ನರಸಿಯ ಪರಿಸೆ

ಹದಿನಾಲ್ಕು ಹರೆಯದ ನರಸಿ ಬಲು ಚೆಲುವೆ
ಮುದವಾಗುತಿದೆ ಇವಳ ನಡೆ ನುಡಿಯ ನೋಡೆ
ಹರುಕು ಕಂಚುಕ ತೊಟ್ಟು ಮಲಿನಾಂಬರವುಟ್ಟು
ಉಡುಗುವಳು ವರ್ತನೆಯ ಮನೆಗಳೊಳು ಕಸವ

ಮುಕುರವೇತಕೆ ಇವಳ ಮೂಗೆ ಸಂಪಿಗೆ ಮೊಗ್ಗು
ಪೊಳೆವ ಕಂಗಳ ತುಂಬಿ ತುಳುಕುತಿದೆ ಹಿಗ್ಗು
ಚೆಲ್ವ ಪಣೆಯೊಳು ಬಿದ್ದು ಅಲುಗಾಡುತಿವೆ ಕುರುಳು
ರಸಿಕತೆಯು ಚಿಮ್ಮುತಿದೆ ಇವಳ ಮಾತಿನೊಳು

ತೊಳೆಯುವಳು ಮುಸುರೆಗಳ ಥಳಥಳನೆ ಕ್ಷಣದಿ
ಓಡುವಳು ಮತ್ತೊಂದು ಮನೆಗಿವಳು ಮುದದಿ
ಬೆಳಸುವಳು ಗೆಳೆತನವ ಹುಡುಗರೊಳು ಬೆರೆತು
ದುಡಿತದೊಳಗಿದ್ದರೂ ದುಗುಡವನು ಮರೆತು

ಬಾರದಿರಲೊಂದು ದಿನ ಮನೆಗೆಲಸಕಿವಳು
ಮೀರಿದಳೆ? ಆಜ್ಞೆಯನು ಎನುತ ದುಡುಕಿದೆನು
ಬರಲಿಲ್ಲವಿಂದೇಕೆ ಮನೆಗೆಲಸಕೆಲೆ ನರಸಿ,
ತಿರುದು ತಿಂಬುವ ನಿನಗೆ ಜಂಬವೇ ಮೂಳಿ!

ಹಿಡಿಯುವೆನು ನಾ ನಿನ್ನ ಕೂಲಿಯೊಳಗೊಂದಾಣೆ
ಬಿಡಿಸುವೆನು ನೀನಿನ್ನು ಬೇಕಿಲ್ಲ ನಡಿ ಎಂದೆ
ಸಿಟ್ಟಾಗ ಬೇಡಮ್ಮ ತಾಸು ತಡವಾಯ್ತು
ಹಿಟ್ಟಿನಾರತಿ ಹೊತ್ತು ಗುಡಿಗೆ ಹೋಗಿದ್ದೆ

ಬೀರಪ್ಪ ಹೊರಟಿದ್ದ, ತೇರು ನೋಡಲು ಹೋದೆ
ಎಲೆ ಪೂಜೆ ಕಟ್ಟಿದರು ತಡವಾಯಿತಲ್ಲಿ
ಎಡೆಯನಿಟ್ಟವು ಎಲ್ಲ ಸ್ವಾಮಿಗೊಂದೊಂದಾಗಿ
ನೆನೆಯಕ್ಕಿ ತಂಬಿಟ್ಟು ಕಾಯಿ ಬಾಳೇಹಣ್ಣು

ಉಡಿಯೊಳಗೆ ಮಡಗಿದ್ದ ಚೂರು ಕೊಬ್ಬರಿಯೊಂದು
ತೆಗೆದುಕೊಟ್ಟಳು ನನಗೆ ಪರಸಾದವೆಂದು
ತೇರಿನೊಳು ಬೀರಪ್ಪಗಾರತಿಯ ಬೆಳಗಿದರು
ಹೊಂಬಾಳೆ ದವನಗಳ ನಾವು ಸೂರಿದೆವು

ತೇರು ಕದಲಿಸುವಾಗ ಭೋರೆಂದು ವುರಿಮೆಗಳು
ಕುಣಿಕುಣಿದು ಜನರೆಲ್ಲ ಕೇಕೆ ಹಾಕಿದರು
ನಾಗಮ್ಮ ಕರಿಯಮ್ಮ ಸಿತ್ತಮ್ಮ ಸಿರಿಯಮ್ಮ
ಪದಗಳನು ಹಾಡಿದರು ಏನೇಳಲಮ್ಮ!

ಹೊರಟಿಲ್ಲವೇನಮ್ಮ ನೀನಿನ್ನು ಪರಿಸೆಗೆ
ತರಿಸಮ್ಮ ಕಾಯೊಂದ ಇರಲಿ ದಿನಗೆಲಸ
ಬಾರಮ್ಮ ಸ್ವಾಮಿಯ ತೇರ ನೋಡಮ್ಮ
ಊರೂರೆ ಬಂದಿಹುದು ನೀನಿಲ್ಲೆ ಇರುವೆ

ತೊಡಿಸಮ್ಮ ಪರಿಸೆಯೊಳು ನನ ಕೈಗೆ ಬಳೆಗಳನು
ಕೊಡಿಸಮ್ಮ ಮಕ್ಕಳಿಗೆ ಗೊಂಬೆಗಳನೆಂದಳು
ಆಗಿಲ್ಲವೇ ನರಸಿ ಮದುವೆ ನಿನಗೆಂದರೆ
ಸೆರಗ ಬಾಯಿಗೆ ಮುಚ್ಚಿ ಸಿರಬಾಗಿ ನಗುವಳು

ಮದುವೆಯೊಳಗಿನ ತತ್ವ ಗೊತ್ತಿಲ್ಲ ಪಸುಳೆಗೆ
ನಿಸ್ಪೃಹದ ಮನಸಿನೊಳು ನಲಿದಾಡುತಿಹಳು
ಇರಲಿರಲಿ ನರಸೀ ಮದುವೆಯಂತಿರಲಿ
ಬೀರಪ್ಪನಾ ಪರಿಸೆ ಬಂಗಾರವಾದೀತು

ನಿನ್ನ ಜೀವನ ಬೆಳಸು ಬೆಳೆಯುತಿರಲಿಂತೆ
ನಿನ್ನ ರಸಿಕತೆ ಬೆಳಗಿ ಬೆಳಗುತಿರಲಿಂತೆ
ನಿನ್ನ ದುಡಿತವು ಜನಕೆ ಸಲ್ಲುತಿರಲಿಂತೆ
ನಿನ್ನ ಪರಿಸೆಯ ಕುಣಿತ ಕುಣಿಯುತಿರಲಿಂತೆ

ಬಂಧನದಿ ಸಿಲುಕಿದಾ ಬಾಳಿನನುಭವಕಿಂತ
ಎಳೆತನದ ಕುಣಿತವೇ ಜನಕಜೆಗೆ ಹಿತವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏನೆಂಬೆ…
Next post ದೂರ ತೀರ ಯಾನ

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…