಿದ್ದೆ

ಬೀರಪ್ಪ ಹೊರಟಿದ್ದ, ತೇರು ನೋಡಲು ಹೋದೆ
ಎಲೆ ಪೂಜೆ ಕಟ್ಟಿದರು ತಡವಾಯಿತಲ್ಲಿ
ಎಡೆಯನಿಟ್ಟವು ಎಲ್ಲ ಸ್ವಾಮಿಗೊಂದೊಂದಾಗಿ
ನೆನೆಯಕ್ಕಿ ತಂಬಿಟ್ಟು ಕಾಯಿ ಬಾಳೇಹಣ್ಣು

ಉಡಿಯೊಳಗೆ ಮಡಗಿದ್ದ ಚೂರು ಕೊಬ್ಬರಿಯೊಂದು
ತೆಗೆದುಕೊಟ್ಟಳು ನನಗೆ ಪರಸಾದವೆಂದು
ತೇರಿನೊಳು ಬೀರಪ್ಪಗಾರತಿಯ ಬೆಳಗಿದರು
ಹೊಂಬಾಳೆ ದವನಗಳ ನಾವು ಸೂರಿದೆವು

ತೇರು ಕದಲಿಸುವಾಗ ಭೋರೆಂದು ವುರಿಮೆಗಳು
ಕುಣಿಕುಣಿದು ಜನರೆಲ್ಲ ಕೇಕೆ ಹಾಕಿದರು
ನಾಗಮ್ಮ ಕರಿಯಮ್ಮ ಸಿತ್ತಮ್ಮ ಸಿರಿಯಮ್ಮ
ಪದಗಳನು ಹಾಡಿದರು ಏನೇಳಲಮ್ಮ!

ಹೊರಟಿಲ್ಲವೇನಮ್ಮ ನೀನಿನ್ನು ಪರಿಸೆಗೆ
ತರಿಸಮ್ಮ ಕಾಯೊಂದ ಇರಲಿ ದಿನಗೆಲಸ
ಬಾರಮ್ಮ ಸ್ವಾಮಿಯ ತೇರ ನೋಡಮ್ಮ
ಊರೂರೆ ಬಂದಿಹುದು ನೀನಿಲ್ಲೆ ಇರುವೆ

ತೊಡಿಸಮ್ಮ ಪರಿಸೆಯೊಳು ನನ ಕೈಗೆ ಬಳೆಗಳನು
ಕೊಡಿಸಮ್ಮ ಮಕ್ಕಳಿಗೆ ಗೊಂಬೆಗಳನೆಂದಳು
ಆಗಿಲ್ಲವೇ ನರಸಿ ಮದುವೆ ನಿನಗೆಂದರೆ
ಸೆರಗ ಬಾಯಿಗೆ ಮುಚ್ಚಿ ಸಿರಬಾಗಿ ನಗುವಳು

ಮದುವೆಯೊಳಗಿನ ತತ್ವ ಗೊತ್ತಿಲ್ಲ ಪಸುಳೆಗೆ
ನಿಸ್ಪೃಹದ ಮನಸಿನೊಳು ನಲಿದಾಡುತಿಹಳು
ಇರಲಿರಲಿ ನರಸೀ ಮದುವೆಯಂತಿರಲಿ
ಬೀರಪ್ಪನಾ ಪರಿಸೆ ಬಂಗಾರವಾದೀತು

ನಿನ್ನ ಜೀವನ ಬೆಳಸು ಬೆಳೆಯುತಿರಲಿಂತೆ
ನಿನ್ನ ರಸಿಕತೆ ಬೆಳಗಿ ಬೆಳಗುತಿರಲಿಂತೆ
ನಿನ್ನ ದುಡಿತವು ಜನಕೆ ಸಲ್ಲುತಿರಲಿಂತೆ
ನಿನ್ನ ಪರಿಸೆಯ ಕುಣಿತ ಕುಣಿಯುತಿರಲಿಂತೆ

ಬಂಧನದಿ ಸಿಲುಕಿದಾ ಬಾಳಿನನುಭವಕಿಂತ
ಎಳೆತನದ ಕುಣಿತವೇ ಜನಕಜೆಗೆ ಹಿತವು
*****

Tagged:

Leave a Reply

Your email address will not be published. Required fields are marked *

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...

ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲಿ ಮನಸ್ಸು, ದೇಹ ಎಲ್ಲವೂ ಕೊರಡಿನಂತಾ...